<p><strong>ಕೋಲಾರ</strong>: ತಾಲ್ಲೂಕಿನ ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಅವರ ಪುತ್ರ ಮೇಘಾವರ್ಷ ಮೇಲೆ ಹಲ್ಲೆ ನಡೆದಿದೆ.</p><p>ಗ್ರಾಮದ ಮುನೇಶ್ವರ ದೇವಸ್ಥಾನದಲ್ಲಿ ಧ್ವನಿವರ್ಧಕ (ಮೈಕ್) ಹಾಕಿದ್ದರು. ಓದಲು ತೊಂದರೆ ಆಗುತ್ತಿದ್ದು, ಸೌಂಡ್ ಕಡಿಮೆ ಮಾಡುವಂತೆ ರಾಮಯ್ಯ ಮನವಿ ಮಾಡಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ತಗಾದೆ ತೆಗೆದ ಗ್ರಾಮದ ಮೂವರು ರಾಮಯ್ಯ ಹಾಗೂ ಮೇಘಾವರ್ಷ ಮೇಲೆ ಹಲ್ಲೆ ನಡೆಸಿದ್ದಾರೆ.</p><p>‘ಗ್ರಾಮದ ಮಂಜುನಾಥ್, ಭೈರಪ್ಪ ಹಾಗೂ ಸುಬ್ಬು ಎಂಬುವರು ರಾಮಯ್ಯ ಮೇಲೆ ಹಲ್ಲೆ ನಡೆಸಿದ್ದಾರೆ. ಮಂಜುನಾಥ್ನನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ‘ಪ್ರಜಾವಾಣಿ’ಗೆ ತಿಳಿಸಿದರು. </p><p>ರಾಮಯ್ಯ ಅವರ ಕಣ್ಣಿಗೆ ಗಾಯವಾಗಿದ್ದು, ಮೊದಲು ನಗರದ ಎಸ್ಎನ್ಆರ್ ಜಿಲ್ಲಾಸ್ಪತ್ರೆ, ಬಳಿಕ ನೇತ್ರದೀಪ ಕಣ್ಣಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದರು.</p><p>ಆಸ್ಪತ್ರೆಗೆ ಎಸ್ಪಿ ನಾರಾಯಣ ಭೇಟಿ ನೀಡಿದ್ದರು. </p><p>ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೋರಾಟಗಾರ ರಾಮಯ್ಯ ಅವರು ಪಾಪರಾಜನಹಳ್ಳಿ ಸಮೀಪದ ‘ಬುಡ್ಡಿದೀಪ’ ನಿವಾಸಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ತಾಲ್ಲೂಕಿನ ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಹಾಗೂ ಅವರ ಪುತ್ರ ಮೇಘಾವರ್ಷ ಮೇಲೆ ಹಲ್ಲೆ ನಡೆದಿದೆ.</p><p>ಗ್ರಾಮದ ಮುನೇಶ್ವರ ದೇವಸ್ಥಾನದಲ್ಲಿ ಧ್ವನಿವರ್ಧಕ (ಮೈಕ್) ಹಾಕಿದ್ದರು. ಓದಲು ತೊಂದರೆ ಆಗುತ್ತಿದ್ದು, ಸೌಂಡ್ ಕಡಿಮೆ ಮಾಡುವಂತೆ ರಾಮಯ್ಯ ಮನವಿ ಮಾಡಲು ಹೋಗಿದ್ದಾರೆ. ಈ ಸಂದರ್ಭದಲ್ಲಿ ತಗಾದೆ ತೆಗೆದ ಗ್ರಾಮದ ಮೂವರು ರಾಮಯ್ಯ ಹಾಗೂ ಮೇಘಾವರ್ಷ ಮೇಲೆ ಹಲ್ಲೆ ನಡೆಸಿದ್ದಾರೆ.</p><p>‘ಗ್ರಾಮದ ಮಂಜುನಾಥ್, ಭೈರಪ್ಪ ಹಾಗೂ ಸುಬ್ಬು ಎಂಬುವರು ರಾಮಯ್ಯ ಮೇಲೆ ಹಲ್ಲೆ ನಡೆಸಿದ್ದಾರೆ. ಮಂಜುನಾಥ್ನನ್ನು ಬಂಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ನಾರಾಯಣ ‘ಪ್ರಜಾವಾಣಿ’ಗೆ ತಿಳಿಸಿದರು. </p><p>ರಾಮಯ್ಯ ಅವರ ಕಣ್ಣಿಗೆ ಗಾಯವಾಗಿದ್ದು, ಮೊದಲು ನಗರದ ಎಸ್ಎನ್ಆರ್ ಜಿಲ್ಲಾಸ್ಪತ್ರೆ, ಬಳಿಕ ನೇತ್ರದೀಪ ಕಣ್ಣಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದರು.</p><p>ಆಸ್ಪತ್ರೆಗೆ ಎಸ್ಪಿ ನಾರಾಯಣ ಭೇಟಿ ನೀಡಿದ್ದರು. </p><p>ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೋರಾಟಗಾರ ರಾಮಯ್ಯ ಅವರು ಪಾಪರಾಜನಹಳ್ಳಿ ಸಮೀಪದ ‘ಬುಡ್ಡಿದೀಪ’ ನಿವಾಸಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>