‘ಜಿಲ್ಲೆಯಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಬೆಳೆಗಳು ಚೆನ್ನಾಗಿವೆ. ರಾಗಿ, ನೆಲಗಡಲೆ ಸೇರಿದಂತೆ ಎಲ್ಲಾ ಬೆಳೆಗಳು ಹಸಿರಾಗಿ ಬೆಳೆದು ನಿಂತಿವೆ. ರೈತರು ಈ ಬಾರಿ ಹೆಚ್ಚು ಫಸಲಿನ ನಿರೀಕ್ಷೆಯಲ್ಲಿದ್ದಾರೆ. ಮಳೆಯಿಂದ ಜಿಲ್ಲೆಯ ಕೆಲ ಕೆರೆಗಳು ತುಂಬಿವೆ. ಮತ್ತೆ ಕೆಲ ಕೆರೆಗಳಿಗೆ ಅರ್ಧದಷ್ಟು ನೀರು ಬಂದಿದೆ. ಕೆ.ಸಿ ವ್ಯಾಲಿ ಯೋಜನೆ ನೀರಿನಿಂದ ಈಗಾಗಲೇ 50 ಕೆರೆ ತುಂಬಿವೆ. ಉಳಿದ ಕೆರೆಗಳನ್ನು ತುಂಬಿಸಲಾಗುವುದು’ ಎಂದರು.