<p><strong>ಕೋಲಾರ: </strong>ಅಯೋಧ್ಯೆ ಬಲಿದಾನ ದಿವಸ್ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಸಹಯೋಗದಲ್ಲಿ ಇಲ್ಲಿನ ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಸೋಮವಾರ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p>ಶಿಬಿರದಲ್ಲಿ ಮಾತನಾಡಿದ ಬಜರಂಗ ದಳ ಜಿಲ್ಲಾ ಘಟಕದ ಸಂಚಾಲಕ ಬಾಲಾಜಿ, ‘ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪುಣ್ಯ ಭೂಮಿಯ ರಕ್ಷಣೆಗಾಗಿ ಇದೇ ದಿನ 1992ರಲ್ಲಿ ಹಲವರು ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದರು’ ಎಂದು ಹೇಳಿದರು.</p>.<p>‘ಆ ಹೋರಾಟಗಾರರ ಪ್ರಾಣಾರ್ಪಣೆಯಿಂದ ಇಂದು ಅಯೋಧ್ಯೆಯು ರಾಮನ ಜನ್ಮ ಭೂಮಿ ಎಂಬ ಮಾನ್ಯತೆ ಪಡೆದುಕೊಂಡಿದೆ. ಅಲ್ಲಿ ರಾಮನ ಬೃಹತ್ ದೇವಾಲಯ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿದ್ದು, ಇದು ರಾಮ ಭಕ್ತರಿಗೆ ಸಿಕ್ಕ ಗೆಲುವು’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>‘ರಾಮಮಂದಿರ ನಿರ್ಮಾಣವು ತಮ್ಮ ಧ್ಯೇಯವೆಂದು ಅನೇಕರು ಹೋರಾಟದಲ್ಲಿ ಪಾಲ್ಗೊಂಡಿದ್ದರು. ಇಂದು ವಿವಾದಿತ ಜಾಗವು ರಾಮನ ಜನ್ಮ ಭೂಮಿ ಎಂದು ಹೇಳಲಾಗಿದ್ದು, ಇದು ರಾಮ ಭಕ್ತರಿಗೆ ಸಿಕ್ಕ ಜಯ’ ಎಂದು ಬಜರಂಗ ದಳ ಜಿಲ್ಲಾ ಸಂಚಾಲಕ ಬಾಬು ಅಭಿಪ್ರಾಯಪಟ್ಟರು.</p>.<p>‘ಅಯೋಧ್ಯೆಯಲ್ಲಿ ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಸುಂದರ ದೇವಾಲಯ ನಿರ್ಮಾಣವಾಗುತ್ತಿದೆ. ನೂರಾರು ವರ್ಷಗಳ ಹೋರಾಟಕ್ಕೆ ಈಗ ಪ್ರತಿಫಲ ಸಿಕ್ಕಿದಂತಾಗಿದೆ’ ಎಂದು ಬಣ್ಣಿಸಿದರು.</p>.<p>ಸಂಘಟನೆ ಮುಖಂಡರಾದ ವಿಜಯಕುಮಾರ್, ಅಪ್ಪಿ, ವಿಶ್ವನಾಥ್, ವಿನಯ್, ಮಹೇಶ್, ಸಾಯಿ ಸುಮನ್, ಗಂಗಾಧರ್, ಪವನ್, ವಿಶ್ವ, ಮಂಜು, ಕಾರ್ತಿಕ್, ರಾಜೇಶ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ಅಯೋಧ್ಯೆ ಬಲಿದಾನ ದಿವಸ್ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳದ ಸಹಯೋಗದಲ್ಲಿ ಇಲ್ಲಿನ ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಸೋಮವಾರ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.</p>.<p>ಶಿಬಿರದಲ್ಲಿ ಮಾತನಾಡಿದ ಬಜರಂಗ ದಳ ಜಿಲ್ಲಾ ಘಟಕದ ಸಂಚಾಲಕ ಬಾಲಾಜಿ, ‘ಮರ್ಯಾದಾ ಪುರುಷೋತ್ತಮ ಶ್ರೀರಾಮನ ಪುಣ್ಯ ಭೂಮಿಯ ರಕ್ಷಣೆಗಾಗಿ ಇದೇ ದಿನ 1992ರಲ್ಲಿ ಹಲವರು ಹೋರಾಟ ಮಾಡಿ ಪ್ರಾಣ ತ್ಯಾಗ ಮಾಡಿದರು’ ಎಂದು ಹೇಳಿದರು.</p>.<p>‘ಆ ಹೋರಾಟಗಾರರ ಪ್ರಾಣಾರ್ಪಣೆಯಿಂದ ಇಂದು ಅಯೋಧ್ಯೆಯು ರಾಮನ ಜನ್ಮ ಭೂಮಿ ಎಂಬ ಮಾನ್ಯತೆ ಪಡೆದುಕೊಂಡಿದೆ. ಅಲ್ಲಿ ರಾಮನ ಬೃಹತ್ ದೇವಾಲಯ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿದ್ದು, ಇದು ರಾಮ ಭಕ್ತರಿಗೆ ಸಿಕ್ಕ ಗೆಲುವು’ ಎಂದು ಸಂತಸ ವ್ಯಕ್ತಪಡಿಸಿದರು.</p>.<p>‘ರಾಮಮಂದಿರ ನಿರ್ಮಾಣವು ತಮ್ಮ ಧ್ಯೇಯವೆಂದು ಅನೇಕರು ಹೋರಾಟದಲ್ಲಿ ಪಾಲ್ಗೊಂಡಿದ್ದರು. ಇಂದು ವಿವಾದಿತ ಜಾಗವು ರಾಮನ ಜನ್ಮ ಭೂಮಿ ಎಂದು ಹೇಳಲಾಗಿದ್ದು, ಇದು ರಾಮ ಭಕ್ತರಿಗೆ ಸಿಕ್ಕ ಜಯ’ ಎಂದು ಬಜರಂಗ ದಳ ಜಿಲ್ಲಾ ಸಂಚಾಲಕ ಬಾಬು ಅಭಿಪ್ರಾಯಪಟ್ಟರು.</p>.<p>‘ಅಯೋಧ್ಯೆಯಲ್ಲಿ ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಸುಂದರ ದೇವಾಲಯ ನಿರ್ಮಾಣವಾಗುತ್ತಿದೆ. ನೂರಾರು ವರ್ಷಗಳ ಹೋರಾಟಕ್ಕೆ ಈಗ ಪ್ರತಿಫಲ ಸಿಕ್ಕಿದಂತಾಗಿದೆ’ ಎಂದು ಬಣ್ಣಿಸಿದರು.</p>.<p>ಸಂಘಟನೆ ಮುಖಂಡರಾದ ವಿಜಯಕುಮಾರ್, ಅಪ್ಪಿ, ವಿಶ್ವನಾಥ್, ವಿನಯ್, ಮಹೇಶ್, ಸಾಯಿ ಸುಮನ್, ಗಂಗಾಧರ್, ಪವನ್, ವಿಶ್ವ, ಮಂಜು, ಕಾರ್ತಿಕ್, ರಾಜೇಶ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>