‘ಜನ ಆರೋಗ್ಯವನ್ನು ನಿರ್ಲಕ್ಷಿಸಬಾರದು. ಕಾಯಿಲೆ ತೀವ್ರಗೊಳ್ಳುವ ಮುನ್ನವೇ ಎಚ್ಚೆತ್ತುಕೊಳ್ಳಬೇಕು. ವಾತಾವರಣಕ್ಕೆ ಅನುಗುಣವಾಗಿ ಆಹಾರ ಸೇವಿಸಿ. ಆಯುರ್ವೇದ ಇಲಾಖೆಯಿಂದ ಸಂಧಿವಾತ, ಚರ್ಮರೋಗ, ಹೊಟ್ಟೆನೋವು, ಆಸ್ತಮಾ, ನೆಗಡಿ, ಕೆಮ್ಮು, ಸ್ತ್ರೀರೋಗ ಸೇರಿದಂತೆ ನಾನಾ ಕಾಯಿಲೆಗಳಿಗೆ ಚಿಕಿತ್ಸೆ ನೀಡಲಾಗುವುದು. ಇದರಿಂದ ಯಾವುದೇ ಅಡ್ಡ ಪರಿಣಾಮವಿಲ್ಲ. ಆದ್ದರಿಂದ ನಿಮ್ಮ ಸಮೀಪದ ಆಯುರ್ವೇದ ಆಸ್ಪತ್ರೆಯಲ್ಲಿ ಪರೀಕ್ಷಿಸಿಕೊಳ್ಳಿ’ ಎಂದು ಹೇಳಿದರು.