<p>ಮುಳಬಾಗಿಲು: ಶಬರಿಮೆಲೆಗೆ ತೆರಳಿದ್ದ ಭಕ್ತರ ಬಸ್ ಕೇರಳದ ಕೊಟ್ಟಾಯಂ ಸಮೀಪದಲ್ಲಿ ಬುಧವಾರ ಮುಂಜಾನೆ ಪಲ್ಟಿ ಹೊಡೆದ ಪರಿಣಾಮ 17 ಮಂದಿಗೆ ಗಂಭೀರ ಗಾಯಗಳಾಗಿ, ಮೂವರ ಸ್ಥಿತಿ ಚಿಂತಾಜನಕವಾಗಿದೆ.</p>.<p>ತಾಲ್ಲೂಕಿನ ತಮ್ಮರೆಡ್ಡಿ ಹಳ್ಳಿ, ಬಂಗವಾದಿ ಹಾಗೂ ಎಂ.ಕೊತ್ತೂರು ಗ್ರಾಮದವರು ಈಚೆಗೆ ಅಯ್ಯಪ್ಪ ಸ್ವಾಮಿ ಮಾಲೆ ಹಾಕಿ ಖಾಸಗಿ ಬಸ್ಸಿನಲ್ಲಿ 50 ಮಂದಿ ಭಕ್ತರು ಶಬರಮಲೆಗೆ ಹೊರಟಿದ್ದರು. ಆ ವೇಳೆ ಬಸ್ಸು ಕೇರಳದ ಪಂಪ ಸಮೀಪದ ಕೊಟ್ಟಾಯಂ ಬಳಿಯ ತಿರುವಿನಲ್ಲಿ ಏಕಾಏಕಿ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿದ್ದ 19 ಮಂದಿಗೆ ಗಂಭೀರ ಗಾಯಗಳಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನು ಪಂಪ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ವಿಷಯ ತಿಳಿದ ಕೋಲಾರ ಶಾಸಕ ಕೊತ್ತೂರು ಜಿ ಮಂಜುನಾಥ್ ಕೋಲಾರ ಜಿಲ್ಲಾಧಿಕಾರಿಗಳ ಮೂಲಕ ಪಂಪ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಪಡೆದರೆ, ಮುಳಬಾಗಿಲು ಶಾಸಕ ಸಮೃದ್ದಿ ಮಂಜುನಾಥ್ ಗಾಯಾಳುಗಳನ್ನು ಕೋಲಾರ ಜಾಲಪ್ಪ ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಳಬಾಗಿಲು: ಶಬರಿಮೆಲೆಗೆ ತೆರಳಿದ್ದ ಭಕ್ತರ ಬಸ್ ಕೇರಳದ ಕೊಟ್ಟಾಯಂ ಸಮೀಪದಲ್ಲಿ ಬುಧವಾರ ಮುಂಜಾನೆ ಪಲ್ಟಿ ಹೊಡೆದ ಪರಿಣಾಮ 17 ಮಂದಿಗೆ ಗಂಭೀರ ಗಾಯಗಳಾಗಿ, ಮೂವರ ಸ್ಥಿತಿ ಚಿಂತಾಜನಕವಾಗಿದೆ.</p>.<p>ತಾಲ್ಲೂಕಿನ ತಮ್ಮರೆಡ್ಡಿ ಹಳ್ಳಿ, ಬಂಗವಾದಿ ಹಾಗೂ ಎಂ.ಕೊತ್ತೂರು ಗ್ರಾಮದವರು ಈಚೆಗೆ ಅಯ್ಯಪ್ಪ ಸ್ವಾಮಿ ಮಾಲೆ ಹಾಕಿ ಖಾಸಗಿ ಬಸ್ಸಿನಲ್ಲಿ 50 ಮಂದಿ ಭಕ್ತರು ಶಬರಮಲೆಗೆ ಹೊರಟಿದ್ದರು. ಆ ವೇಳೆ ಬಸ್ಸು ಕೇರಳದ ಪಂಪ ಸಮೀಪದ ಕೊಟ್ಟಾಯಂ ಬಳಿಯ ತಿರುವಿನಲ್ಲಿ ಏಕಾಏಕಿ ಪಲ್ಟಿ ಹೊಡೆದಿದೆ. ಬಸ್ಸಿನಲ್ಲಿದ್ದ 19 ಮಂದಿಗೆ ಗಂಭೀರ ಗಾಯಗಳಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನು ಪಂಪ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.</p>.<p>ವಿಷಯ ತಿಳಿದ ಕೋಲಾರ ಶಾಸಕ ಕೊತ್ತೂರು ಜಿ ಮಂಜುನಾಥ್ ಕೋಲಾರ ಜಿಲ್ಲಾಧಿಕಾರಿಗಳ ಮೂಲಕ ಪಂಪ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಪಡೆದರೆ, ಮುಳಬಾಗಿಲು ಶಾಸಕ ಸಮೃದ್ದಿ ಮಂಜುನಾಥ್ ಗಾಯಾಳುಗಳನ್ನು ಕೋಲಾರ ಜಾಲಪ್ಪ ಆಸ್ಪತ್ರೆಗೆ ಸಾಗಿಸಲು ವ್ಯವಸ್ಥೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>