<p><strong>ಕೋಲಾರ:</strong> ‘ಶೈಕ್ಷಣಿಕ ಸಾಧನೆಯಲ್ಲಿ ಹಿನ್ನಡೆಯಾಗಿರುವ ಸರ್ಕಾರಿ ಕಾಲೇಜುಗಳಲ್ಲಿನ ವ್ಯವಸ್ಥೆ ಬದಲಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಸುಮಂಗಲ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜೂನಿಯರ್ ಕಾಲೇಜುಗಳಲ್ಲಿನ ಪ್ರೌಢ ಶಾಲಾ ವಿಭಾಗದ ಶೈಕ್ಷಣಿಕ ಸಾಧನೆ ಸಮಾಧಾನತಂದಿಲ್ಲ. ಇದಕ್ಕೆ ಕಾರಣ ಏನು ಎಂಬುದರ ಬಗ್ಗೆ ಅಯಾ ಶಾಲಾ ಉಪ ಪ್ರಾಂಶುಪಾಲರು ವರದಿ ಸಲ್ಲಿಸಲು ಸೂಚಿಸಲಾಗಿದೆ’ ಎಂದರು.</p>.<p>‘ತರಗತಿ ಕೊಠಡಿಗಳ ಸಮಸ್ಯೆಯೇ ಪಾಳಿಯ ವ್ಯವಸ್ಥೆಗೆ ಕಾರಣವಾಗಿದ್ದು, ಇದು ಶೈಕ್ಷಣಿಕ ಅಭಿವೃದ್ದಿಗೆ ಅಡ್ಡಿಯಾಗಿದೆ. ಈ ಸಂಬಂಧ ಆಯುಕ್ತರು ಮತ್ತು ಸರ್ಕಾರದೊಂದಿಗೆ ಚರ್ಚಿಸಿ ಕೊಠಡಿಗಳನ್ನು ಹೆಚ್ಚಿಸಿ ಪಾಳಿಯ ವ್ಯವಸ್ಥೆಗೆ ಕೊನೆಯಾಡಲು ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜೂ.21ರಿಂದ ಆರಂಭಗೊಳ್ಳಲಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಯಾ ವಿಷಯ ಶಿಕ್ಷಕರಿಂದ ಕನಿಷ್ಟ ಉತೀರ್ಣರಾಗಲು ಮಾರ್ಗದರ್ಶನ ಕೊಡಿಸಿ. ರಜೆ ಅವಧಿಯಲ್ಲಿ ತರಗತಿ ನಡೆಸಬೇಕು’ ಎಂದು ಚೂಸಿದರು.</p>.<p>‘ಜೂನಿಯರ್ ಕಾಲೇಜುಗಳಲ್ಲಿ ಪಿಯುಸಿ ಹಾಗೂ ಪ್ರೌಢಶಾಲಾ ತರಗತಿಗಳು ಪಾಳಿಯ ವ್ಯವಸ್ಥೆಯಲ್ಲಿ ನಡೆಯುತ್ತಿವೆ, ಇದರಿಂದ ಪ್ರೌಢಶಾಲಾ ಮಕ್ಕಳಲ್ಲಿ ಶಿಸ್ತಿನ ಕೊರತೆಗೂ ಕಾರಣವಾಗುತ್ತಿದೆ. ಜತೆಗೆ ಮಧ್ಯಾಹ್ನದನಂತರ ತರಗತಿಗಳು ನಡೆಯುವಂತಾಗಿದೆ’ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜ್ ಗೌಡ ನಿರ್ದೇಶಕರಿಗೆ ಮಾಹಿತಿ ನೀಡಿದರು.</p>.<p>‘ಜಿಲ್ಲೆಯ ಒಟ್ಟಾರೆ ಎಸ್ಸೆಸ್ಸೆಲ್ಸಿ ಫಲಿತಾಂಶದ ಮೇಲೆ ಜೂನಿಯರ್ ಕಾಲೇಜುಗಳ ಫಲಿತಾಂಶ ಪರಿಣಾಮ ಬೀರುತ್ತಿದೆ. ಅಲ್ಲಿ ಶಿಕ್ಷಕರು ಎಷ್ಟೇ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಅಧಿಕಾರಿಗಳು ಶಾಲೆ ದತ್ತು ಪಡೆದು ಉಸ್ತುವಾರಿ ವಹಿಸುತ್ತಿದ್ದರೂ ಫಲಿತಾಂಶ ಹೆಚ್ಚಿಸುವಲ್ಲಿ ಸಾಧ್ಯವಾಗುತ್ತಿಲ್ಲ’ ಎಂದರು.</p>.<p>ಮಂಡಳಿ ಸಹಾಯಕ ನಿರ್ದೇಶಕ ಮ್ಯಾಗಿ, ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ಬಾಲಾಜಿ, ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಶೈಕ್ಷಣಿಕ ಸಾಧನೆಯಲ್ಲಿ ಹಿನ್ನಡೆಯಾಗಿರುವ ಸರ್ಕಾರಿ ಕಾಲೇಜುಗಳಲ್ಲಿನ ವ್ಯವಸ್ಥೆ ಬದಲಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಸುಮಂಗಲ ತಿಳಿಸಿದರು.</p>.<p>ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜೂನಿಯರ್ ಕಾಲೇಜುಗಳಲ್ಲಿನ ಪ್ರೌಢ ಶಾಲಾ ವಿಭಾಗದ ಶೈಕ್ಷಣಿಕ ಸಾಧನೆ ಸಮಾಧಾನತಂದಿಲ್ಲ. ಇದಕ್ಕೆ ಕಾರಣ ಏನು ಎಂಬುದರ ಬಗ್ಗೆ ಅಯಾ ಶಾಲಾ ಉಪ ಪ್ರಾಂಶುಪಾಲರು ವರದಿ ಸಲ್ಲಿಸಲು ಸೂಚಿಸಲಾಗಿದೆ’ ಎಂದರು.</p>.<p>‘ತರಗತಿ ಕೊಠಡಿಗಳ ಸಮಸ್ಯೆಯೇ ಪಾಳಿಯ ವ್ಯವಸ್ಥೆಗೆ ಕಾರಣವಾಗಿದ್ದು, ಇದು ಶೈಕ್ಷಣಿಕ ಅಭಿವೃದ್ದಿಗೆ ಅಡ್ಡಿಯಾಗಿದೆ. ಈ ಸಂಬಂಧ ಆಯುಕ್ತರು ಮತ್ತು ಸರ್ಕಾರದೊಂದಿಗೆ ಚರ್ಚಿಸಿ ಕೊಠಡಿಗಳನ್ನು ಹೆಚ್ಚಿಸಿ ಪಾಳಿಯ ವ್ಯವಸ್ಥೆಗೆ ಕೊನೆಯಾಡಲು ಪ್ರಯತ್ನಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಜೂ.21ರಿಂದ ಆರಂಭಗೊಳ್ಳಲಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಯಾ ವಿಷಯ ಶಿಕ್ಷಕರಿಂದ ಕನಿಷ್ಟ ಉತೀರ್ಣರಾಗಲು ಮಾರ್ಗದರ್ಶನ ಕೊಡಿಸಿ. ರಜೆ ಅವಧಿಯಲ್ಲಿ ತರಗತಿ ನಡೆಸಬೇಕು’ ಎಂದು ಚೂಸಿದರು.</p>.<p>‘ಜೂನಿಯರ್ ಕಾಲೇಜುಗಳಲ್ಲಿ ಪಿಯುಸಿ ಹಾಗೂ ಪ್ರೌಢಶಾಲಾ ತರಗತಿಗಳು ಪಾಳಿಯ ವ್ಯವಸ್ಥೆಯಲ್ಲಿ ನಡೆಯುತ್ತಿವೆ, ಇದರಿಂದ ಪ್ರೌಢಶಾಲಾ ಮಕ್ಕಳಲ್ಲಿ ಶಿಸ್ತಿನ ಕೊರತೆಗೂ ಕಾರಣವಾಗುತ್ತಿದೆ. ಜತೆಗೆ ಮಧ್ಯಾಹ್ನದನಂತರ ತರಗತಿಗಳು ನಡೆಯುವಂತಾಗಿದೆ’ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಕೆ.ಎಸ್.ನಾಗರಾಜ್ ಗೌಡ ನಿರ್ದೇಶಕರಿಗೆ ಮಾಹಿತಿ ನೀಡಿದರು.</p>.<p>‘ಜಿಲ್ಲೆಯ ಒಟ್ಟಾರೆ ಎಸ್ಸೆಸ್ಸೆಲ್ಸಿ ಫಲಿತಾಂಶದ ಮೇಲೆ ಜೂನಿಯರ್ ಕಾಲೇಜುಗಳ ಫಲಿತಾಂಶ ಪರಿಣಾಮ ಬೀರುತ್ತಿದೆ. ಅಲ್ಲಿ ಶಿಕ್ಷಕರು ಎಷ್ಟೇ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರೂ, ಅಧಿಕಾರಿಗಳು ಶಾಲೆ ದತ್ತು ಪಡೆದು ಉಸ್ತುವಾರಿ ವಹಿಸುತ್ತಿದ್ದರೂ ಫಲಿತಾಂಶ ಹೆಚ್ಚಿಸುವಲ್ಲಿ ಸಾಧ್ಯವಾಗುತ್ತಿಲ್ಲ’ ಎಂದರು.</p>.<p>ಮಂಡಳಿ ಸಹಾಯಕ ನಿರ್ದೇಶಕ ಮ್ಯಾಗಿ, ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ಬಾಲಾಜಿ, ಶಿಕ್ಷಣ ಸಂಯೋಜಕ ಆರ್.ಶ್ರೀನಿವಾಸನ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಶ್ರೀನಿವಾಸ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>