<p><strong>ಕೋಲಾರ:</strong> ‘ಗೋವು ಮತ್ತು ಒಂಟೆಗಳ ಅಕ್ರಮ ಸಾಗಣೆಯನ್ನು ಸರ್ಕಾರ ನಿಷೇಧ ಮಾಡಿದ್ದು, ಈ ಆದೇಶದ ಸಮರ್ಪಕ ಜಾರಿಗೆ ಜಾಗೃತದಳ ರಚನೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೂಚಿಸಿದರು.</p>.<p>ಬಕ್ರೀದ್ ಹಿನ್ನೆಲೆಯಲ್ಲಿ ಇಲ್ಲಿ ಸೋಮವಾರ ನಡೆದ ವಿವಿಧ ಇಲಾಖಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ‘ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಒಂಟೆ ಮತ್ತು ಹಸುಗಳ ಸಾಗಾಣಿಕೆ ನಿರ್ಬಂಧಿಸಲಾಗಿದೆ. ನಿಯಮಬಾಹಿರವಾಗಿ ಹಸು ಹಾಗೂ ಒಂಟೆ ಸಾಗಿಸುವವರ ವಿರುದ್ಧ ಶಿಸ್ತುಕ್ರಮ ಜರುಗಿಸಿ’ ಎಂದು ಆದೇಶಿಸಿದರು.</p>.<p>‘ವಿಶೇಷವಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ, ಪಶು ಸಂಗೋಪನಾ ಇಲಾಖೆ, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಸರ್ಕಾರದ ಆದೇಶ ಜಾರಿಗೊಳಿಸಬೇಕು. ಅಕ್ರಮವಾಗಿ ಸಾಗಣೆ ಮಾಡುವ ಜಾನುವಾರುಗಳನ್ನು ರಕ್ಷಿಸಿ ಗೋಶಾಲೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಿ’ ಎಂದು ಸೂಚಿಸಿದರು.</p>.<p>‘ಒಂಟೆ ಮತ್ತು ಜಾನುವಾರುಗಳ ಅಕ್ರಮ ಸಾಗಣೆ ಹಾಗೂ ಪ್ರಾಣಿ ವಧೆ ವಿರುದ್ಧ ಪ್ರಕರಣ ದಾಖಲಿಸಿ. ಈ ವಿಚಾರದಲ್ಲಿ ಯಾವುದೇ ಒತ್ತಡಕ್ಕೆ ಮಣಿಯಬೇಡಿ. ಕೆಜಿಎಫ್ನಲ್ಲಿ ಮಾತ್ರ ಕಸಾಯಿಖಾನೆಯಿದೆ. ಜಿಲ್ಲೆಯ ಇತರೆ ಭಾಗಗಳಲ್ಲಿ ಕಸಾಯಿಖಾನೆ ಇಲ್ಲದಿದ್ದರೂ ಪ್ರಾಣಿಗಳನ್ನು ಕಡಿಯುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಇದರ ವಿರುದ್ಧ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು’ ಎಂದರು.</p>.<p><strong>ನೋಟಿಸ್ ಜಾರಿ:</strong> ‘ಪ್ರಾಣಿಗಳ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವಂತಿಲ್ಲ. ನಿಗದಿತ ಸ್ಥಳದಲ್ಲಿ ಮಾತ್ರ ಪ್ರಾಣಿ ತ್ಯಾಜ್ಯ ವಿಲೇವಾರಿ ಮಾಡಬೇಕು. ಈ ಬಗ್ಗೆ ಮಾಂಸ ಮಾರಾಟ ಮಳಿಗೆಗಳ ಮಾಲೀಕರಿಗೆ ನಗರಸಭೆಯಿಂದ ನೋಟಿಸ್ ಜಾರಿ ಮಾಡಿ. ಕೆರೆ ಅಂಗಳಕ್ಕೆ ಹಾಗೂ ಯುಜಿಡಿಗಳಿಗೆ ಪ್ರಾಣಿಗಳ ತ್ಯಾಜ್ಯ ಸುರಿಯಲಾಗುತ್ತಿದೆ. ಇದರಿಂದ ಯುಜಿಡಿಗಳಲ್ಲಿ ಕೊಳಚೆ ನೀರು ಕಟ್ಟಿಕೊಂಡು ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಬೇಕು’ ಎಂದು ಹೇಳಿದರು.</p>.<p>‘ಮಾಂಸದಂಗಡಿಗಳ ತ್ಯಾಜ್ಯ ವಿಲೇವಾರಿಗೆ ನಿಗದಿತ ಸ್ಥಳ ಗುರುತಿಸಬೇಕು. ಕಂಡಕಂಡಲ್ಲಿ ಮಾಂಸದ ತ್ಯಾಜ್ಯ ಸುರಿದರೆ ಸಾಂಕ್ರಾಮಿಕ ರೋಗ ಬರುತ್ತವೆ. ಸಕಾಲಕ್ಕೆ ತ್ಯಾಜ್ಯ ವಿಲೇವಾರಿ ಮಾಡುತ್ತಿರಬೇಕು. ಈಗಾಗಲೇ ನಗರದಲ್ಲಿ ಕಸದ ಸಮಸ್ಯೆ ಗಂಭೀರವಾಗಿದೆ’ ಎಂದು ವಿಷಾದಿಸಿದರು.</p>.<p>ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ.ಮಧುಸೂದನರೆಡ್ಡಿ, ನಗರಸಭೆ ಆಯುಕ್ತ ಟಿ.ಆರ್.ಸತ್ಯನಾರಾಯಣ, ಸಮರ್ಥ ಭಾರತ್ ಟ್ರಸ್ಟ್ ಅಧ್ಯಕ್ಷ ತ್ಯಾಗರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಗೋವು ಮತ್ತು ಒಂಟೆಗಳ ಅಕ್ರಮ ಸಾಗಣೆಯನ್ನು ಸರ್ಕಾರ ನಿಷೇಧ ಮಾಡಿದ್ದು, ಈ ಆದೇಶದ ಸಮರ್ಪಕ ಜಾರಿಗೆ ಜಾಗೃತದಳ ರಚನೆ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಸೂಚಿಸಿದರು.</p>.<p>ಬಕ್ರೀದ್ ಹಿನ್ನೆಲೆಯಲ್ಲಿ ಇಲ್ಲಿ ಸೋಮವಾರ ನಡೆದ ವಿವಿಧ ಇಲಾಖಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ‘ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಒಂಟೆ ಮತ್ತು ಹಸುಗಳ ಸಾಗಾಣಿಕೆ ನಿರ್ಬಂಧಿಸಲಾಗಿದೆ. ನಿಯಮಬಾಹಿರವಾಗಿ ಹಸು ಹಾಗೂ ಒಂಟೆ ಸಾಗಿಸುವವರ ವಿರುದ್ಧ ಶಿಸ್ತುಕ್ರಮ ಜರುಗಿಸಿ’ ಎಂದು ಆದೇಶಿಸಿದರು.</p>.<p>‘ವಿಶೇಷವಾಗಿ ಪ್ರಾದೇಶಿಕ ಸಾರಿಗೆ ಅಧಿಕಾರಿ, ಪಶು ಸಂಗೋಪನಾ ಇಲಾಖೆ, ನಗರಸಭೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಾಗಿ ಸರ್ಕಾರದ ಆದೇಶ ಜಾರಿಗೊಳಿಸಬೇಕು. ಅಕ್ರಮವಾಗಿ ಸಾಗಣೆ ಮಾಡುವ ಜಾನುವಾರುಗಳನ್ನು ರಕ್ಷಿಸಿ ಗೋಶಾಲೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಿ’ ಎಂದು ಸೂಚಿಸಿದರು.</p>.<p>‘ಒಂಟೆ ಮತ್ತು ಜಾನುವಾರುಗಳ ಅಕ್ರಮ ಸಾಗಣೆ ಹಾಗೂ ಪ್ರಾಣಿ ವಧೆ ವಿರುದ್ಧ ಪ್ರಕರಣ ದಾಖಲಿಸಿ. ಈ ವಿಚಾರದಲ್ಲಿ ಯಾವುದೇ ಒತ್ತಡಕ್ಕೆ ಮಣಿಯಬೇಡಿ. ಕೆಜಿಎಫ್ನಲ್ಲಿ ಮಾತ್ರ ಕಸಾಯಿಖಾನೆಯಿದೆ. ಜಿಲ್ಲೆಯ ಇತರೆ ಭಾಗಗಳಲ್ಲಿ ಕಸಾಯಿಖಾನೆ ಇಲ್ಲದಿದ್ದರೂ ಪ್ರಾಣಿಗಳನ್ನು ಕಡಿಯುತ್ತಿರುವ ಬಗ್ಗೆ ಮಾಹಿತಿ ಬಂದಿದೆ. ಇದರ ವಿರುದ್ಧ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು’ ಎಂದರು.</p>.<p><strong>ನೋಟಿಸ್ ಜಾರಿ:</strong> ‘ಪ್ರಾಣಿಗಳ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವಂತಿಲ್ಲ. ನಿಗದಿತ ಸ್ಥಳದಲ್ಲಿ ಮಾತ್ರ ಪ್ರಾಣಿ ತ್ಯಾಜ್ಯ ವಿಲೇವಾರಿ ಮಾಡಬೇಕು. ಈ ಬಗ್ಗೆ ಮಾಂಸ ಮಾರಾಟ ಮಳಿಗೆಗಳ ಮಾಲೀಕರಿಗೆ ನಗರಸಭೆಯಿಂದ ನೋಟಿಸ್ ಜಾರಿ ಮಾಡಿ. ಕೆರೆ ಅಂಗಳಕ್ಕೆ ಹಾಗೂ ಯುಜಿಡಿಗಳಿಗೆ ಪ್ರಾಣಿಗಳ ತ್ಯಾಜ್ಯ ಸುರಿಯಲಾಗುತ್ತಿದೆ. ಇದರಿಂದ ಯುಜಿಡಿಗಳಲ್ಲಿ ಕೊಳಚೆ ನೀರು ಕಟ್ಟಿಕೊಂಡು ಸಮಸ್ಯೆಯಾಗುತ್ತಿದೆ. ಈ ಬಗ್ಗೆ ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಬೇಕು’ ಎಂದು ಹೇಳಿದರು.</p>.<p>‘ಮಾಂಸದಂಗಡಿಗಳ ತ್ಯಾಜ್ಯ ವಿಲೇವಾರಿಗೆ ನಿಗದಿತ ಸ್ಥಳ ಗುರುತಿಸಬೇಕು. ಕಂಡಕಂಡಲ್ಲಿ ಮಾಂಸದ ತ್ಯಾಜ್ಯ ಸುರಿದರೆ ಸಾಂಕ್ರಾಮಿಕ ರೋಗ ಬರುತ್ತವೆ. ಸಕಾಲಕ್ಕೆ ತ್ಯಾಜ್ಯ ವಿಲೇವಾರಿ ಮಾಡುತ್ತಿರಬೇಕು. ಈಗಾಗಲೇ ನಗರದಲ್ಲಿ ಕಸದ ಸಮಸ್ಯೆ ಗಂಭೀರವಾಗಿದೆ’ ಎಂದು ವಿಷಾದಿಸಿದರು.</p>.<p>ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ ಉಪ ನಿರ್ದೇಶಕ ಡಾ.ಮಧುಸೂದನರೆಡ್ಡಿ, ನಗರಸಭೆ ಆಯುಕ್ತ ಟಿ.ಆರ್.ಸತ್ಯನಾರಾಯಣ, ಸಮರ್ಥ ಭಾರತ್ ಟ್ರಸ್ಟ್ ಅಧ್ಯಕ್ಷ ತ್ಯಾಗರಾಜ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>