ಕೋವಿಡ್ ಸಂಕಷ್ಟದ ಪರಿಸ್ಥಿತಿಯಲ್ಲಿ ಒಬ್ಬರು ಅಥವಾ ಇಬ್ಬರೂ ಪೋಷಕರನ್ನು ಕಳೆದುಕೊಂಡಿರುವ ಮಕ್ಕಳಲ್ಲಿ ಆತ್ಮಸ್ಥೆರ್ಯ ತುಂಬಿ ಅವರ ಬೆಳವಣಿಗೆಗೆ ಬೆಂಬಲ ಹಾಗೂ ಸಹಾಯ ನೀಡಲು ಇದೊಂದು ಸುವರ್ಣಾವಕಾಶ. ಮಾರ್ಗದರ್ಶಕರಾಗಿ ಕಾರ್ಯ ನಿರ್ವಹಿಸುವವರಿಗೆ ಇಲಾಖೆಯಿಂದ ಯಾವುದೇ ಗೌರವಧನ, ಶುಲ್ಕ ಪಾವತಿಸುವುದಿಲ್ಲ. ಇದು ಸಾಮಾಜಿಕ ಜವಾಬ್ದಾರಿಯಾಗಿದ್ದು, ಸರ್ಕಾರದ ಬಾಲಹಿತೈಷಿ ಯೋಜನೆಯಡಿ ಆಸಕ್ತರು ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಬಹುದು ಎಂದು ಮಾಹಿತಿ ನೀಡಿದ್ದಾರೆ.