<p><strong>ಕೋಲಾರ:</strong> ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಬಿ.ಎಡ್ 4ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆ ಮುಗಿದ 48 ಗಂಟೆಗಳಲ್ಲಿ ಪ್ರಕಟಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಎನ್.ಲೋಕನಾಥ್ ತಿಳಿಸಿದ್ದಾರೆ.</p>.<p>ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಒಟ್ಟು 34 ಬಿ.ಎಡ್ ಕಾಲೇಜುಗಳಿದ್ದು, 2,610ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಇದರಲ್ಲಿ ಶೇ 98 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದಿದ್ದಾರೆ.</p>.<p>4ನೇ ಸೆಮಿಸ್ಟರ್ ಪರೀಕ್ಷೆ ಸೆ.29 ರಂದು ಆರಂಭವಾಗಿ ಅ.8 ರಂದು ಮುಕ್ತಾಯವಾಗಿತ್ತು. ಆ ಬಳಿಕ ಕೇವಲ 48 ಗಂಟೆಗಳಲ್ಲಿ ಮೌಲ್ಯಮಾಪನ ಮುಗಿಸಿ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ.</p>.<p>ಫಲಿತಾಂಶ ಶೀಘ್ರ ಪ್ರಕಟದಿಂದಾಗಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಹಾಗೂ ತಮ್ಮ ವೃತ್ತಿಜೀವನ ಆರಂಭಿಸಿ ಬದುಕು ಕಟ್ಟಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.</p>.<p>ಇದಕ್ಕೆ ಕಾರಣವಾದ ಎಲ್ಲಾ ಸಂಯೋಜಿತ ಬಿ.ಎಡ್ ಕಾಲೇಜುಗಳ ಪ್ರಾಂಶುಪಾಲರು, ಅಧ್ಯಾಪಕರು, ವಿಶ್ವವಿದ್ಯಾಲಯ ಸಿಬ್ಬಂದಿ, ಕಸ್ಟೋಡಿಯನ್, ಕುಲಪತಿ ಪ್ರೊ.ನಿರಂಜನವಾನಳ್ಳಿ, ಕುಲಸಚಿವ ಶ್ರೀಧರ್ ಅವರಿಗೆ ಧನ್ಯವಾದ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಬಿ.ಎಡ್ 4ನೇ ಸೆಮಿಸ್ಟರ್ ಪರೀಕ್ಷೆಯ ಫಲಿತಾಂಶವನ್ನು ಪರೀಕ್ಷೆ ಮುಗಿದ 48 ಗಂಟೆಗಳಲ್ಲಿ ಪ್ರಕಟಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಪ್ರೊ.ಎನ್.ಲೋಕನಾಥ್ ತಿಳಿಸಿದ್ದಾರೆ.</p>.<p>ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ ಒಟ್ಟು 34 ಬಿ.ಎಡ್ ಕಾಲೇಜುಗಳಿದ್ದು, 2,610ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಇದರಲ್ಲಿ ಶೇ 98 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದಿದ್ದಾರೆ.</p>.<p>4ನೇ ಸೆಮಿಸ್ಟರ್ ಪರೀಕ್ಷೆ ಸೆ.29 ರಂದು ಆರಂಭವಾಗಿ ಅ.8 ರಂದು ಮುಕ್ತಾಯವಾಗಿತ್ತು. ಆ ಬಳಿಕ ಕೇವಲ 48 ಗಂಟೆಗಳಲ್ಲಿ ಮೌಲ್ಯಮಾಪನ ಮುಗಿಸಿ ಫಲಿತಾಂಶ ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ.</p>.<p>ಫಲಿತಾಂಶ ಶೀಘ್ರ ಪ್ರಕಟದಿಂದಾಗಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಹಾಗೂ ತಮ್ಮ ವೃತ್ತಿಜೀವನ ಆರಂಭಿಸಿ ಬದುಕು ಕಟ್ಟಿಕೊಳ್ಳಲು ಇಚ್ಛಿಸುವ ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಿದೆ ಎಂದು ತಿಳಿಸಿದ್ದಾರೆ.</p>.<p>ಇದಕ್ಕೆ ಕಾರಣವಾದ ಎಲ್ಲಾ ಸಂಯೋಜಿತ ಬಿ.ಎಡ್ ಕಾಲೇಜುಗಳ ಪ್ರಾಂಶುಪಾಲರು, ಅಧ್ಯಾಪಕರು, ವಿಶ್ವವಿದ್ಯಾಲಯ ಸಿಬ್ಬಂದಿ, ಕಸ್ಟೋಡಿಯನ್, ಕುಲಪತಿ ಪ್ರೊ.ನಿರಂಜನವಾನಳ್ಳಿ, ಕುಲಸಚಿವ ಶ್ರೀಧರ್ ಅವರಿಗೆ ಧನ್ಯವಾದ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>