<p>ಬಂಗಾರಪೇಟೆ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ಬಿಹಾರ ಮೂಲದ ಸುಮಾರು 42 ಮಕ್ಕಳನ್ನು ಪೊಲೀಸರು ಬುಧವಾರ ರಕ್ಷಿಸಿ, ಕೆಜಿಎಫ್ನ ಸರ್ಕಾರಿ ಬಾಲಮಂದಿರಕ್ಕೆ ದಾಖಲಿಸಿದ್ದಾರೆ.</p>.<p>ಬಿಹಾರ ಮೂಲದ ಮುಜಾಮಿಲ್ ಮತ್ತು ಅಫ್ರೋಜ್ ಎಂಬುವವರು ಈ ಮಕ್ಕಳನ್ನು ರೈಲಿನ ಮೂಲಕ ಕರೆತಂದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.</p>.<p>ಮುಜಾಫರ್ ಪುರ ಎಕ್ಸ್ಪ್ರೆಸ್ ರೈಲಿನ ಮೂಲಕ ಬೆಳಿಗ್ಗೆ 9 ಗಂಟೆ ಸುಮಾರಿಗೆ ಬಂಗಾರಪೇಟೆ ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಮಕ್ಕಳು, ಅಲ್ಲಿಂದ ನೇರವಾಗಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. ಹಾವೇರಿಗೆ ತೆರಳುವ ಬಸ್ಗಾಗಿ ಕಾಯುತ್ತಿದ್ದ ಮಕ್ಕಳ ಗುಂಪನ್ನು ಕಂಡು ಅನುಮಾನಗೊಂಡ ಸಾರ್ವಜನಿಕರು ತಕ್ಷಣವೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.</p>.<p>ಮಾಹಿತಿ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಇನ್ಸ್ಪೆಕ್ಟರ್ ರವಿಕುಮಾರ್ ಮತ್ತು ತಂಡ ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಸದ್ಯ ಕೆಜಿಎಫ್ ಸರ್ಕಾರಿ ಬಾಲ ಮಂದಿರದಲ್ಲಿ ತಾತ್ಕಾಲಿಕ ಆಶ್ರಯ ನೀಡಲಾಗಿದೆ.</p>.<p>ಮಕ್ಕಳನ್ನು ಸದ್ಯ ಸುರಕ್ಷಿತವಾಗಿರಿಸಲಾಗಿದೆ. ಭಾಷೆಯ ಸಮಸ್ಯೆಯಿದ್ದರೂ ಅಧಿಕಾರಿಗಳು ಮಕ್ಕಳಿಂದ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ ಮತ್ತು ಮಕ್ಕಳನ್ನು ಎಲ್ಲಿಗೆ ಕರೆದೊಯ್ಯಲಾಗುತ್ತಿತ್ತು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಸಿ.ರವಿಕುಮಾರ್ ತಿಳಿಸಿದ್ದಾರೆ</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-18-1146671732</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಂಗಾರಪೇಟೆ: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ಬಿಹಾರ ಮೂಲದ ಸುಮಾರು 42 ಮಕ್ಕಳನ್ನು ಪೊಲೀಸರು ಬುಧವಾರ ರಕ್ಷಿಸಿ, ಕೆಜಿಎಫ್ನ ಸರ್ಕಾರಿ ಬಾಲಮಂದಿರಕ್ಕೆ ದಾಖಲಿಸಿದ್ದಾರೆ.</p>.<p>ಬಿಹಾರ ಮೂಲದ ಮುಜಾಮಿಲ್ ಮತ್ತು ಅಫ್ರೋಜ್ ಎಂಬುವವರು ಈ ಮಕ್ಕಳನ್ನು ರೈಲಿನ ಮೂಲಕ ಕರೆತಂದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.</p>.<p>ಮುಜಾಫರ್ ಪುರ ಎಕ್ಸ್ಪ್ರೆಸ್ ರೈಲಿನ ಮೂಲಕ ಬೆಳಿಗ್ಗೆ 9 ಗಂಟೆ ಸುಮಾರಿಗೆ ಬಂಗಾರಪೇಟೆ ರೈಲ್ವೆ ನಿಲ್ದಾಣಕ್ಕೆ ಬಂದಿಳಿದ ಮಕ್ಕಳು, ಅಲ್ಲಿಂದ ನೇರವಾಗಿ ಬಸ್ ನಿಲ್ದಾಣಕ್ಕೆ ಆಗಮಿಸಿದ್ದರು. ಹಾವೇರಿಗೆ ತೆರಳುವ ಬಸ್ಗಾಗಿ ಕಾಯುತ್ತಿದ್ದ ಮಕ್ಕಳ ಗುಂಪನ್ನು ಕಂಡು ಅನುಮಾನಗೊಂಡ ಸಾರ್ವಜನಿಕರು ತಕ್ಷಣವೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.</p>.<p>ಮಾಹಿತಿ ತಿಳಿದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸ್ ಇನ್ಸ್ಪೆಕ್ಟರ್ ರವಿಕುಮಾರ್ ಮತ್ತು ತಂಡ ಸ್ಥಳಕ್ಕೆ ಧಾವಿಸಿ ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಮಕ್ಕಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಸದ್ಯ ಕೆಜಿಎಫ್ ಸರ್ಕಾರಿ ಬಾಲ ಮಂದಿರದಲ್ಲಿ ತಾತ್ಕಾಲಿಕ ಆಶ್ರಯ ನೀಡಲಾಗಿದೆ.</p>.<p>ಮಕ್ಕಳನ್ನು ಸದ್ಯ ಸುರಕ್ಷಿತವಾಗಿರಿಸಲಾಗಿದೆ. ಭಾಷೆಯ ಸಮಸ್ಯೆಯಿದ್ದರೂ ಅಧಿಕಾರಿಗಳು ಮಕ್ಕಳಿಂದ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಈ ಪ್ರಕರಣದ ಹಿಂದೆ ಯಾರಿದ್ದಾರೆ ಮತ್ತು ಮಕ್ಕಳನ್ನು ಎಲ್ಲಿಗೆ ಕರೆದೊಯ್ಯಲಾಗುತ್ತಿತ್ತು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ಸಿ.ರವಿಕುಮಾರ್ ತಿಳಿಸಿದ್ದಾರೆ</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260430-18-1146671732</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>