<p>ಮಾಲೂರು: ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಮಾಲೂರು ನಗರದಲ್ಲಿ 400 ಮನೆಗಳು ಮಂಜೂರಾಗಿದ್ದು, ಅಂಬೇಡ್ಕರ್ ನಗರದಲ್ಲಿ 90 ಮನೆಗಳ ನಿರ್ಮಾಣ ಮಾಡಲಾಗುತ್ತದೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.</p>.<p>ನಗರದ ನಾಲ್ಕನೇ ವಾರ್ಡಿನ ಅಂಬೇಡ್ಕರ್ ನಗರದಲ್ಲಿ 90 ಮನೆಗಳ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು</p>.<p>90 ಮನೆಗಳು ಎಲ್ಲಾ ವರ್ಗದ ಜನರಿಗಾಗಿ ನಿರ್ಮಾಣ ಮಾಡಲಾಗುತ್ತಿದೆ. ಉಳಿದ 310 ಮನೆಗಳ ನಿರ್ಮಾಣಕ್ಕೆ ಫಲಾನುಭವಿಗಳ ಗುರುತಿಸುವ ಕೆಲಸ ಪ್ರಾರಂಭವಾಗಿದೆ. ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ನಿರ್ಮಿಸುತ್ತಿರುವ ಮನೆಗಳಿಗೆ ಫಲಾನುಭವಿಯ ವಂತಿಕೆ ₹1 ಲಕ್ಷ, ಕೇಂದ್ರ ಸರ್ಕಾರದ್ದು 1.50, ರಾಜ್ಯ ಸರ್ಕಾರದ್ದು ₹4.50 ಲಕ್ಷ, ಒಟ್ಟು ₹6 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಲಾಗುತ್ತದೆ ಎಂದರು.</p>.<p>ಮಾಲೂರು ನಗರದಲ್ಲಿ ನಿವೇಶನ ರಹಿತರು ನಿವೇಶನಗಳಿಗಾಗಿ 22 ವರ್ಷಗಳ ಹಿಂದೆ ಅರ್ಜಿಗಳನ್ನು ಸಲ್ಲಿಸಿದ್ದರು. </p>.<p>ನಗರಸಭೆ ಅಧ್ಯಕ್ಷೆ ವಿಜಯಲಕ್ಷ್ಮಿ, ಸ್ಥಾಯಿ ಸಮಿತಿ ಅಧ್ಯಕ್ಷ ರಾಜಪ್ಪ, ಸದಸ್ಯರಾದ ಎನ್.ವಿ.ಮರಳಿದರ್, ಇಂತಿಯಾಜ್, ಪರಮೇಶ್ ಕೋಮಲ, ಶ್ರೀನಿವಾಸ್, ರಂಗಪ್ಪ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಲೂರು: ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಮಾಲೂರು ನಗರದಲ್ಲಿ 400 ಮನೆಗಳು ಮಂಜೂರಾಗಿದ್ದು, ಅಂಬೇಡ್ಕರ್ ನಗರದಲ್ಲಿ 90 ಮನೆಗಳ ನಿರ್ಮಾಣ ಮಾಡಲಾಗುತ್ತದೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.</p>.<p>ನಗರದ ನಾಲ್ಕನೇ ವಾರ್ಡಿನ ಅಂಬೇಡ್ಕರ್ ನಗರದಲ್ಲಿ 90 ಮನೆಗಳ ನಿರ್ಮಾಣಕ್ಕೆ ಸೋಮವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು</p>.<p>90 ಮನೆಗಳು ಎಲ್ಲಾ ವರ್ಗದ ಜನರಿಗಾಗಿ ನಿರ್ಮಾಣ ಮಾಡಲಾಗುತ್ತಿದೆ. ಉಳಿದ 310 ಮನೆಗಳ ನಿರ್ಮಾಣಕ್ಕೆ ಫಲಾನುಭವಿಗಳ ಗುರುತಿಸುವ ಕೆಲಸ ಪ್ರಾರಂಭವಾಗಿದೆ. ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ನಿರ್ಮಿಸುತ್ತಿರುವ ಮನೆಗಳಿಗೆ ಫಲಾನುಭವಿಯ ವಂತಿಕೆ ₹1 ಲಕ್ಷ, ಕೇಂದ್ರ ಸರ್ಕಾರದ್ದು 1.50, ರಾಜ್ಯ ಸರ್ಕಾರದ್ದು ₹4.50 ಲಕ್ಷ, ಒಟ್ಟು ₹6 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಾಣ ಮಾಡಲಾಗುತ್ತದೆ ಎಂದರು.</p>.<p>ಮಾಲೂರು ನಗರದಲ್ಲಿ ನಿವೇಶನ ರಹಿತರು ನಿವೇಶನಗಳಿಗಾಗಿ 22 ವರ್ಷಗಳ ಹಿಂದೆ ಅರ್ಜಿಗಳನ್ನು ಸಲ್ಲಿಸಿದ್ದರು. </p>.<p>ನಗರಸಭೆ ಅಧ್ಯಕ್ಷೆ ವಿಜಯಲಕ್ಷ್ಮಿ, ಸ್ಥಾಯಿ ಸಮಿತಿ ಅಧ್ಯಕ್ಷ ರಾಜಪ್ಪ, ಸದಸ್ಯರಾದ ಎನ್.ವಿ.ಮರಳಿದರ್, ಇಂತಿಯಾಜ್, ಪರಮೇಶ್ ಕೋಮಲ, ಶ್ರೀನಿವಾಸ್, ರಂಗಪ್ಪ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>