<p><strong>ಬಂಗಾರಪೇಟೆ</strong>: ಬೂದಿಕೋಟೆ ಗ್ರಾಮದಲ್ಲಿ ಸೋಮವಾರ ಎತ್ತಿನ ಹುಟ್ಟುಹಬ್ಬವನ್ನು ಇಡೀ ಗ್ರಾಮಸ್ಥರ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ ವಿಜೃಂಭಣೆಯಿಂದ ಆಚರಿಸಲಾಯಿತು. </p>.<p>ಈ ಕುರಿತು ಪ್ರತಿಕ್ರಿಯಿಸಿದ ರೈತ ಮಂಜುನಾಥ, ಆರು ವರ್ಷಗಳ ಹಿಂದೆ ಡಿಸೆಂಬರ್ 16 ರಂದು ಕರುವೊಂದನ್ನು ಖರೀದಿಸಲಾಗಿತ್ತು. ಆ ಕರುವಿಗೆ ವಾಯುಪುತ್ರ ಎಂದು ನಾಮಕರಣ ಮಾಡಲಾಗಿದೆ. ಪ್ರತಿ ವರ್ಷ ಡಿಸೆಂಬರ್ 16ರಂದು ಆ ಎತ್ತಿನ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಅದೇ ರೀತಿ ಸೋಮವಾರವೂ ಎತ್ತಿಗೆ ಸಿಂಗಾರ ಮಾಡಿ, ಬರ್ತ್ಡೇ ಆಚರಿಸಲಾಯಿತು. ಜೊತೆಗೆ ಗ್ರಾಮಸ್ಥರೆಲ್ಲರಿಗೂ ಊಟ ಹಾಕಿ, ಸಂಭ್ರಮಿಸಲಾಯಿತು. </p>.<p>‘ವಾಯುಪುತ್ರ’ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ನಡೆಯುವ ರಾಸುಗಳ ಓಟದಲ್ಲಿ ಪಾಲ್ಗೊಂಡು ಹತ್ತಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ರೈತರಾದ ನಾವು ಮನೆಗೊಂದು ನಾಟಿ ತಳಿಯ ಎತ್ತು ಅಥವಾ ಹಸು ಸಾಕಬೇಕಿದೆ. ಈ ಮೂಲಕ ಅದರ ಸಂತತಿ ಉಳಿಸಬೇಕು. ರಾಜ್ಯದ ಹಾವೇರಿ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಕ್ರಾಂತಿ ಹಬ್ಬದಲ್ಲಿ ಓಟ ನಡೆಸಲಾಗುತ್ತಿದೆ. ಆದರೆ ನಮ್ಮ ಕೋಲಾರ ಜಿಲ್ಲೆಯಲ್ಲಿ ಅದಕ್ಕೆ ಅವಕಾಶ ಕಲ್ಪಿಸದ ಕಾರಣ ಅಂಥ ಸಾಹಸ ಮಾಡುವುದಿಲ್ಲ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ಬೂದಿಕೋಟೆ ಗ್ರಾಮದಲ್ಲಿ ಸೋಮವಾರ ಎತ್ತಿನ ಹುಟ್ಟುಹಬ್ಬವನ್ನು ಇಡೀ ಗ್ರಾಮಸ್ಥರ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ ವಿಜೃಂಭಣೆಯಿಂದ ಆಚರಿಸಲಾಯಿತು. </p>.<p>ಈ ಕುರಿತು ಪ್ರತಿಕ್ರಿಯಿಸಿದ ರೈತ ಮಂಜುನಾಥ, ಆರು ವರ್ಷಗಳ ಹಿಂದೆ ಡಿಸೆಂಬರ್ 16 ರಂದು ಕರುವೊಂದನ್ನು ಖರೀದಿಸಲಾಗಿತ್ತು. ಆ ಕರುವಿಗೆ ವಾಯುಪುತ್ರ ಎಂದು ನಾಮಕರಣ ಮಾಡಲಾಗಿದೆ. ಪ್ರತಿ ವರ್ಷ ಡಿಸೆಂಬರ್ 16ರಂದು ಆ ಎತ್ತಿನ ಹುಟ್ಟುಹಬ್ಬ ಆಚರಿಸಲಾಗುತ್ತಿದೆ. ಅದೇ ರೀತಿ ಸೋಮವಾರವೂ ಎತ್ತಿಗೆ ಸಿಂಗಾರ ಮಾಡಿ, ಬರ್ತ್ಡೇ ಆಚರಿಸಲಾಯಿತು. ಜೊತೆಗೆ ಗ್ರಾಮಸ್ಥರೆಲ್ಲರಿಗೂ ಊಟ ಹಾಕಿ, ಸಂಭ್ರಮಿಸಲಾಯಿತು. </p>.<p>‘ವಾಯುಪುತ್ರ’ ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ನಡೆಯುವ ರಾಸುಗಳ ಓಟದಲ್ಲಿ ಪಾಲ್ಗೊಂಡು ಹತ್ತಾರು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದೆ. ರೈತರಾದ ನಾವು ಮನೆಗೊಂದು ನಾಟಿ ತಳಿಯ ಎತ್ತು ಅಥವಾ ಹಸು ಸಾಕಬೇಕಿದೆ. ಈ ಮೂಲಕ ಅದರ ಸಂತತಿ ಉಳಿಸಬೇಕು. ರಾಜ್ಯದ ಹಾವೇರಿ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಕ್ರಾಂತಿ ಹಬ್ಬದಲ್ಲಿ ಓಟ ನಡೆಸಲಾಗುತ್ತಿದೆ. ಆದರೆ ನಮ್ಮ ಕೋಲಾರ ಜಿಲ್ಲೆಯಲ್ಲಿ ಅದಕ್ಕೆ ಅವಕಾಶ ಕಲ್ಪಿಸದ ಕಾರಣ ಅಂಥ ಸಾಹಸ ಮಾಡುವುದಿಲ್ಲ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>