ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಜ್ಜೇನು ದಾಳಿ: ಮೂವರಿಗೆ ಗಾಯ

Last Updated 8 ಏಪ್ರಿಲ್ 2020, 16:50 IST
ಅಕ್ಷರ ಗಾತ್ರ

ಬಂಗಾರಪೇಟೆ: ತಾಲ್ಲೂಕಿನ ಯರಗೋಳ್ ಗ್ರಾಮದ ಸಮೀಪ ತೆಂಗಿನ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮೂವರ ಮೇಲೆ ಹೆಜ್ಜೇನುಗಳು ದಾಳಿ ನಡೆಸಿವೆ.

ಯರಗೋಳ್ ಗ್ರಾಮದ ರಾಮೋಜಿ ರಾವ್, ವೆಂಕೋಬರಾವ್, ವೆಂಕೂಬಾಯಿ ಅವರ ಮೇಲೆ ದಾಳಿ ನಡೆಸಿದೆ.

108 ಆಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿದ್ದು, ಚಿಕಿತ್ಸೆ ನೀಡಲಾಗಿದೆ. ವೆಂಕೋಬರಾವ್ ಅವರಿಗೆ ಕೆಮ್ಮು ಇರುವ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಕೋಲಾರದ ಎಸ್ಎನ್ಆರ್ ಆಸ್ಪತ್ರೆಗೆ ಹೋಗುವಂತೆ
ಸೂಚಿಸಲಾಗಿದೆ.

ತೋಟದಲ್ಲಿ ಬೆಂಕಿ ಹಾಕಿದ್ದ ಕಾರಣ ಹೆಜ್ಜೇನು ಎದ್ದಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT