<p><strong>ಬಂಗಾರಪೇಟೆ</strong>: ತಾಲ್ಲೂಕಿನ ಪುತ್ರಸೊಣ್ಣೇನಹಳ್ಳಿಯಲ್ಲಿ ಅರಳೀಕಾಯಿಯನ್ನು ಬಾದಾಮಿ ಎಂದು ಭಾವಿಸಿ ತಿಂದ ಏಳು ಸರ್ಕಾರಿ ಪ್ರಥಾಮಿಕ ಶಾಲೆ ಮಕ್ಕಳು ವಾಂತಿ, ಭೇದಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. </p>.<p>ಅಸ್ವಸ್ಥರಾದ ಮಕ್ಕಳನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಸೋಮವಾರ ಮಧ್ಯಾಹ್ನ ಊಟ ಮಾಡಿದ ನಂತರ ಎಲ್ಲ ಮಕ್ಕಳು ಶಾಲೆ ಆವರಣದಲ್ಲಿ ಆಟವಾಡುತ್ತಿದ್ದರು. ಏಳು ಮಕ್ಕಳು ಶಾಲೆ ಕಾಂಪೌಂಡ್ ಪಕ್ಕದಲ್ಲಿನ ತೋಟದಲ್ಲಿ ಕಡಿದುಹಾಕಲಾಗಿದ್ದ ಗಿಡದಲ್ಲಿದ್ದ ಅರಳೀಕಾಯಿಯನ್ನು ಬಾದಾಮಿ ಎಂದು ಭಾವಿಸಿ ತಿಂದಿದ್ದಾರೆ. </p>.<p>ವಾಂತಿ ಮತ್ತು ಭೇದಿ ಪ್ರಾರಂಭವಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. </p>.<p>ಶಾಲಾ ಶಿಕ್ಷಕಿಯೂ ಈ ಹಣನ್ನು ತಿಂದಿದ್ದಾರೆ. ಅವರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ. </p>.<p>ಈ ಘಟನೆಯ ಮಾಹಿತಿ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಬಿಇಒ ಜಿ. ಗುರುಮೂರ್ತಿ, ಶಿಕ್ಷಕರ ಸಂಘದ ಅಧ್ಯಕ್ಷ ಆಂಜನೇಯ ಗೌಡ, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸುಜಾತ, ಮಕ್ಕಳ ಆರೋಗ್ಯ ವಿಚಾರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ತಾಲ್ಲೂಕಿನ ಪುತ್ರಸೊಣ್ಣೇನಹಳ್ಳಿಯಲ್ಲಿ ಅರಳೀಕಾಯಿಯನ್ನು ಬಾದಾಮಿ ಎಂದು ಭಾವಿಸಿ ತಿಂದ ಏಳು ಸರ್ಕಾರಿ ಪ್ರಥಾಮಿಕ ಶಾಲೆ ಮಕ್ಕಳು ವಾಂತಿ, ಭೇದಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. </p>.<p>ಅಸ್ವಸ್ಥರಾದ ಮಕ್ಕಳನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಸೋಮವಾರ ಮಧ್ಯಾಹ್ನ ಊಟ ಮಾಡಿದ ನಂತರ ಎಲ್ಲ ಮಕ್ಕಳು ಶಾಲೆ ಆವರಣದಲ್ಲಿ ಆಟವಾಡುತ್ತಿದ್ದರು. ಏಳು ಮಕ್ಕಳು ಶಾಲೆ ಕಾಂಪೌಂಡ್ ಪಕ್ಕದಲ್ಲಿನ ತೋಟದಲ್ಲಿ ಕಡಿದುಹಾಕಲಾಗಿದ್ದ ಗಿಡದಲ್ಲಿದ್ದ ಅರಳೀಕಾಯಿಯನ್ನು ಬಾದಾಮಿ ಎಂದು ಭಾವಿಸಿ ತಿಂದಿದ್ದಾರೆ. </p>.<p>ವಾಂತಿ ಮತ್ತು ಭೇದಿ ಪ್ರಾರಂಭವಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. </p>.<p>ಶಾಲಾ ಶಿಕ್ಷಕಿಯೂ ಈ ಹಣನ್ನು ತಿಂದಿದ್ದಾರೆ. ಅವರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದುಬಂದಿದೆ. </p>.<p>ಈ ಘಟನೆಯ ಮಾಹಿತಿ ತಿಳಿದು ಆಸ್ಪತ್ರೆಗೆ ಭೇಟಿ ನೀಡಿದ ಬಿಇಒ ಜಿ. ಗುರುಮೂರ್ತಿ, ಶಿಕ್ಷಕರ ಸಂಘದ ಅಧ್ಯಕ್ಷ ಆಂಜನೇಯ ಗೌಡ, ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸುಜಾತ, ಮಕ್ಕಳ ಆರೋಗ್ಯ ವಿಚಾರಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>