<p><strong>ಬಂಗಾರಪೇಟೆ</strong>: ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆ ಕಳವು ಪ್ರಕರಣಗಳಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಬುಕ್ಕಸಾಗರಂ ಗ್ರಾಮದ ಮಾದೇಶ್.ಆರ್ (25) ಬಂಧಿತ ಆರೋಪಿ. ಆರೋಪಿಯಿಂದ ₹2.50 ಲಕ್ಷ ಮೌಲ್ಯದ 17 ಗ್ರಾಂ ಚಿನ್ನಾಭರಣ, ₹55 ಸಾವಿರ ನಗದು, ಮೊಬೈಲ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ್ದ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.</p>.<p>ಡಿ.9 ರಂದು ಕೊಳಮೂರು ಗ್ರಾಮದ ನಿವಾಸಿ ಲಕ್ಷ್ಮಿಭಾಯಿ ಹಾಗೂ ಡಿ.19 ರಂದು ಡಿ.ಪಿ.ಹಳ್ಳಿಯ ಈಶ್ವರ್ರಾವ್ ಎಂಬುವರು ತಮ್ಮ ಮನೆಗಳಲ್ಲಿ ಕಳ್ಳತನವಾಗಿರುವ ಬಗ್ಗೆ ಕಾಮಮುದ್ರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರತ್ಯೇಕ ಪ್ರಕರಣ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.</p>.<p>ಪ್ರಕರಣ ತನಿಖೆಗೆ ಡಿವೈಎಸ್ಪಿ ವಿ.ಲಕ್ಷ್ಮಯ್ಯ ಮತ್ತು ಕಾಮಸಮುದ್ರ ಪ್ರಭಾರ ಸಿಪಿಐ ಎಸ್.ಟಿ.ಮಾರ್ಕೊಂಡಯ್ಯ ಅವರ ಮಾರ್ಗದರ್ಶನದಲ್ಲಿ, ಕಾಮಸಮುದ್ರ ಪಿಎಸ್ಐ ಬಿ.ವಿ.ಕಿರಣ್ಕುಮಾರ್ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳವನ್ನು ರಚಿಸಲಾಗಿತ್ತು. ಈ ತಂಡವು ತನಿಖೆ ಆರಂಭಿಸಿ ಆರೋಪಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ ಕೊಳಮೂರು ಮತ್ತು ಡಿ.ಪಿ.ಹಳ್ಳಿಯ ಮನೆ ಕಳವು ಜೊತೆಗೆ ಕೆಜಿಎಫ್ ತಾಲ್ಲೂಕಿನ ಆಂಡರ್ಸನ್ ಪೇಟೆ ಪೊಲೀಸ್ ಠಾಣೆ ಸರಹದ್ದಿನಲ್ಲಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯನ್ನು ನ್ಯಾಯಾಂಗಕ್ಕೆ ಒಪ್ಪಿಸಲಾಗಿದೆ.</p>.<p>ಕಾರ್ಯಾಚರಣೆಯಲ್ಲಿ ಲಕ್ಷ್ಮಿ ನಾರಾಯಣ, ಮುನಾವರ್ಪಾಷ, ರಾಮರಾವ್, ರಾಮಕೃಷ್ಣಾರೆಡ್ಡಿ, ಮಂಜುನಾಥ, ಮಾರ್ಕೊಂಡ, ಲಕ್ಷ್ಮಣತೇಲಿ, ಗುರುಮೂರ್ತಿ ಇದ್ದರು.</p>.<p>ಆಂಡ್ರಸನ್ಪೇಟೆ ಪೊಲೀಸ್ ಠಾಣಾ ಸರಹದ್ದಿನ ಒಂದು ಮನೆ ಕಳ್ಳತನ ಪ್ರಕರಣದಲ್ಲಿ ಕಳ್ಳತನ ಮಾಡಿರುವ ವಿಚಾರ ಬೆಳಕಿಗೆ ಬಂದಿದ್ದು, ಆತನಿಂದ ಕಳ್ಳತನ ಮಾಡಲಾಗಿದ್ದ ರೂ.2,00,000/- ಮೌಲ್ಯದ 17 ಗ್ರಾಂ ಚಿನ್ನದ ಆಭರಣ, 55,500/- ನಗದು, 10,000/- ರೂ ಬೆಲೆ ಬಾಳುವ ಒಂದು ಮೊಬೈಲ್ ಪೋನ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ದ್ವಿಚಕ್ರವಾಹನವನ್ನು ವಶಪಡಿಸಿಕೊಂಡು ಆರೋಪಿಯ ವಿರುದ್ದ ಕಾನೂನು ಕ್ರಮ ವಹಿಸಿರುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ಕಾಮಸಮುದ್ರ ಪೊಲೀಸ್ ಠಾಣೆ ವ್ಯಾಪ್ತಿಯ ಮನೆ ಕಳವು ಪ್ರಕರಣಗಳಲ್ಲಿ ಒಬ್ಬ ಆರೋಪಿಯನ್ನು ಪೊಲೀಸರು ಸೋಮವಾರ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಬುಕ್ಕಸಾಗರಂ ಗ್ರಾಮದ ಮಾದೇಶ್.ಆರ್ (25) ಬಂಧಿತ ಆರೋಪಿ. ಆರೋಪಿಯಿಂದ ₹2.50 ಲಕ್ಷ ಮೌಲ್ಯದ 17 ಗ್ರಾಂ ಚಿನ್ನಾಭರಣ, ₹55 ಸಾವಿರ ನಗದು, ಮೊಬೈಲ್ ಹಾಗೂ ಕೃತ್ಯಕ್ಕೆ ಉಪಯೋಗಿಸಿದ್ದ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.</p>.<p>ಡಿ.9 ರಂದು ಕೊಳಮೂರು ಗ್ರಾಮದ ನಿವಾಸಿ ಲಕ್ಷ್ಮಿಭಾಯಿ ಹಾಗೂ ಡಿ.19 ರಂದು ಡಿ.ಪಿ.ಹಳ್ಳಿಯ ಈಶ್ವರ್ರಾವ್ ಎಂಬುವರು ತಮ್ಮ ಮನೆಗಳಲ್ಲಿ ಕಳ್ಳತನವಾಗಿರುವ ಬಗ್ಗೆ ಕಾಮಮುದ್ರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಪ್ರತ್ಯೇಕ ಪ್ರಕರಣ ಕುರಿತು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.</p>.<p>ಪ್ರಕರಣ ತನಿಖೆಗೆ ಡಿವೈಎಸ್ಪಿ ವಿ.ಲಕ್ಷ್ಮಯ್ಯ ಮತ್ತು ಕಾಮಸಮುದ್ರ ಪ್ರಭಾರ ಸಿಪಿಐ ಎಸ್.ಟಿ.ಮಾರ್ಕೊಂಡಯ್ಯ ಅವರ ಮಾರ್ಗದರ್ಶನದಲ್ಲಿ, ಕಾಮಸಮುದ್ರ ಪಿಎಸ್ಐ ಬಿ.ವಿ.ಕಿರಣ್ಕುಮಾರ್ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳವನ್ನು ರಚಿಸಲಾಗಿತ್ತು. ಈ ತಂಡವು ತನಿಖೆ ಆರಂಭಿಸಿ ಆರೋಪಿಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ ಕೊಳಮೂರು ಮತ್ತು ಡಿ.ಪಿ.ಹಳ್ಳಿಯ ಮನೆ ಕಳವು ಜೊತೆಗೆ ಕೆಜಿಎಫ್ ತಾಲ್ಲೂಕಿನ ಆಂಡರ್ಸನ್ ಪೇಟೆ ಪೊಲೀಸ್ ಠಾಣೆ ಸರಹದ್ದಿನಲ್ಲಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಆರೋಪಿಯನ್ನು ನ್ಯಾಯಾಂಗಕ್ಕೆ ಒಪ್ಪಿಸಲಾಗಿದೆ.</p>.<p>ಕಾರ್ಯಾಚರಣೆಯಲ್ಲಿ ಲಕ್ಷ್ಮಿ ನಾರಾಯಣ, ಮುನಾವರ್ಪಾಷ, ರಾಮರಾವ್, ರಾಮಕೃಷ್ಣಾರೆಡ್ಡಿ, ಮಂಜುನಾಥ, ಮಾರ್ಕೊಂಡ, ಲಕ್ಷ್ಮಣತೇಲಿ, ಗುರುಮೂರ್ತಿ ಇದ್ದರು.</p>.<p>ಆಂಡ್ರಸನ್ಪೇಟೆ ಪೊಲೀಸ್ ಠಾಣಾ ಸರಹದ್ದಿನ ಒಂದು ಮನೆ ಕಳ್ಳತನ ಪ್ರಕರಣದಲ್ಲಿ ಕಳ್ಳತನ ಮಾಡಿರುವ ವಿಚಾರ ಬೆಳಕಿಗೆ ಬಂದಿದ್ದು, ಆತನಿಂದ ಕಳ್ಳತನ ಮಾಡಲಾಗಿದ್ದ ರೂ.2,00,000/- ಮೌಲ್ಯದ 17 ಗ್ರಾಂ ಚಿನ್ನದ ಆಭರಣ, 55,500/- ನಗದು, 10,000/- ರೂ ಬೆಲೆ ಬಾಳುವ ಒಂದು ಮೊಬೈಲ್ ಪೋನ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ ಒಂದು ದ್ವಿಚಕ್ರವಾಹನವನ್ನು ವಶಪಡಿಸಿಕೊಂಡು ಆರೋಪಿಯ ವಿರುದ್ದ ಕಾನೂನು ಕ್ರಮ ವಹಿಸಿರುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>