<p><strong>ಬಂಗಾರಪೇಟೆ</strong>: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆಯಿಂದ ಶಿಕ್ಷಕರ ದಿನಾಚರಣೆಯನ್ನು ಮಂಗಳವಾರ ಇಲ್ಲಿ ಹಮ್ಮಿಕೊಳ್ಳಲಾಯಿತು. </p>.<p>ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮಾತನಾಡಿ, ‘ಸಾವಿತ್ರಿಬಾಯಿ ಫುಲೆ ಅವರು ದೇಶದ ಮೊದಲ ಶಿಕ್ಷಕಿಯಾಗಿದ್ದು, ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಸಮಾಜ ಸುಧಾರಣೆಗೆ ಅಪಾರ ಕೊಡುಗೆ ನೀಡಿದ್ದಾರೆ. ಈ ಮೂಲಕ ಅವರು ಮಹಿಳೆಯರಿಗೆ ಪ್ರೇರಣಾ ಶಕ್ತಿಯಾಗಿದ್ದಾರೆ’ ಎಂದು ಪ್ರತಿಪಾದಿಸಿದರು. </p>.<p>ತಾಲ್ಲೂಕಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು, ಅವರು ಕೆಎಎಸ್, ಐಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಬೆಂಗಳೂರಿಗೆ ಹೋಗುವ ಅನಿವಾರ್ಯತೆ ಇದೆ. ಹೀಗಾಗಿ, ಅವರಿಗೆ ಅನುಕೂಲವಾಗುವಂತೆ ಪಟ್ಟಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಕೇಂದ್ರ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು. </p>.<p>ಶಿಕ್ಷಕರು ಮಕ್ಕಳಿಗೆ ಜ್ಙಾನ ತುಂಬಿ ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಲ್ಪಿಗಳು. ಅವರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ. ಆದರೆ ತಾಲ್ಲೂಕಿನಲ್ಲಿ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಹಿನ್ನಡೆಯಾಗಿದೆ. ಶಿಕ್ಷಕರು ಗ್ರಾಮೀಣ ಮಕ್ಕಳನ್ನು ತಮ್ಮ ಮಕ್ಕಳೆಂದು ತಿಳಿದು ಅವರಲ್ಲಿ ಆತ್ಮವಿಶ್ವಾಸ ತುಂಬಿ ಕೌಶಲ್ಯಗಳನ್ನು ವೃದ್ಧಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಬೇಕು. ಈ ಮೂಲಕ ಫಲಿತಾಂಶ ಹೆಚ್ಚಿಸಲು ಪ್ರಾಮಾಣಿಕ ಯತ್ನ ಮಾಡಬೇಕು ಎಂದು ಹೇಳಿದರು. </p>.<p>ಉತ್ತಮ ಶಿಕ್ಷಕರನ್ನು ಹಾಗೂ ನಿವೃತ್ತಿ ಹೊಂದಿರುವ ಶಿಕ್ಷಕರನ್ನು ಸನ್ಮಾನಿಸಲಾಯಿತು.</p>.<p>ಪುರಸಭೆ ಅಧ್ಯಕ್ಷ ಗೋವಿಂದ, ಕೆ. ಚಂದ್ರಾರೆಡ್ಡಿ, ತಹಶೀಲ್ದಾರ್ ಗ್ರೇಡ್ 2 ಜಿ.ಎಸ್. ಗಾಯತ್ರಿ, ಇಒ ರವಿಕುಮಾರ್, ಶಶಿಕಳ, ಸಿ. ಅಪ್ಪಯ್ಯ ಗೌಡ, ಆಂಜನೇಯಗೌಡ, ರವಿ, ಎಲ್. ರಾಮಕೃಷ್ಣಪ್ಪ, ಮಂಜುನಾಥ, ಪ್ರೇಮಲತಾ, ಆರ್. ಅಶ್ವಥ್, ಯುವರಾಜ್, ಎಲ್. ರಾಜಪ್ಪ, ಎಚ್.ಎಲ್ ಆನಂದ್, ಮುಕ್ತಿಯಾರ್, ಸುಜಾತಮ್ಮ, ಕೆ.ಜಿ. ಶ್ರೀನಿವಾಸ್, ಸಂಜೀವಪ್ಪ, ದೇವರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ಶಾಲಾ ಶಿಕ್ಷಣ ಇಲಾಖೆಯಿಂದ ಶಿಕ್ಷಕರ ದಿನಾಚರಣೆಯನ್ನು ಮಂಗಳವಾರ ಇಲ್ಲಿ ಹಮ್ಮಿಕೊಳ್ಳಲಾಯಿತು. </p>.<p>ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮಾತನಾಡಿ, ‘ಸಾವಿತ್ರಿಬಾಯಿ ಫುಲೆ ಅವರು ದೇಶದ ಮೊದಲ ಶಿಕ್ಷಕಿಯಾಗಿದ್ದು, ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಸಮಾಜ ಸುಧಾರಣೆಗೆ ಅಪಾರ ಕೊಡುಗೆ ನೀಡಿದ್ದಾರೆ. ಈ ಮೂಲಕ ಅವರು ಮಹಿಳೆಯರಿಗೆ ಪ್ರೇರಣಾ ಶಕ್ತಿಯಾಗಿದ್ದಾರೆ’ ಎಂದು ಪ್ರತಿಪಾದಿಸಿದರು. </p>.<p>ತಾಲ್ಲೂಕಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದು, ಅವರು ಕೆಎಎಸ್, ಐಎಎಸ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಬೆಂಗಳೂರಿಗೆ ಹೋಗುವ ಅನಿವಾರ್ಯತೆ ಇದೆ. ಹೀಗಾಗಿ, ಅವರಿಗೆ ಅನುಕೂಲವಾಗುವಂತೆ ಪಟ್ಟಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಕೇಂದ್ರ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು. </p>.<p>ಶಿಕ್ಷಕರು ಮಕ್ಕಳಿಗೆ ಜ್ಙಾನ ತುಂಬಿ ಭವಿಷ್ಯದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಶಿಲ್ಪಿಗಳು. ಅವರಿಗೆ ಸಮಾಜದಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ. ಆದರೆ ತಾಲ್ಲೂಕಿನಲ್ಲಿ ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಹಿನ್ನಡೆಯಾಗಿದೆ. ಶಿಕ್ಷಕರು ಗ್ರಾಮೀಣ ಮಕ್ಕಳನ್ನು ತಮ್ಮ ಮಕ್ಕಳೆಂದು ತಿಳಿದು ಅವರಲ್ಲಿ ಆತ್ಮವಿಶ್ವಾಸ ತುಂಬಿ ಕೌಶಲ್ಯಗಳನ್ನು ವೃದ್ಧಿಸುವ ಮೂಲಕ ಗುಣಮಟ್ಟದ ಶಿಕ್ಷಣ ನೀಡಬೇಕು. ಈ ಮೂಲಕ ಫಲಿತಾಂಶ ಹೆಚ್ಚಿಸಲು ಪ್ರಾಮಾಣಿಕ ಯತ್ನ ಮಾಡಬೇಕು ಎಂದು ಹೇಳಿದರು. </p>.<p>ಉತ್ತಮ ಶಿಕ್ಷಕರನ್ನು ಹಾಗೂ ನಿವೃತ್ತಿ ಹೊಂದಿರುವ ಶಿಕ್ಷಕರನ್ನು ಸನ್ಮಾನಿಸಲಾಯಿತು.</p>.<p>ಪುರಸಭೆ ಅಧ್ಯಕ್ಷ ಗೋವಿಂದ, ಕೆ. ಚಂದ್ರಾರೆಡ್ಡಿ, ತಹಶೀಲ್ದಾರ್ ಗ್ರೇಡ್ 2 ಜಿ.ಎಸ್. ಗಾಯತ್ರಿ, ಇಒ ರವಿಕುಮಾರ್, ಶಶಿಕಳ, ಸಿ. ಅಪ್ಪಯ್ಯ ಗೌಡ, ಆಂಜನೇಯಗೌಡ, ರವಿ, ಎಲ್. ರಾಮಕೃಷ್ಣಪ್ಪ, ಮಂಜುನಾಥ, ಪ್ರೇಮಲತಾ, ಆರ್. ಅಶ್ವಥ್, ಯುವರಾಜ್, ಎಲ್. ರಾಜಪ್ಪ, ಎಚ್.ಎಲ್ ಆನಂದ್, ಮುಕ್ತಿಯಾರ್, ಸುಜಾತಮ್ಮ, ಕೆ.ಜಿ. ಶ್ರೀನಿವಾಸ್, ಸಂಜೀವಪ್ಪ, ದೇವರಾಜ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>