<p><strong>ಬಂಗಾರಪೇಟೆ:</strong> ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಾಲ್ಲೂಕಿನಲ್ಲಿ ಅನುಷ್ಠಾನ ಗೊಳಸಬೇಕು. ಅರ್ಹ ಫಲಾನುಭವಿಗಳು ಯಾರು ಕೂಡ ಯೋಜನೆಯಿಂದ ವಂಚಿತರಾಗಬಾರದು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಎ.ಪಾರ್ಥಸಾರಥಿ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಸಭಾಂಗಣದಲ್ಲಿ ಮಂಗಳವಾರ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲ ಅರ್ಹರಿಗೂ ಯೋಜನೆಗಳು ಲಭಿಸುತ್ತಿದೆಯೇ ಎಂಬುದನ್ನು ಪ್ರಗತಿ ಪರಿಶೀಲನೆ ನಡೆಸಲಾಯಿತು ಎಂದರು.</p>.<p>ಯುವನಿಧಿ ಯೋಜನೆ ಕುರಿತು ತಾಲ್ಲೂಕಿನ ಎಲ್ಲ ಕಾಲೇಜುಗಳಲ್ಲಿ ಪ್ರಚಾರ ಮಾಡಿ ಯುವಕರಿಗೆ ಅರಿವು ಮೂಡಿಸಬೇಕು. ನಿರುದ್ಯೋಗಿ ಯುವಕ–ಯುವತಿಯರಿಗೆ ಉದ್ಯೋಗ ಸಿಗುವವರೆಗೂ ಸರ್ಕಾರ ನೀಡುವ ₹3ಸಾವಿರ ಪಡೆಯುವಂತೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಹೊಸದಾಗಿ ಮನೆ ಕಟ್ಟುವವರಿಗೆ ಮೀಟರ್ ಅಳವಡಿಸಲು ಸರ್ಕಾರದ ನಿಯಮಗಳ ಅನುಸಾರ ಅನುಮತಿ ಪಡೆಯುವುದು ಕಡ್ಡಾಯ. ಇದರ ಮಾರ್ಗದರ್ಶನದಂತೆಯೇ ಮನೆ ನಿರ್ಮಾಣ ಮಾಡಿರುವವರಿಗೆ ಮಾತ್ರ ಬೆಸ್ಕಾಂನಿಂದ ಮೀಟರ್ ನೀಡಲಾಗುವುದು ಎಂದು ಸಭೆಗೆ ಬೆಸ್ಕಾಂ ಎಇಇ ಸುಕುಮಾರ್ ರಾಜು ತಿಳಿಸಿದರು.</p>.<p>ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಉಪಾಧ್ಯಕ್ಷ ರಫೀಕ್, ಸದಸ್ಯರಾದ ಸಿ.ಎಂ ಹರೀಶ್ ಕುಮಾರ್, ಬಿ.ವಿ ಶಂಕರ್, ವಿನೋದ್, ನಾರಾಯಣಸ್ವಾಮಿ, ಬೀರಪ್ಪ, ರೇಣುಕಮ್ಮ, ಸುಜಾತಮ್ಮ, ಲಕ್ಷ್ಮಮ್ಮ, ತಾ.ಪಂ ಇಒ ರವಿಕುಮಾರ್, ಬೆಸ್ಕಾಂ ಎಇಇ ಸುಕುಮಾರ್ ರಾಜು, ಸಮಾಜ ಕಲ್ಯಾಣಾಧಿಕಾರಿ ಅಂಜಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಾಲ್ಲೂಕಿನಲ್ಲಿ ಅನುಷ್ಠಾನ ಗೊಳಸಬೇಕು. ಅರ್ಹ ಫಲಾನುಭವಿಗಳು ಯಾರು ಕೂಡ ಯೋಜನೆಯಿಂದ ವಂಚಿತರಾಗಬಾರದು ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಸ್.ಎ.ಪಾರ್ಥಸಾರಥಿ ಹೇಳಿದರು.</p>.<p>ಪಟ್ಟಣದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಸಭಾಂಗಣದಲ್ಲಿ ಮಂಗಳವಾರ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರೀಶೀಲನೆ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲ ಅರ್ಹರಿಗೂ ಯೋಜನೆಗಳು ಲಭಿಸುತ್ತಿದೆಯೇ ಎಂಬುದನ್ನು ಪ್ರಗತಿ ಪರಿಶೀಲನೆ ನಡೆಸಲಾಯಿತು ಎಂದರು.</p>.<p>ಯುವನಿಧಿ ಯೋಜನೆ ಕುರಿತು ತಾಲ್ಲೂಕಿನ ಎಲ್ಲ ಕಾಲೇಜುಗಳಲ್ಲಿ ಪ್ರಚಾರ ಮಾಡಿ ಯುವಕರಿಗೆ ಅರಿವು ಮೂಡಿಸಬೇಕು. ನಿರುದ್ಯೋಗಿ ಯುವಕ–ಯುವತಿಯರಿಗೆ ಉದ್ಯೋಗ ಸಿಗುವವರೆಗೂ ಸರ್ಕಾರ ನೀಡುವ ₹3ಸಾವಿರ ಪಡೆಯುವಂತೆ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.</p>.<p>ಹೊಸದಾಗಿ ಮನೆ ಕಟ್ಟುವವರಿಗೆ ಮೀಟರ್ ಅಳವಡಿಸಲು ಸರ್ಕಾರದ ನಿಯಮಗಳ ಅನುಸಾರ ಅನುಮತಿ ಪಡೆಯುವುದು ಕಡ್ಡಾಯ. ಇದರ ಮಾರ್ಗದರ್ಶನದಂತೆಯೇ ಮನೆ ನಿರ್ಮಾಣ ಮಾಡಿರುವವರಿಗೆ ಮಾತ್ರ ಬೆಸ್ಕಾಂನಿಂದ ಮೀಟರ್ ನೀಡಲಾಗುವುದು ಎಂದು ಸಭೆಗೆ ಬೆಸ್ಕಾಂ ಎಇಇ ಸುಕುಮಾರ್ ರಾಜು ತಿಳಿಸಿದರು.</p>.<p>ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಉಪಾಧ್ಯಕ್ಷ ರಫೀಕ್, ಸದಸ್ಯರಾದ ಸಿ.ಎಂ ಹರೀಶ್ ಕುಮಾರ್, ಬಿ.ವಿ ಶಂಕರ್, ವಿನೋದ್, ನಾರಾಯಣಸ್ವಾಮಿ, ಬೀರಪ್ಪ, ರೇಣುಕಮ್ಮ, ಸುಜಾತಮ್ಮ, ಲಕ್ಷ್ಮಮ್ಮ, ತಾ.ಪಂ ಇಒ ರವಿಕುಮಾರ್, ಬೆಸ್ಕಾಂ ಎಇಇ ಸುಕುಮಾರ್ ರಾಜು, ಸಮಾಜ ಕಲ್ಯಾಣಾಧಿಕಾರಿ ಅಂಜಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>