<p><strong>ಬಂಗಾರಪೇಟೆ:</strong> ಪಟ್ಟಣದ ಜನರ ಆಶಯದಂತೆ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಸಂತಸ ವ್ಯಕ್ತಪಡಿಸಿದರು.</p>.<p>ಪಟ್ಟಣದ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ 25 ವರ್ಷಗಳ ಕನಸು ಇಂದು ನನಸಾಗಿದೆ. ಇದು ಬಂಗಾರಪೇಟೆ ಸಮಗ್ರ ಅಭಿವೃದ್ಧಿಗೆ ಪೂರಕ ಎಂದರು. </p>.<p>ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪ್ರತ್ಯೇಕಿಸಿ, ಬಂಗಾರಪೇಟೆ ನಗರಾಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿದೆ. ಇದರಿಂದ ಸಾರ್ವಜನಿಕರ ಕೆಲಸಗಳು ಸುಗಮವಾಗಿ ಸಾಗಲು ಅನುಕೂಲವಾಗುತ್ತದೆ ಎಂದು ತಿಳಿಸಿದರು. </p>.<p>ಪಟ್ಟಣವು ವಿಸ್ತರಣೆಯಾಗುತ್ತಿದ್ದು, ಅಗತ್ಯ ದಾಖಲೆಗಳ ಕೊರತೆಯಿಂದಾಗಿ ನಗರಸಭೆ ಮಾಡಲು ಸಾಧ್ಯವಾಗಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಹಾಗೂ ಎಲ್ಲಾ ಅಧಿಕಾರಿಗಳ ಸಹಕಾರದೊಂದಿಗೆ ಇಂದು ಪುರಸಭೆಯನ್ನು ನಗರಸಭೆಯನ್ನಾಗಿಸಲು ಸರ್ಕಾರ ಆದೇಶ ಹೊರಡಿಸಿದೆ ಎಂದರು.</p>.<p>ನಗರಸಭೆ ವ್ಯಾಪ್ತಿಗೆ ನೂತನವಾಗಿ ದೇಶಿಹಳ್ಳಿ, ಕಾರಹಳ್ಳಿ, ಬೆಂಗನೂರು ಗ್ರಾಮದ ಕೆಲವು ಸರ್ವೆ ನಂಬರ್ಗಳು ಸೇರ್ಪಡೆಯಾಗಿವೆ. ಯಾವುದೇ ಕಾರಣಕ್ಕೂ ಬೆಂಗನೂರು, ಹುಣಸನಹಳ್ಳಿ , ಕಾರಹಳ್ಳಿ, ಐನೋರಾ ಹೊಸಹಳ್ಳಿ ಗ್ರಾಮಗಳನ್ನು ಪಂಚಾಯಿತಿಗಳಿಂದ ಬೇರ್ಪಡಿಸಿ ನಗರಕ್ಕೆ ಸೇರ್ಪಡೆ ಮಾಡಿಲ್ಲ ಎಂದು ಸ್ವಷ್ಟನೆ ನೀಡಿದರು.</p>.<p>ಬಂಗಾರಪೇಟೆ ನಗರ ಸಮಗ್ರ ಅಭಿವೃದ್ಧಿಗೆ ಸುಮಾರು ₹257 ಕೋಟಿ ಡಿಪಿಆರ್ ಮಾಡಿ ಸರ್ಕಾರಕ್ಕೆ ಸಲ್ಲಿಸಿದ್ದೇನೆ. ಹಣ ಮಂಜೂರು ಮಾಡಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.</p>.<p>ಮುಖ್ಯಮಂತ್ರಿಗಳ ವಿಶೇಷ ₹8 ಕೋಟಿ ಅನುದಾನದಿಂದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಹಳೆ ಪುರಸಭೆ ಕಚೇರಿ ನವೀಕರಣ, ರಂಗ ಮಂದಿರ ಕಾಮಗಾರಿ, ಒಳ ಕ್ರೀಡಾಂಗಣ, ಬಸ್ ನಿಲ್ದಾಣ, ಕನ್ನಡ ಭವನ, ಸಂಸ್ಕೃತಿ ಭವನ, ಅಂಬೇಡ್ಕರ್ ಭವನ ಹಾಗೂ ಕೋಲಾರ ರಸ್ತೆ ಅಗಲೀಕರಣ ಕಾಮಗಾರಿಗಳನ್ನು ಪೂರ್ಣಗೊಳಿಸುವ ಭರವಸೆ ನೀಡಿದರು.</p>.<p>ಈ ವೇಳೆ ಪುರಸಭೆಯ ಅಧ್ಯಕ್ಷ ಗೋವಿಂದ, ಉಪಾಧ್ಯಕ್ಷ ಚಂದ್ರವೇಣಿ ಮಂಜುನಾಥ್, ವೆಂಕಟೇಶ್, ಶಫಿ, ರಾಕೇಶ್ ಗೌಡ, ಪ್ರಶಾಂತ್, ಅರುಣಾಚಲಂಮಣಿ, ರಫೀಕ್, ಸಾದಿಕ್, ಬಾಬುಲಾಲ್, ಸತ್ಯನಾರಾಯಣ, ರವಿ, ಮಂಜುನಾಥ್, ಹರೀಶ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ಪಟ್ಟಣದ ಜನರ ಆಶಯದಂತೆ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಸಂತಸ ವ್ಯಕ್ತಪಡಿಸಿದರು.</p>.<p>ಪಟ್ಟಣದ ಶಾಸಕರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಮೂಲಕ 25 ವರ್ಷಗಳ ಕನಸು ಇಂದು ನನಸಾಗಿದೆ. ಇದು ಬಂಗಾರಪೇಟೆ ಸಮಗ್ರ ಅಭಿವೃದ್ಧಿಗೆ ಪೂರಕ ಎಂದರು. </p>.<p>ಕೆಜಿಎಫ್ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪ್ರತ್ಯೇಕಿಸಿ, ಬಂಗಾರಪೇಟೆ ನಗರಾಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಗಿದೆ. ಇದರಿಂದ ಸಾರ್ವಜನಿಕರ ಕೆಲಸಗಳು ಸುಗಮವಾಗಿ ಸಾಗಲು ಅನುಕೂಲವಾಗುತ್ತದೆ ಎಂದು ತಿಳಿಸಿದರು. </p>.<p>ಪಟ್ಟಣವು ವಿಸ್ತರಣೆಯಾಗುತ್ತಿದ್ದು, ಅಗತ್ಯ ದಾಖಲೆಗಳ ಕೊರತೆಯಿಂದಾಗಿ ನಗರಸಭೆ ಮಾಡಲು ಸಾಧ್ಯವಾಗಿರಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಹಾಗೂ ಎಲ್ಲಾ ಅಧಿಕಾರಿಗಳ ಸಹಕಾರದೊಂದಿಗೆ ಇಂದು ಪುರಸಭೆಯನ್ನು ನಗರಸಭೆಯನ್ನಾಗಿಸಲು ಸರ್ಕಾರ ಆದೇಶ ಹೊರಡಿಸಿದೆ ಎಂದರು.</p>.<p>ನಗರಸಭೆ ವ್ಯಾಪ್ತಿಗೆ ನೂತನವಾಗಿ ದೇಶಿಹಳ್ಳಿ, ಕಾರಹಳ್ಳಿ, ಬೆಂಗನೂರು ಗ್ರಾಮದ ಕೆಲವು ಸರ್ವೆ ನಂಬರ್ಗಳು ಸೇರ್ಪಡೆಯಾಗಿವೆ. ಯಾವುದೇ ಕಾರಣಕ್ಕೂ ಬೆಂಗನೂರು, ಹುಣಸನಹಳ್ಳಿ , ಕಾರಹಳ್ಳಿ, ಐನೋರಾ ಹೊಸಹಳ್ಳಿ ಗ್ರಾಮಗಳನ್ನು ಪಂಚಾಯಿತಿಗಳಿಂದ ಬೇರ್ಪಡಿಸಿ ನಗರಕ್ಕೆ ಸೇರ್ಪಡೆ ಮಾಡಿಲ್ಲ ಎಂದು ಸ್ವಷ್ಟನೆ ನೀಡಿದರು.</p>.<p>ಬಂಗಾರಪೇಟೆ ನಗರ ಸಮಗ್ರ ಅಭಿವೃದ್ಧಿಗೆ ಸುಮಾರು ₹257 ಕೋಟಿ ಡಿಪಿಆರ್ ಮಾಡಿ ಸರ್ಕಾರಕ್ಕೆ ಸಲ್ಲಿಸಿದ್ದೇನೆ. ಹಣ ಮಂಜೂರು ಮಾಡಿ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.</p>.<p>ಮುಖ್ಯಮಂತ್ರಿಗಳ ವಿಶೇಷ ₹8 ಕೋಟಿ ಅನುದಾನದಿಂದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಹಳೆ ಪುರಸಭೆ ಕಚೇರಿ ನವೀಕರಣ, ರಂಗ ಮಂದಿರ ಕಾಮಗಾರಿ, ಒಳ ಕ್ರೀಡಾಂಗಣ, ಬಸ್ ನಿಲ್ದಾಣ, ಕನ್ನಡ ಭವನ, ಸಂಸ್ಕೃತಿ ಭವನ, ಅಂಬೇಡ್ಕರ್ ಭವನ ಹಾಗೂ ಕೋಲಾರ ರಸ್ತೆ ಅಗಲೀಕರಣ ಕಾಮಗಾರಿಗಳನ್ನು ಪೂರ್ಣಗೊಳಿಸುವ ಭರವಸೆ ನೀಡಿದರು.</p>.<p>ಈ ವೇಳೆ ಪುರಸಭೆಯ ಅಧ್ಯಕ್ಷ ಗೋವಿಂದ, ಉಪಾಧ್ಯಕ್ಷ ಚಂದ್ರವೇಣಿ ಮಂಜುನಾಥ್, ವೆಂಕಟೇಶ್, ಶಫಿ, ರಾಕೇಶ್ ಗೌಡ, ಪ್ರಶಾಂತ್, ಅರುಣಾಚಲಂಮಣಿ, ರಫೀಕ್, ಸಾದಿಕ್, ಬಾಬುಲಾಲ್, ಸತ್ಯನಾರಾಯಣ, ರವಿ, ಮಂಜುನಾಥ್, ಹರೀಶ್ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>