<p><strong>ಬಂಗಾರಪೇಟೆ</strong>: ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಭಾನುವಾರ ತಾಲ್ಲೂಕಿನ ದೊಡ್ಡೋರು ಕರಪನಹಳ್ಳಿಯ ಖಾಲಿ ಕೆರೆಯಲ್ಲಿ ಸುರಕ್ಷಿತವಾಗಿ ಇಳಿದಿದೆ. </p>.<p>ಬೆಂಗಳೂರಿನ ಯಲಹಂಕದಿಂದ ಮಧ್ಯಾಹ್ನ ಮೂರು ಗಂಟೆಗೆ ಹಾರಿದ ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್ ಚೆನ್ನೈನ ತಾಂಬರಂ ವಾಯುನೆಲೆಗೆ ಹೊರಟಿದ್ದವು.</p>.<p>ಮಾರ್ಗಮಧ್ಯೆ ಒಂದು ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ದೊಡ್ಡೋರು ಕರಪನಹಳ್ಳಿ ಮೇಲೆ ಕೆಲ ಹೊತ್ತು ಹಾರಾಟ ನಡೆಸಿ, ಕೊನೆಗೆ ಸಂಜೆ 4ಕ್ಕೆ ಖಾಲಿ ಕೆರೆಯಲ್ಲಿ ಸುರಕ್ಷಿತವಾಗಿ ಇಳಿದಿದೆ. ಮತ್ತೊಂದು ಹೆಲಿಕಾಪ್ಟರ್ ಚೆನ್ನೈನ ತಾಂಬರಂ ಕಡೆಗೆ ಹೊರಟು ಹೋಗಿದೆ. </p>.<p>ತುರ್ತು ಭೂಸ್ಪರ್ಶ ಮಾಡಿದ ಹೆಲಿಕಾಪ್ಟರ್ನಲ್ಲಿ ಇಬ್ಬರು ಪೈಲಟ್ ಮತ್ತು ಒಬ್ಬ ಗ್ರೌಂಡ್ ಸ್ಟಾಫ್ ಇದ್ದರು. ಬೆಂಗಳೂರಿನಿಂದ ಮತ್ತೊಂದು ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ತಂಡವೊಂದು ಸ್ಥಳಕ್ಕೆ ದೌಡಾಯಿಸಿದ್ದು, ತಾಂತ್ರಿಕ ಸಮಸ್ಯೆ ದುರಸ್ತಿ ಕಾರ್ಯ ಕೈಗೊಂಡಿದೆ. </p>.<p>ಇದಕ್ಕೂ ಮುನ್ನ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ಸ್ಥಳಕ್ಕೆ ಭೇಟಿ ನೀಡಿದ್ದರು. ಸುದ್ದಿ ತಿಳಿಯುತ್ತಲೇ ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ಸ್ಥಳಕ್ಕೆ ದೌಡಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಭಾನುವಾರ ತಾಲ್ಲೂಕಿನ ದೊಡ್ಡೋರು ಕರಪನಹಳ್ಳಿಯ ಖಾಲಿ ಕೆರೆಯಲ್ಲಿ ಸುರಕ್ಷಿತವಾಗಿ ಇಳಿದಿದೆ. </p>.<p>ಬೆಂಗಳೂರಿನ ಯಲಹಂಕದಿಂದ ಮಧ್ಯಾಹ್ನ ಮೂರು ಗಂಟೆಗೆ ಹಾರಿದ ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್ ಚೆನ್ನೈನ ತಾಂಬರಂ ವಾಯುನೆಲೆಗೆ ಹೊರಟಿದ್ದವು.</p>.<p>ಮಾರ್ಗಮಧ್ಯೆ ಒಂದು ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ದೊಡ್ಡೋರು ಕರಪನಹಳ್ಳಿ ಮೇಲೆ ಕೆಲ ಹೊತ್ತು ಹಾರಾಟ ನಡೆಸಿ, ಕೊನೆಗೆ ಸಂಜೆ 4ಕ್ಕೆ ಖಾಲಿ ಕೆರೆಯಲ್ಲಿ ಸುರಕ್ಷಿತವಾಗಿ ಇಳಿದಿದೆ. ಮತ್ತೊಂದು ಹೆಲಿಕಾಪ್ಟರ್ ಚೆನ್ನೈನ ತಾಂಬರಂ ಕಡೆಗೆ ಹೊರಟು ಹೋಗಿದೆ. </p>.<p>ತುರ್ತು ಭೂಸ್ಪರ್ಶ ಮಾಡಿದ ಹೆಲಿಕಾಪ್ಟರ್ನಲ್ಲಿ ಇಬ್ಬರು ಪೈಲಟ್ ಮತ್ತು ಒಬ್ಬ ಗ್ರೌಂಡ್ ಸ್ಟಾಫ್ ಇದ್ದರು. ಬೆಂಗಳೂರಿನಿಂದ ಮತ್ತೊಂದು ಹೆಲಿಕಾಪ್ಟರ್ನಲ್ಲಿ ತಾಂತ್ರಿಕ ತಂಡವೊಂದು ಸ್ಥಳಕ್ಕೆ ದೌಡಾಯಿಸಿದ್ದು, ತಾಂತ್ರಿಕ ಸಮಸ್ಯೆ ದುರಸ್ತಿ ಕಾರ್ಯ ಕೈಗೊಂಡಿದೆ. </p>.<p>ಇದಕ್ಕೂ ಮುನ್ನ ಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು ಸ್ಥಳಕ್ಕೆ ಭೇಟಿ ನೀಡಿದ್ದರು. ಸುದ್ದಿ ತಿಳಿಯುತ್ತಲೇ ಸುತ್ತಮುತ್ತಲಿನ ಗ್ರಾಮಸ್ಥರು ತಂಡೋಪ ತಂಡವಾಗಿ ಸ್ಥಳಕ್ಕೆ ದೌಡಾಯಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>