<p><strong>ಬಂಗಾರಪೇಟೆ:</strong> ನಗರದ ಪೊಲೀಸ್ ವಸತಿ ಗೃಹಗಳ ಬಳಿ ದಿನೇ ದಿನೇ ಕಸದ ರಾಶಿ ಹೆಚ್ಚಾಗುತ್ತಿದ್ದು, ಇಡೀ ಪ್ರದೇಶ ದುರ್ವಾಸನೆ ಹಾಗೂ ಸೊಳ್ಳೆಗಳ ಕಾಟದಿಂದ ನಿವಾಸಿಗಳು ತೊಂದರೆ ಅನುಭವಿಸುವಂತಾಗಿತ್ತು.</p>.<p>ದಿನವಿಡೀ ಕೊಳೆತು ನಾರುತ್ತಿದ್ದ ವಾಸನೆಯಿಂದ ಬಾಗಿಲು, ಕಿಟಕಿ ಮುಚ್ಚಿಕೊಂಡು ಕಾಲ ಕಳೆಯುವಂತಾಗಿದೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.</p>.<p>ಈ ಬಗ್ಗೆ ಮೇ 21 ರಂದು ಪ್ರಜಾವಾಣಿ ಪತ್ರಿಕೆಯಲ್ಲಿ ‘ಕಸ ತೆರವಿಗೆ ಮನವಿ’ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟವಾಗಿತ್ತು. ಈ ವರದಿಗೆ ಎಚ್ಚೆತ್ತ ನಗರಸಭೆ ಅಧಿಕಾರಿಗಳು ಬೆಳಗ್ಗೆಯೇ ಪೌರಕಾರ್ಮಿಕರ ತಂಡ, ಬೃಹತ್ ನಿರ್ಮಾಣ ಯಂತ್ರ ಮತ್ತು ಕಸದ ವಾಹನದೊಂದಿಗೆ ಸ್ಥಳಕ್ಕೆ ದಾವಿಸಿ ಕಸದ ರಾಶಿಯನ್ನು ತೆರವುಗೊಳಿಸಿ, ಇಡೀ ಪ್ರದೇಶವನ್ನು ಸ್ವಚ್ಛಗೊಳಿಸಿದ್ದಾರೆ. ಜೊತೆಗೆ ಫಾಗಿಂಗ್ ಮಾಡಿ, ಬೀಚಿಂಗ್ ಪೌಡರ್ ಸಿಂಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-18-691387079</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ನಗರದ ಪೊಲೀಸ್ ವಸತಿ ಗೃಹಗಳ ಬಳಿ ದಿನೇ ದಿನೇ ಕಸದ ರಾಶಿ ಹೆಚ್ಚಾಗುತ್ತಿದ್ದು, ಇಡೀ ಪ್ರದೇಶ ದುರ್ವಾಸನೆ ಹಾಗೂ ಸೊಳ್ಳೆಗಳ ಕಾಟದಿಂದ ನಿವಾಸಿಗಳು ತೊಂದರೆ ಅನುಭವಿಸುವಂತಾಗಿತ್ತು.</p>.<p>ದಿನವಿಡೀ ಕೊಳೆತು ನಾರುತ್ತಿದ್ದ ವಾಸನೆಯಿಂದ ಬಾಗಿಲು, ಕಿಟಕಿ ಮುಚ್ಚಿಕೊಂಡು ಕಾಲ ಕಳೆಯುವಂತಾಗಿದೆ ಎಂದು ಇಲ್ಲಿನ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.</p>.<p>ಈ ಬಗ್ಗೆ ಮೇ 21 ರಂದು ಪ್ರಜಾವಾಣಿ ಪತ್ರಿಕೆಯಲ್ಲಿ ‘ಕಸ ತೆರವಿಗೆ ಮನವಿ’ ಎಂಬ ಶೀರ್ಷಿಕೆಯಡಿಯಲ್ಲಿ ವರದಿ ಪ್ರಕಟವಾಗಿತ್ತು. ಈ ವರದಿಗೆ ಎಚ್ಚೆತ್ತ ನಗರಸಭೆ ಅಧಿಕಾರಿಗಳು ಬೆಳಗ್ಗೆಯೇ ಪೌರಕಾರ್ಮಿಕರ ತಂಡ, ಬೃಹತ್ ನಿರ್ಮಾಣ ಯಂತ್ರ ಮತ್ತು ಕಸದ ವಾಹನದೊಂದಿಗೆ ಸ್ಥಳಕ್ಕೆ ದಾವಿಸಿ ಕಸದ ರಾಶಿಯನ್ನು ತೆರವುಗೊಳಿಸಿ, ಇಡೀ ಪ್ರದೇಶವನ್ನು ಸ್ವಚ್ಛಗೊಳಿಸಿದ್ದಾರೆ. ಜೊತೆಗೆ ಫಾಗಿಂಗ್ ಮಾಡಿ, ಬೀಚಿಂಗ್ ಪೌಡರ್ ಸಿಂಪಡಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260522-18-691387079</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>