<p><strong>ಬೇತಮಂಗಲ</strong>: ಸಮೀಪದ ಬಂಗಾರು ತಿರುಪತಿ (ಗುಟ್ಟಹಳ್ಳಿ) ಅಲುಮೇಲು ಮಂಗಮ್ಮ ಸಮೇತ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಭರತ ಹುಣ್ಣಿಮೆ ಜಾತ್ರಾ ಮಹೋತ್ಸವ ಫೆ.1 ರಂದು ನಡೆಯಲಿದೆ.</p>.<p>ಜಾತ್ರಾ ಅಂಗವಾಗಿ ದೇವಾಲಯದಲ್ಲಿ ಜ.26 ರಿಂದ ಪ್ರತಿನಿತ್ಯವೂ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ. ಜೊತೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ.</p>.<p>ಜ.31 ರಂದು ಹಗಲು ಗಜ ವಾಹನೋತ್ಸವ ಮತ್ತು ಗರುಡೋತ್ಸವ ನೆರವೇರಲಿವೆ. ಜೊತೆಗೆ ರಾತ್ರಿ 8ಕ್ಕೆ ‘ತ್ರಿಜನ್ಮ ಮೋಕ್ಷ’ ಪೌರಾಣಿಕ ನಾಟಕ ಪ್ರದರ್ಶನ ಹಾಗೂ ರಾತ್ರಿ 9ಕ್ಕೆ ವೆಂಕಟರಮಣ ಸ್ವಾಮಿ ಕಲ್ಯಾಣೋತ್ಸವ ನಡೆಯಲಿದೆ.</p>.<p>ಫೆ.1 ರಂದು ಬೆಳಗ್ಗೆ 8ಕ್ಕೆ ಕೃಷ್ಣ ಗಂಧೋತ್ಸವ ನಡೆಯಲಿದೆ. ಮಧ್ಯಾಹ್ನ 11 ರಿಂದ 12 ಗಂಟೆಯೊಳಗೆ ಸಲ್ಲುವ ಶುಭ ಮೇಷ ಲಗ್ನದಲ್ಲಿ ಬ್ರಹ್ಮರಥೋತ್ಸವಕ್ಕೆ ಚಾಲನೆ ಸಿಗಲಿದೆ. ಭಕ್ತರಿಗೆ ಅನ್ನದಾಸೋಹ ನಡೆಯಲಿದೆ ಎಂದರು.</p>.<p>ಫೆ.15ರಂದು ಮಹಾಶಿವರಾತ್ರಿ ಪ್ರಯುಕ್ತ ತೆಪ್ಪೋತ್ಸವ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಫೆ.16ರಂದು ಪಾರಣೆ ಜಾತ್ರೆಯೊಂದಿಗೆ ಈ ಬಾರಿಯ ಉತ್ಸವಗಳು ಮುಕ್ತಾಯಗೊಳ್ಳಲಿವೆ. ಭಕ್ತರ ಸುಲಭ ದರ್ಶನಕ್ಕೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ಮಂಜುನಾಥ್ ಮತ್ತು ಪೇಸ್ಕಾರ್ ಆರ್. ಸುರೇಶ್ಬಾಬು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ</strong>: ಸಮೀಪದ ಬಂಗಾರು ತಿರುಪತಿ (ಗುಟ್ಟಹಳ್ಳಿ) ಅಲುಮೇಲು ಮಂಗಮ್ಮ ಸಮೇತ ವೆಂಕಟರಮಣ ಸ್ವಾಮಿ ದೇವಾಲಯದಲ್ಲಿ ಭರತ ಹುಣ್ಣಿಮೆ ಜಾತ್ರಾ ಮಹೋತ್ಸವ ಫೆ.1 ರಂದು ನಡೆಯಲಿದೆ.</p>.<p>ಜಾತ್ರಾ ಅಂಗವಾಗಿ ದೇವಾಲಯದಲ್ಲಿ ಜ.26 ರಿಂದ ಪ್ರತಿನಿತ್ಯವೂ ವಿವಿಧ ಪೂಜಾ ಕಾರ್ಯಕ್ರಮಗಳು ನಡೆಯುತ್ತಿವೆ. ಜೊತೆಗೆ ಸಕಲ ಸಿದ್ಧತೆಗಳು ನಡೆಯುತ್ತಿವೆ.</p>.<p>ಜ.31 ರಂದು ಹಗಲು ಗಜ ವಾಹನೋತ್ಸವ ಮತ್ತು ಗರುಡೋತ್ಸವ ನೆರವೇರಲಿವೆ. ಜೊತೆಗೆ ರಾತ್ರಿ 8ಕ್ಕೆ ‘ತ್ರಿಜನ್ಮ ಮೋಕ್ಷ’ ಪೌರಾಣಿಕ ನಾಟಕ ಪ್ರದರ್ಶನ ಹಾಗೂ ರಾತ್ರಿ 9ಕ್ಕೆ ವೆಂಕಟರಮಣ ಸ್ವಾಮಿ ಕಲ್ಯಾಣೋತ್ಸವ ನಡೆಯಲಿದೆ.</p>.<p>ಫೆ.1 ರಂದು ಬೆಳಗ್ಗೆ 8ಕ್ಕೆ ಕೃಷ್ಣ ಗಂಧೋತ್ಸವ ನಡೆಯಲಿದೆ. ಮಧ್ಯಾಹ್ನ 11 ರಿಂದ 12 ಗಂಟೆಯೊಳಗೆ ಸಲ್ಲುವ ಶುಭ ಮೇಷ ಲಗ್ನದಲ್ಲಿ ಬ್ರಹ್ಮರಥೋತ್ಸವಕ್ಕೆ ಚಾಲನೆ ಸಿಗಲಿದೆ. ಭಕ್ತರಿಗೆ ಅನ್ನದಾಸೋಹ ನಡೆಯಲಿದೆ ಎಂದರು.</p>.<p>ಫೆ.15ರಂದು ಮಹಾಶಿವರಾತ್ರಿ ಪ್ರಯುಕ್ತ ತೆಪ್ಪೋತ್ಸವ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಫೆ.16ರಂದು ಪಾರಣೆ ಜಾತ್ರೆಯೊಂದಿಗೆ ಈ ಬಾರಿಯ ಉತ್ಸವಗಳು ಮುಕ್ತಾಯಗೊಳ್ಳಲಿವೆ. ಭಕ್ತರ ಸುಲಭ ದರ್ಶನಕ್ಕೆ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ಮಂಜುನಾಥ್ ಮತ್ತು ಪೇಸ್ಕಾರ್ ಆರ್. ಸುರೇಶ್ಬಾಬು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>