<p><strong>ಕೋಲಾರ: </strong>‘ಕಾರ್ಮಿಕರಿಗೆ ನೀಡುವ ಸೌಲಭ್ಯಗಳು ದುರುಪಯೋಗವಾಗುತ್ತಿದ್ದು, ನಿಜವಾದ ಫಲಾನುಭವಿಗಳಿಗೆ ಕೋವಿಡ್ ಸೌಲಭ್ಯ ಸಿಗುತ್ತಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಆರ್. ಮನೋಹರ್ ಆರೋಪಿಸಿದರು.</p>.<p>ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ರಾಜ್ಯ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಇರುವ ತೆರಿಗೆ ಹಣವನ್ನು ಸರ್ಕಾರ ಸ್ವಂತ ಆಸ್ತಿಯ ರೀತಿಯಲ್ಲಿ ಬೇಕಾಬಿಟ್ಟಿ ಖರ್ಚು ಮಾಡುತ್ತಿದೆ ಎಂದು ಟೀಕಿಸಿದರು.</p>.<p>ದಿನನಿತ್ಯ ಕಷ್ಟಪಡುವ ಕಾರ್ಮಿಕರು ಇಲ್ಲವಾದರೇ ಈ ಸಮಾಜವೇ ಇಲ್ಲ. ಇಂತಹ ಸಂದರ್ಭದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣದ ಮನೆ ಕೆಲಸದ ವಸ್ತುಗಳ ಮೇಲೆ ಸರ್ಕಾರ ವಿಧಿಸಿರುವ ತೆರಿಗೆ ಹಣದಲ್ಲಿ ಕೋವಿಡ್ ಮೊದಲ ಅಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ₹ 5000 ಪರಿಹಾರ ಘೋಷಿಸಲಾಗಿತ್ತು ಎಂದು ಹೇಳಿದರು.</p>.<p>ಎರಡನೇ ಅಲೆಯಲ್ಲಿ ₹ 3,000 ಜೊತೆಗೆ 50 ಲಕ್ಷ ಕಾರ್ಮಿಕರಿಗೆ ಆಹಾರ ಕಿಟ್ ನೀಡಲು ಘೋಷಿಸಿದೆ. ಕಾರ್ಮಿಕರ ಹಣದಲ್ಲಿ ಕಾರ್ಮಿಕರಿಗೆ ನೀಡುವ ಆಹಾರದ ಕಿಟ್ಗಳು ಗುಣಮಟ್ಟದಿಂದ ಕೂಡಿರಬೇಕು ಎಂಬುದನ್ನು ಇಲಾಖೆ ತಿಳಿದುಕೊಳ್ಳಬೇಕು ಎಂದರು.</p>.<p>ಕೋವಿಡ್ನಿಂದಾಗಿ ಕಾರ್ಮಿಕರು ಉದ್ಯೋಗವಿಲ್ಲದೇ ಸಾಕಷ್ಟು ತೊಂದರೆ ಅನುಭವಿಸಬೇಕಾಯಿತು. ನನ್ನ ವೈಯಕ್ತಿಕ ನಿಧಿಯಲ್ಲಿ 2000 ಮಂದಿಗೆ ಕಿಟ್ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಹಾರ ನೀಡಲು ಯೋಚಿಸಲಾಗುವುದು ಎಂದು ಹೇಳಿದರು.</p>.<p>ನಗರಸಭೆ ಮಾಜಿ ಅಧ್ಯಕ್ಷ ಬಿ.ಎಂ. ಮುಬಾರಕ್ ಮಾತನಾಡಿ, ಕೊರೊನಾ ಪ್ರಾರಂಭದಿಂದ ಸರ್ಕಾರ ಸಾಕಷ್ಟು ಹಂತದಲ್ಲಿ ಬಡವರಿಗೆ ಸೌಲಭ್ಯ ನೀಡುತ್ತಿರುವ ರೀತಿಯಲ್ಲಿಯೇ ಮನೋಹರ್ ಕೂಡ ತಮ್ಮ ವೈಯಕ್ತಿಕ ನಿಧಿಯಿಂದ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಭೀಮರಾಜ್ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರ ಕಟ್ಟಡ ಕಾರ್ಮಿಕರ ಹಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ದೂರಿದರು.</p>.<p>ಕಟ್ಟಡ ಕಾರ್ಮಿಕರ ಹಣವನ್ನು ಕಾರ್ಮಿಕರಿಗೆ ವಸ್ತುಗಳ ಮೂಲಕ ನೀಡಬಾರದೆಂದು ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸರ್ಕಾರ ಕಮಿಷನ್ ಪಡೆಯಲು ₹ 50 ಲಕ್ಷ ಆಹಾರ ಕಿಟ್ ಹಂಚಲು ಹೊರಟಿದೆ. ಈ ಮೂಲಕ ಸರ್ಕಾರವೇ ಕಾರ್ಮಿಕ ಇಲಾಖೆಯ ಜೊತೆಯಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕಟ್ಟಡ ಕಾರ್ಮಿಕರ ನೈಜ ಫಲಾನುಭವಿಗೆ ಸೌಲಭ್ಯ ಸಿಗಬೇಕೆಂದು ಒತ್ತಾಯಿಸಿದರು.</p>.<p>ಕಾರ್ಮಿಕ ವೃತ್ತ ನಿರೀಕ್ಷಕಿ ರಾಜೇಶ್ವರಿ, ಕಾರ್ಮಿಕ ನಿರೀಕ್ಷಕ ಪ್ರಕಾಶ್, ನಗರಸಭೆ ಮಾಜಿ ಸದಸ್ಯ ರೌತ್ ಶಂಕರಪ್ಪ, ಕಾರ್ಮಿಕ ಮುಖಂಡರಾದ ಎಚ್.ಎಂ. ಯಲ್ಲಪ್ಪ, ನಾರಾಯಣಸ್ವಾಮಿ, ಶಿವಾರೆಡ್ಡಿ, ವೇಣುಗೋಪಾಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಕಾರ್ಮಿಕರಿಗೆ ನೀಡುವ ಸೌಲಭ್ಯಗಳು ದುರುಪಯೋಗವಾಗುತ್ತಿದ್ದು, ನಿಜವಾದ ಫಲಾನುಭವಿಗಳಿಗೆ ಕೋವಿಡ್ ಸೌಲಭ್ಯ ಸಿಗುತ್ತಿಲ್ಲ’ ಎಂದು ವಿಧಾನ ಪರಿಷತ್ ಸದಸ್ಯ ಸಿ.ಆರ್. ಮನೋಹರ್ ಆರೋಪಿಸಿದರು.</p>.<p>ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಭಾನುವಾರ ನಗರದಲ್ಲಿ ಹಮ್ಮಿಕೊಂಡಿದ್ದ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ದಿನಸಿ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ರಾಜ್ಯ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಇರುವ ತೆರಿಗೆ ಹಣವನ್ನು ಸರ್ಕಾರ ಸ್ವಂತ ಆಸ್ತಿಯ ರೀತಿಯಲ್ಲಿ ಬೇಕಾಬಿಟ್ಟಿ ಖರ್ಚು ಮಾಡುತ್ತಿದೆ ಎಂದು ಟೀಕಿಸಿದರು.</p>.<p>ದಿನನಿತ್ಯ ಕಷ್ಟಪಡುವ ಕಾರ್ಮಿಕರು ಇಲ್ಲವಾದರೇ ಈ ಸಮಾಜವೇ ಇಲ್ಲ. ಇಂತಹ ಸಂದರ್ಭದಲ್ಲಿ ಕಟ್ಟಡ ಮತ್ತು ಇತರೆ ನಿರ್ಮಾಣದ ಮನೆ ಕೆಲಸದ ವಸ್ತುಗಳ ಮೇಲೆ ಸರ್ಕಾರ ವಿಧಿಸಿರುವ ತೆರಿಗೆ ಹಣದಲ್ಲಿ ಕೋವಿಡ್ ಮೊದಲ ಅಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ₹ 5000 ಪರಿಹಾರ ಘೋಷಿಸಲಾಗಿತ್ತು ಎಂದು ಹೇಳಿದರು.</p>.<p>ಎರಡನೇ ಅಲೆಯಲ್ಲಿ ₹ 3,000 ಜೊತೆಗೆ 50 ಲಕ್ಷ ಕಾರ್ಮಿಕರಿಗೆ ಆಹಾರ ಕಿಟ್ ನೀಡಲು ಘೋಷಿಸಿದೆ. ಕಾರ್ಮಿಕರ ಹಣದಲ್ಲಿ ಕಾರ್ಮಿಕರಿಗೆ ನೀಡುವ ಆಹಾರದ ಕಿಟ್ಗಳು ಗುಣಮಟ್ಟದಿಂದ ಕೂಡಿರಬೇಕು ಎಂಬುದನ್ನು ಇಲಾಖೆ ತಿಳಿದುಕೊಳ್ಳಬೇಕು ಎಂದರು.</p>.<p>ಕೋವಿಡ್ನಿಂದಾಗಿ ಕಾರ್ಮಿಕರು ಉದ್ಯೋಗವಿಲ್ಲದೇ ಸಾಕಷ್ಟು ತೊಂದರೆ ಅನುಭವಿಸಬೇಕಾಯಿತು. ನನ್ನ ವೈಯಕ್ತಿಕ ನಿಧಿಯಲ್ಲಿ 2000 ಮಂದಿಗೆ ಕಿಟ್ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಹಾರ ನೀಡಲು ಯೋಚಿಸಲಾಗುವುದು ಎಂದು ಹೇಳಿದರು.</p>.<p>ನಗರಸಭೆ ಮಾಜಿ ಅಧ್ಯಕ್ಷ ಬಿ.ಎಂ. ಮುಬಾರಕ್ ಮಾತನಾಡಿ, ಕೊರೊನಾ ಪ್ರಾರಂಭದಿಂದ ಸರ್ಕಾರ ಸಾಕಷ್ಟು ಹಂತದಲ್ಲಿ ಬಡವರಿಗೆ ಸೌಲಭ್ಯ ನೀಡುತ್ತಿರುವ ರೀತಿಯಲ್ಲಿಯೇ ಮನೋಹರ್ ಕೂಡ ತಮ್ಮ ವೈಯಕ್ತಿಕ ನಿಧಿಯಿಂದ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ನೀಡಲಾಗುತ್ತಿದೆ ಎಂದು ತಿಳಿಸಿದರು.</p>.<p>ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಭೀಮರಾಜ್ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರ ಕಟ್ಟಡ ಕಾರ್ಮಿಕರ ಹಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ದೂರಿದರು.</p>.<p>ಕಟ್ಟಡ ಕಾರ್ಮಿಕರ ಹಣವನ್ನು ಕಾರ್ಮಿಕರಿಗೆ ವಸ್ತುಗಳ ಮೂಲಕ ನೀಡಬಾರದೆಂದು ಸುಪ್ರೀಂ ಕೋರ್ಟ್ ಆದೇಶವಿದ್ದರೂ ಸರ್ಕಾರ ಕಮಿಷನ್ ಪಡೆಯಲು ₹ 50 ಲಕ್ಷ ಆಹಾರ ಕಿಟ್ ಹಂಚಲು ಹೊರಟಿದೆ. ಈ ಮೂಲಕ ಸರ್ಕಾರವೇ ಕಾರ್ಮಿಕ ಇಲಾಖೆಯ ಜೊತೆಯಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು. ಕಟ್ಟಡ ಕಾರ್ಮಿಕರ ನೈಜ ಫಲಾನುಭವಿಗೆ ಸೌಲಭ್ಯ ಸಿಗಬೇಕೆಂದು ಒತ್ತಾಯಿಸಿದರು.</p>.<p>ಕಾರ್ಮಿಕ ವೃತ್ತ ನಿರೀಕ್ಷಕಿ ರಾಜೇಶ್ವರಿ, ಕಾರ್ಮಿಕ ನಿರೀಕ್ಷಕ ಪ್ರಕಾಶ್, ನಗರಸಭೆ ಮಾಜಿ ಸದಸ್ಯ ರೌತ್ ಶಂಕರಪ್ಪ, ಕಾರ್ಮಿಕ ಮುಖಂಡರಾದ ಎಚ್.ಎಂ. ಯಲ್ಲಪ್ಪ, ನಾರಾಯಣಸ್ವಾಮಿ, ಶಿವಾರೆಡ್ಡಿ, ವೇಣುಗೋಪಾಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>