<p>ಕೋಲಾರ: ಬಹುದಿನಗಳ ಬೇಡಿಕೆ ಆಗಿರುವ ಜಿಲ್ಲಾ ಕೇಂದ್ರ ಕೋಲಾರದಿಂದ ಬೆಂಗಳೂರಿಗೆ ನೇರ ರೈಲು ಮಾರ್ಗ ಯೋಜನೆ ಕನಸಾಗಿದೆಯೇ ಉಳಿದಿದೆ. ರೈಲು ಮಾರ್ಗ ನಿರ್ಮಾಣಕ್ಕೆ 10 ವರ್ಷಗಳ ಹಿಂದೆಯೇ ಸರ್ವೆ ಕೂಡ ನಡೆದಿದೆ.</p>.<p>ಬೆಂಗಳೂರಿನಿಂದ 70 ಕಿ.ಮೀ ದೂರದಲ್ಲಿರುವ ಜಿಲ್ಲಾ ಕೇಂದ್ರಕ್ಕೆ ಈವರೆಗೆ ನೇರ ರೈಲು ಮಾರ್ಗ ಇಲ್ಲ. ಈ ಸಂಬಂಧ ಸಭೆಗಳಲ್ಲಿ, ಪ್ರಮುಖ ವೇದಿಕೆಗಳಲ್ಲಿ ಹಲವಾರು ಬಾರಿ ಪ್ರಸ್ತಾಪವಾಗಿದ್ದರೂ ಒಂದು ಹೆಜ್ಜೆಯೂ ಮುಂದೆ ಸಾಗಿಲ್ಲ. ಸಾವಿರಾರು ಜನರು ನಿತ್ಯ ಉದ್ಯೋಗ ಸೇರಿದಂತೆ ವಿವಿಧ ಕೆಲಸ ಕಾರ್ಯಗಳಿಗೆ ಕೋಲಾರದಿಂದ ಬೆಂಗಳೂರಿಗೆ ರೈಲಿನಲ್ಲಿ ಸುತ್ತಿ ಬಳಸಿ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಇದೆ. ಬೆಳಿಗ್ಗೆ ಹಾಗೂ ಸಂಜೆಯ ಬಸ್ಸುಗಳು ಕೂಡ ಕಿಕ್ಕಿರಿದು ತುಂಬಿರುತ್ತವೆ.</p>.<p>ಕೋಲಾರದಿಂದ ಬೆಂಗಳೂರು (ವೈಟ್ ಪೀಲ್ಡ್) ನೇರ ರೈಲು ಮಾರ್ಗ ನಿರ್ಮಾಣಕ್ಕೆ 2012–13ರಲ್ಲಿಯೇ ಸರ್ವೆ ಆಗಿದೆ. ಆದರೆ, ಆ ಬಳಿಕ ಯಾವುದೇ ಪ್ರಗತಿ ಆಗಿಲ್ಲ. ನೇರ ರೈಲು ಮಾರ್ಗಕ್ಕೆ ಭೂಸ್ವಾಧೀನ ಆಗಬೇಕಿದೆ. ಈ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಬೇಕಿದೆ ಎಂದು ಸಂಸದ ಎಂ.ಮಲ್ಲೇಶ್ ಬಾಬು ಹೇಳಿದ್ದಾರೆ. ಆದರೆ, ಈ ಬಗ್ಗೆ ರಾಜ್ಯ ಸರ್ಕಾರವೂ ಆಸಕ್ತಿ ತೋರಿಸುತ್ತಿಲ್ಲ.</p>.<p>ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ. ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ಈ ಬಗ್ಗೆ ದನಿ ಎತ್ತಬೇಕು ಎಂದು ಮಲ್ಲೇಶ್ ಬಾಬು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಬೆಂಗಳೂರು ಹಾಗೂ ಕೋಲಾರ ನಡುವೆ ಹೊಸಕೋಟೆ ಮಾರ್ಗವಾಗಿ ರೈಲ್ವೇ ಮಾರ್ಗದ ಅಭಿವೃದ್ಧಿಗೆ ಕಾರ್ಯ ಯೋಜನೆ ರೂಪಿಸಲಾಗಿದೆ ಎಂಬುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದ್ದಾರೆ. ಆದರೆ, ಅದು ಯಾವಾಗ ಕಾರ್ಯಸಾಧ್ಯ ಎಂಬುದಾಗಿ ನಾಗರಿಕರು ಪ್ರಶ್ನಿಸುತ್ತಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪರಸ್ಪರ ಸಹಕಾರ ಅಗತ್ಯವಿದೆ ಎಂದಿದ್ದಾರೆ.</p>.<p>ನೇರ ರೈಲು ಮಾರ್ಗ ನಿರ್ಮಾಣ ಸಂಬಂಧ ರಾಜ್ಯ ಸರ್ಕಾರಕ್ಕೆ ಸಂಸದ ಮಲ್ಲೇಶ್ ಬಾಬು ಕೇಂದ್ರ ಸರ್ಕಾರದಿಂದ ವರದಿ ಸಲ್ಲಿಸಿದರೆ ಭೂಸ್ವಾಧೀನ ಸಂಬಂಧ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸುವುದಾಗಿ ಶಾಸಕ ಕೊತ್ತೂರು ಮಂಜುನಾಥ್ ಕೆಡಿಪಿ ಸಭೆಯಲ್ಲಿ ಹೇಳಿದ್ದರು.</p>.<p>ಜಿಲ್ಲಾ ಕೇಂದ್ರದಿಂದ ಬೆಂಗಳೂರಿಗೆ ಮುಳಬಾಗಿಲು ಸೇರಿದಂತೆ ಕಡಪ–ಬೆಂಗಳೂರು ರೈಲು ಮಾರ್ಗದ ಬಗ್ಗೆಯೂ ಯಾವುದೇ ಹೊಸ ಹೆಜ್ಜೆ ಇಟ್ಟಿಲ್ಲ. ಕೋಲಾರದಿಂದ ವಡಗೂರು, ಮುಳಬಾಗಿಲು, ನಂಗಲಿ ರೈಲು ಮಾರ್ಗ ನಿರ್ಮಾಣ ಪ್ರಸ್ತಾಪ ಸರ್ಕಾರದ ಮಟ್ಟದಲ್ಲಿದೆ. ಸಮೀಕ್ಷೆ ಕೂಡ ನಡೆದಿದ್ದು, ಭೂಸ್ವಾಧೀನ ಪ್ರಕ್ರಿಯೆ ತಡವಾಗಿರುವುದರಿಂದ ಯೋಜನೆ ಆರಂಭಗೊಂಡಿಲ್ಲ ಎನ್ನಲಾಗುತ್ತಿದೆ.</p>.<p>ಶ್ರೀನಿವಾಸಪುರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೈಲು ಕೋಚ್ ಕಾರ್ಖಾನೆಯದ್ದು ಕೂಡ ಅದೇ ಪರಿಸ್ಥಿತಿ. ಅದಕ್ಕೂ ಜಾಗ ಸಿಕ್ಕಿಲ್ಲ, ಹೀಗಾಗಿ, ಕೇಂದ್ರ ಸರ್ಕಾರ ಅನುದಾನ ಘೋಷಿಸುತ್ತಿಲ್ಲ ಎಂಬ ದೂರಿದೆ. ಕೆಜಿಎಫ್ನಲ್ಲಿ ರೈಲ್ವೆ ಸರ್ವಿಸ್ ಸೆಂಟರ್ ಆರಂಭಿಸಲು ಪ್ರಯತ್ನ ನಡೆಸುತ್ತಿರುವುದಾಗಿ ಈಚೆಗೆ ಮಲ್ಲೇಶ್ ಬಾಬು ಹೇಳಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-18-292999074</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಬಹುದಿನಗಳ ಬೇಡಿಕೆ ಆಗಿರುವ ಜಿಲ್ಲಾ ಕೇಂದ್ರ ಕೋಲಾರದಿಂದ ಬೆಂಗಳೂರಿಗೆ ನೇರ ರೈಲು ಮಾರ್ಗ ಯೋಜನೆ ಕನಸಾಗಿದೆಯೇ ಉಳಿದಿದೆ. ರೈಲು ಮಾರ್ಗ ನಿರ್ಮಾಣಕ್ಕೆ 10 ವರ್ಷಗಳ ಹಿಂದೆಯೇ ಸರ್ವೆ ಕೂಡ ನಡೆದಿದೆ.</p>.<p>ಬೆಂಗಳೂರಿನಿಂದ 70 ಕಿ.ಮೀ ದೂರದಲ್ಲಿರುವ ಜಿಲ್ಲಾ ಕೇಂದ್ರಕ್ಕೆ ಈವರೆಗೆ ನೇರ ರೈಲು ಮಾರ್ಗ ಇಲ್ಲ. ಈ ಸಂಬಂಧ ಸಭೆಗಳಲ್ಲಿ, ಪ್ರಮುಖ ವೇದಿಕೆಗಳಲ್ಲಿ ಹಲವಾರು ಬಾರಿ ಪ್ರಸ್ತಾಪವಾಗಿದ್ದರೂ ಒಂದು ಹೆಜ್ಜೆಯೂ ಮುಂದೆ ಸಾಗಿಲ್ಲ. ಸಾವಿರಾರು ಜನರು ನಿತ್ಯ ಉದ್ಯೋಗ ಸೇರಿದಂತೆ ವಿವಿಧ ಕೆಲಸ ಕಾರ್ಯಗಳಿಗೆ ಕೋಲಾರದಿಂದ ಬೆಂಗಳೂರಿಗೆ ರೈಲಿನಲ್ಲಿ ಸುತ್ತಿ ಬಳಸಿ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಇದೆ. ಬೆಳಿಗ್ಗೆ ಹಾಗೂ ಸಂಜೆಯ ಬಸ್ಸುಗಳು ಕೂಡ ಕಿಕ್ಕಿರಿದು ತುಂಬಿರುತ್ತವೆ.</p>.<p>ಕೋಲಾರದಿಂದ ಬೆಂಗಳೂರು (ವೈಟ್ ಪೀಲ್ಡ್) ನೇರ ರೈಲು ಮಾರ್ಗ ನಿರ್ಮಾಣಕ್ಕೆ 2012–13ರಲ್ಲಿಯೇ ಸರ್ವೆ ಆಗಿದೆ. ಆದರೆ, ಆ ಬಳಿಕ ಯಾವುದೇ ಪ್ರಗತಿ ಆಗಿಲ್ಲ. ನೇರ ರೈಲು ಮಾರ್ಗಕ್ಕೆ ಭೂಸ್ವಾಧೀನ ಆಗಬೇಕಿದೆ. ಈ ಕಾರ್ಯವನ್ನು ರಾಜ್ಯ ಸರ್ಕಾರ ಮಾಡಬೇಕಿದೆ ಎಂದು ಸಂಸದ ಎಂ.ಮಲ್ಲೇಶ್ ಬಾಬು ಹೇಳಿದ್ದಾರೆ. ಆದರೆ, ಈ ಬಗ್ಗೆ ರಾಜ್ಯ ಸರ್ಕಾರವೂ ಆಸಕ್ತಿ ತೋರಿಸುತ್ತಿಲ್ಲ.</p>.<p>ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಮಾಡುತ್ತೇನೆ. ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ಈ ಬಗ್ಗೆ ದನಿ ಎತ್ತಬೇಕು ಎಂದು ಮಲ್ಲೇಶ್ ಬಾಬು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಬೆಂಗಳೂರು ಹಾಗೂ ಕೋಲಾರ ನಡುವೆ ಹೊಸಕೋಟೆ ಮಾರ್ಗವಾಗಿ ರೈಲ್ವೇ ಮಾರ್ಗದ ಅಭಿವೃದ್ಧಿಗೆ ಕಾರ್ಯ ಯೋಜನೆ ರೂಪಿಸಲಾಗಿದೆ ಎಂಬುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದ್ದಾರೆ. ಆದರೆ, ಅದು ಯಾವಾಗ ಕಾರ್ಯಸಾಧ್ಯ ಎಂಬುದಾಗಿ ನಾಗರಿಕರು ಪ್ರಶ್ನಿಸುತ್ತಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಪರಸ್ಪರ ಸಹಕಾರ ಅಗತ್ಯವಿದೆ ಎಂದಿದ್ದಾರೆ.</p>.<p>ನೇರ ರೈಲು ಮಾರ್ಗ ನಿರ್ಮಾಣ ಸಂಬಂಧ ರಾಜ್ಯ ಸರ್ಕಾರಕ್ಕೆ ಸಂಸದ ಮಲ್ಲೇಶ್ ಬಾಬು ಕೇಂದ್ರ ಸರ್ಕಾರದಿಂದ ವರದಿ ಸಲ್ಲಿಸಿದರೆ ಭೂಸ್ವಾಧೀನ ಸಂಬಂಧ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸುವುದಾಗಿ ಶಾಸಕ ಕೊತ್ತೂರು ಮಂಜುನಾಥ್ ಕೆಡಿಪಿ ಸಭೆಯಲ್ಲಿ ಹೇಳಿದ್ದರು.</p>.<p>ಜಿಲ್ಲಾ ಕೇಂದ್ರದಿಂದ ಬೆಂಗಳೂರಿಗೆ ಮುಳಬಾಗಿಲು ಸೇರಿದಂತೆ ಕಡಪ–ಬೆಂಗಳೂರು ರೈಲು ಮಾರ್ಗದ ಬಗ್ಗೆಯೂ ಯಾವುದೇ ಹೊಸ ಹೆಜ್ಜೆ ಇಟ್ಟಿಲ್ಲ. ಕೋಲಾರದಿಂದ ವಡಗೂರು, ಮುಳಬಾಗಿಲು, ನಂಗಲಿ ರೈಲು ಮಾರ್ಗ ನಿರ್ಮಾಣ ಪ್ರಸ್ತಾಪ ಸರ್ಕಾರದ ಮಟ್ಟದಲ್ಲಿದೆ. ಸಮೀಕ್ಷೆ ಕೂಡ ನಡೆದಿದ್ದು, ಭೂಸ್ವಾಧೀನ ಪ್ರಕ್ರಿಯೆ ತಡವಾಗಿರುವುದರಿಂದ ಯೋಜನೆ ಆರಂಭಗೊಂಡಿಲ್ಲ ಎನ್ನಲಾಗುತ್ತಿದೆ.</p>.<p>ಶ್ರೀನಿವಾಸಪುರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರೈಲು ಕೋಚ್ ಕಾರ್ಖಾನೆಯದ್ದು ಕೂಡ ಅದೇ ಪರಿಸ್ಥಿತಿ. ಅದಕ್ಕೂ ಜಾಗ ಸಿಕ್ಕಿಲ್ಲ, ಹೀಗಾಗಿ, ಕೇಂದ್ರ ಸರ್ಕಾರ ಅನುದಾನ ಘೋಷಿಸುತ್ತಿಲ್ಲ ಎಂಬ ದೂರಿದೆ. ಕೆಜಿಎಫ್ನಲ್ಲಿ ರೈಲ್ವೆ ಸರ್ವಿಸ್ ಸೆಂಟರ್ ಆರಂಭಿಸಲು ಪ್ರಯತ್ನ ನಡೆಸುತ್ತಿರುವುದಾಗಿ ಈಚೆಗೆ ಮಲ್ಲೇಶ್ ಬಾಬು ಹೇಳಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-18-292999074</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>