<p><strong>ಕೆಜಿಎಫ್:</strong> ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮಾರಿಕುಪ್ಪಂಗೆ ಹೋಗುವ ರೈಲಿನ ಸೇವೆಯನ್ನು ಫೆ. 2ರಿಂದ ಪುನರಾರಂಭ ಮಾಡಲಾಗುವುದು ಎಂದು ರೈಲ್ವೆ ಇಲಾಖೆ ನಿರ್ಧಾರ ತೆಗೆದುಕೊಂಡಿದೆ ಎಂದು ಸಂಸದ ಮಲ್ಲೇಶಬಾಬು ತಿಳಿಸಿದ್ದಾರೆ.</p>.<p>ಬೆಂಗಳೂರಿನಿಂದ ಮಧ್ಯಾಹ್ನ 2.55ಕ್ಕೆ ಬೆಂಗಳೂರು ಬಿಡುವ ರೈಲನ್ನು ಇತ್ತೀಚಿಗೆ ರದ್ದುಗೊಳಿಸಲಾಗಿತ್ತು. ಸಮಯ ಬದಲಾಯಿಸಿ, ವೈಟ್ಫೀಲ್ಡ್ನಿಂದ ಮಾರಿಕುಪ್ಪಂವರೆವಿಗೂ ಬಿಡಲಾಗಿತ್ತು. ಇದರಿಂದ ಸಾವಿರಾರು ಮಂದಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು. ಹಾಗಾಗಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ಹಿನ್ನೆಲೆ ವಿಭಾಗೀಯ ರೈಲ್ವೆ ಮಾನೇಜರ್ ಅವರಿಗೆ ಪತ್ರ ಬರೆದಿದ್ದ ಸಂಸದ ಸಾರ್ವಜನಿಕರ ಕೋರಿಕೆ ಮೇರೆಗೆ ಹಿಂದಿನ ರೀತಿಯಲ್ಲಿ ರೈಲ್ವೆ ಸೇವೆಯನ್ನು ಪುನರಾರಂಭಿಸಬೇಕು ಎಂದು ಕೋರಿದ್ದರು.</p>.<p>ಈ ಹಿನ್ನೆಲೆ ಫೆ. 2ರಿಂದ ಹಿಂದಿನ ರೀತಿಯಲ್ಲಿಯೇ ಬೆಂಗಳೂರು-ಮಾರಿಕುಪ್ಪಂ ಮೆಮೂ ರೈಲಿನ ಸಂಚಾರ ಪ್ರಾರಂಭವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಮಾರಿಕುಪ್ಪಂಗೆ ಹೋಗುವ ರೈಲಿನ ಸೇವೆಯನ್ನು ಫೆ. 2ರಿಂದ ಪುನರಾರಂಭ ಮಾಡಲಾಗುವುದು ಎಂದು ರೈಲ್ವೆ ಇಲಾಖೆ ನಿರ್ಧಾರ ತೆಗೆದುಕೊಂಡಿದೆ ಎಂದು ಸಂಸದ ಮಲ್ಲೇಶಬಾಬು ತಿಳಿಸಿದ್ದಾರೆ.</p>.<p>ಬೆಂಗಳೂರಿನಿಂದ ಮಧ್ಯಾಹ್ನ 2.55ಕ್ಕೆ ಬೆಂಗಳೂರು ಬಿಡುವ ರೈಲನ್ನು ಇತ್ತೀಚಿಗೆ ರದ್ದುಗೊಳಿಸಲಾಗಿತ್ತು. ಸಮಯ ಬದಲಾಯಿಸಿ, ವೈಟ್ಫೀಲ್ಡ್ನಿಂದ ಮಾರಿಕುಪ್ಪಂವರೆವಿಗೂ ಬಿಡಲಾಗಿತ್ತು. ಇದರಿಂದ ಸಾವಿರಾರು ಮಂದಿ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು. ಹಾಗಾಗಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ಹಿನ್ನೆಲೆ ವಿಭಾಗೀಯ ರೈಲ್ವೆ ಮಾನೇಜರ್ ಅವರಿಗೆ ಪತ್ರ ಬರೆದಿದ್ದ ಸಂಸದ ಸಾರ್ವಜನಿಕರ ಕೋರಿಕೆ ಮೇರೆಗೆ ಹಿಂದಿನ ರೀತಿಯಲ್ಲಿ ರೈಲ್ವೆ ಸೇವೆಯನ್ನು ಪುನರಾರಂಭಿಸಬೇಕು ಎಂದು ಕೋರಿದ್ದರು.</p>.<p>ಈ ಹಿನ್ನೆಲೆ ಫೆ. 2ರಿಂದ ಹಿಂದಿನ ರೀತಿಯಲ್ಲಿಯೇ ಬೆಂಗಳೂರು-ಮಾರಿಕುಪ್ಪಂ ಮೆಮೂ ರೈಲಿನ ಸಂಚಾರ ಪ್ರಾರಂಭವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>