<p><strong>ಬಂಗಾರಪೇಟೆ:</strong> ತಾಲ್ಲೂಕಿನ ಸೂಲಿಕುಂಟೆ ಗ್ರಾಮದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯವು ಸಂಪೂರ್ಣವಾಗಿ ಶಿಥಿಲಾವಸ್ಥೆಗೆ ತಲುಪಿದೆ. ಇದರಿಂದಾಗಿ ಈ ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿನಿಯಲು ಆತಂಕಕ್ಕೆ ಸಿಲುಕಿದ್ದಾರೆ. </p><p>ಈ ವಿದ್ಯಾರ್ಥಿ ನಿಲಯದಲ್ಲಿ 50 ಬಾಲಕಿಯರು ದಾಖಲಾಗಿದ್ದು, ಬಹುತೇಕ ಬಾಲಕಿಯರು ಬಡ ಕೂಲಿ ಕಾರ್ಮಿಕರು, ರೈತರ ಮಕ್ಕಳೇ ಆಗಿದ್ದಾರೆ. ಸರ್ಕಾರಿ ವಸತಿ ನಿಲಯಗಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ನೀಡುತ್ತಿದೆ. ಆದರೆ, ಹಾಸ್ಟೆಲ್ ಸುಸಜ್ಜಿತವಾಗಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು. </p><p>ಕಟ್ಟಡವು ಶಿಥಿಲಾವಸ್ಥೆಯಲ್ಲಿರುವುದು ವಿದ್ಯಾರ್ಥಿಗಳ ಜೀವಕ್ಕೆ ಆಪತ್ತು ಎದುರಾಗಿದೆ. ಕಟ್ಟಡವನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ ಮಳೆ ಬಂದರೆ, ವಿದ್ಯಾರ್ಥಿನಿಲಯವು ಸೋರುತ್ತದೆ. ಮೇಲ್ಚಾವಣಿಯ ಸಿಮೆಂಟ್ ಉದುರು ಬೀಳುತ್ತಿದೆ. ವಸತಿ ನಿಲಯದಲ್ಲಿನ ಶೌಚಾಲಯಗಳು ಗಬ್ಬು ನಾರುತ್ತಿವೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. </p><p>ವಿದ್ಯಾರ್ಥಿನಿಲಯವು ಶಿಥಿಲಾವಸ್ಥೆ ತಲುಪಿದೆ ಎಂಬುದು ಗಮನಕ್ಕೆ ಬಂದಿದೆ. ಅನುದಾನ ಬಂದ ಕೂಡಲೇ ದುರಸ್ತಿಗೆ ಕ್ರಮ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶಿವಕುಮಾರಿ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ತಾಲ್ಲೂಕಿನ ಸೂಲಿಕುಂಟೆ ಗ್ರಾಮದ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಗೆ ಬರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯವು ಸಂಪೂರ್ಣವಾಗಿ ಶಿಥಿಲಾವಸ್ಥೆಗೆ ತಲುಪಿದೆ. ಇದರಿಂದಾಗಿ ಈ ಹಾಸ್ಟೆಲ್ನಲ್ಲಿರುವ ವಿದ್ಯಾರ್ಥಿನಿಯಲು ಆತಂಕಕ್ಕೆ ಸಿಲುಕಿದ್ದಾರೆ. </p><p>ಈ ವಿದ್ಯಾರ್ಥಿ ನಿಲಯದಲ್ಲಿ 50 ಬಾಲಕಿಯರು ದಾಖಲಾಗಿದ್ದು, ಬಹುತೇಕ ಬಾಲಕಿಯರು ಬಡ ಕೂಲಿ ಕಾರ್ಮಿಕರು, ರೈತರ ಮಕ್ಕಳೇ ಆಗಿದ್ದಾರೆ. ಸರ್ಕಾರಿ ವಸತಿ ನಿಲಯಗಳ ಅಭಿವೃದ್ಧಿಗಾಗಿ ಸರ್ಕಾರ ಕೋಟ್ಯಂತರ ರೂಪಾಯಿ ಅನುದಾನ ನೀಡುತ್ತಿದೆ. ಆದರೆ, ಹಾಸ್ಟೆಲ್ ಸುಸಜ್ಜಿತವಾಗಿಲ್ಲ ಎಂದು ವಿದ್ಯಾರ್ಥಿಗಳು ದೂರಿದರು. </p><p>ಕಟ್ಟಡವು ಶಿಥಿಲಾವಸ್ಥೆಯಲ್ಲಿರುವುದು ವಿದ್ಯಾರ್ಥಿಗಳ ಜೀವಕ್ಕೆ ಆಪತ್ತು ಎದುರಾಗಿದೆ. ಕಟ್ಟಡವನ್ನು ಸರಿಯಾಗಿ ನಿರ್ವಹಣೆ ಮಾಡದ ಕಾರಣ ಮಳೆ ಬಂದರೆ, ವಿದ್ಯಾರ್ಥಿನಿಲಯವು ಸೋರುತ್ತದೆ. ಮೇಲ್ಚಾವಣಿಯ ಸಿಮೆಂಟ್ ಉದುರು ಬೀಳುತ್ತಿದೆ. ವಸತಿ ನಿಲಯದಲ್ಲಿನ ಶೌಚಾಲಯಗಳು ಗಬ್ಬು ನಾರುತ್ತಿವೆ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. </p><p>ವಿದ್ಯಾರ್ಥಿನಿಲಯವು ಶಿಥಿಲಾವಸ್ಥೆ ತಲುಪಿದೆ ಎಂಬುದು ಗಮನಕ್ಕೆ ಬಂದಿದೆ. ಅನುದಾನ ಬಂದ ಕೂಡಲೇ ದುರಸ್ತಿಗೆ ಕ್ರಮ ವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶಿವಕುಮಾರಿ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>