ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳಬಾಗಿಲು: ಬೆಸ್ಕಾಂ ನೌಕರರ ಪ್ರತಿಭಟನೆ

Last Updated 6 ಅಕ್ಟೋಬರ್ 2020, 2:59 IST
ಅಕ್ಷರ ಗಾತ್ರ

ಮುಳಬಾಗಿಲು: ಬೆಸ್ಕಾಂ ಹಾಗೂ ಇತರ ವಿದ್ಯುತ್ ಸರಬರಾಜು ಸಂಸ್ಥೆಗಳು ರಾಜ್ಯ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುತ್ತಿದ್ದು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿ ಸೋಮವಾರ ಬೆಸ್ಕಾಂ ಕಚೇರಿಯ ಮುಂದೆ ನೌಕರರು ಸಾಂಕೇತಿಕ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ಖಾಸಗೀಕರಣಕ್ಕೆ ಅವಕಾಶ ಕೊಡಬಾರದು. ಬೆಸ್ಕಾಂ ಅನ್ನು ಉಳಿಸಬೇಕು ಎಂದು ಒತ್ತಾಯಿಸಿದರು. ತಾಲ್ಲೂಕು ಬೆಸ್ಕಾಂ ನೌಕರರ ಸಂಘ, ತಾಲ್ಲೂಕು ಬೆಸ್ಕಾಂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘದಿಂದ ಪ್ರತಿಭಟನೆ ನಡೆಯಿತು. ಬೆಸ್ಕಾಂ ಅಧಿಕಾರಿ ರಮೇಶ್, ತಾಲ್ಲೂಕು ಬೆಸ್ಕಾಂ ನೌಕರರ ಸಂಘದ ಅಧ್ಯಕ್ಷ ವೆಂಕಟರವಣಪ್ಪ, ಎಸ್‌ಸಿ, ಎಸ್‌ಟಿ ಸಂಘದ ಅಧ್ಯಕ್ಷ ಬಿ.ಎನ್.ನಾರಾಯಣಸ್ವಾಮಿ, ಶ್ರೀನಾಥ್, ಭಾಸ್ಕರ್, ವೆಂಕಟೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT