ರಾಜ್ಯ ಸರ್ಕಾರದ ಖಾಸಗೀಕರಣಕ್ಕೆ ಅವಕಾಶ ಕೊಡಬಾರದು. ಬೆಸ್ಕಾಂ ಅನ್ನು ಉಳಿಸಬೇಕು ಎಂದು ಒತ್ತಾಯಿಸಿದರು. ತಾಲ್ಲೂಕು ಬೆಸ್ಕಾಂ ನೌಕರರ ಸಂಘ, ತಾಲ್ಲೂಕು ಬೆಸ್ಕಾಂ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘದಿಂದ ಪ್ರತಿಭಟನೆ ನಡೆಯಿತು. ಬೆಸ್ಕಾಂ ಅಧಿಕಾರಿ ರಮೇಶ್, ತಾಲ್ಲೂಕು ಬೆಸ್ಕಾಂ ನೌಕರರ ಸಂಘದ ಅಧ್ಯಕ್ಷ ವೆಂಕಟರವಣಪ್ಪ, ಎಸ್ಸಿ, ಎಸ್ಟಿ ಸಂಘದ ಅಧ್ಯಕ್ಷ ಬಿ.ಎನ್.ನಾರಾಯಣಸ್ವಾಮಿ, ಶ್ರೀನಾಥ್, ಭಾಸ್ಕರ್, ವೆಂಕಟೇಶ್ ಇದ್ದರು.