<p><strong>ಬೇತಮಂಗಲ:</strong> ನಲ್ಲೂರು ಗ್ರಾಮದ ಮಾರ್ಗವಾಗಿ ಕಳ್ಳಿಕುಪ್ಪ ಸೇರಿದಂತೆ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ನಿರ್ಮಿಸಿರುವ ಸೇತುವೆ ಶುಕ್ರವಾರದಂದು ಜನಾರ್ಪಣೆಗೆ ನಿಗದಿಪಡಿಸಿದ್ದ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನು ಕಾರ್ತಿಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. </p>.<p>ಜುಲೈ 25ರಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ₹7 ಕೋಟಿ ವೆಚ್ಚದದಲ್ಲಿ ಪಾಲಾರ್ ಕೆರೆಯಲ್ಲಿ ನಿರ್ಮಿಸಿರುವ ಸೇತುವೆ ಉದ್ಘಾಟಿಸಲಿದ್ದರು. ಆದರೆ, ಕಾರ್ಯಕ್ರಮ ಮುಂದೂಡಲಾಗಿದ್ದು, ಕ್ಷೇತ್ರದ ಶಾಸಕಿ ರೂಪಕಲಾ ಶಶಿಧರ್ ಅಧ್ಯಕ್ಷತೆಯಲ್ಲಿ ದಿನಾಂಕ ನಿಗದಿಪಡಿಸಿ ಜನಾರ್ಪಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.</p>.<p>ಈ ಭಾಗದ ಜನರ ಕನಸಾಗಿದ್ದ ಸೇತುವೆ ಹಾಗೂ ರಸ್ತೆ ಕಾಮಗಾರಿ ಉದ್ಘಾಟನೆಗೆ ಭರ್ಜರಿ ಸಿದ್ಧತೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ, ಸಚಿವ ಕೆಎಚ್ ಮುನಿಯಪ್ಪ ಸೇರಿದಂತೆ ವಿವಿಧ ಗಣ್ಯರ ಕಟೌಟ್, ಬ್ಯಾನರ್ ಅಳವಡಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ:</strong> ನಲ್ಲೂರು ಗ್ರಾಮದ ಮಾರ್ಗವಾಗಿ ಕಳ್ಳಿಕುಪ್ಪ ಸೇರಿದಂತೆ ಹತ್ತಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸಲು ನಿರ್ಮಿಸಿರುವ ಸೇತುವೆ ಶುಕ್ರವಾರದಂದು ಜನಾರ್ಪಣೆಗೆ ನಿಗದಿಪಡಿಸಿದ್ದ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿನು ಕಾರ್ತಿಕ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. </p>.<p>ಜುಲೈ 25ರಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ₹7 ಕೋಟಿ ವೆಚ್ಚದದಲ್ಲಿ ಪಾಲಾರ್ ಕೆರೆಯಲ್ಲಿ ನಿರ್ಮಿಸಿರುವ ಸೇತುವೆ ಉದ್ಘಾಟಿಸಲಿದ್ದರು. ಆದರೆ, ಕಾರ್ಯಕ್ರಮ ಮುಂದೂಡಲಾಗಿದ್ದು, ಕ್ಷೇತ್ರದ ಶಾಸಕಿ ರೂಪಕಲಾ ಶಶಿಧರ್ ಅಧ್ಯಕ್ಷತೆಯಲ್ಲಿ ದಿನಾಂಕ ನಿಗದಿಪಡಿಸಿ ಜನಾರ್ಪಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.</p>.<p>ಈ ಭಾಗದ ಜನರ ಕನಸಾಗಿದ್ದ ಸೇತುವೆ ಹಾಗೂ ರಸ್ತೆ ಕಾಮಗಾರಿ ಉದ್ಘಾಟನೆಗೆ ಭರ್ಜರಿ ಸಿದ್ಧತೆ ನಡೆದಿದೆ. ಸಚಿವ ಸತೀಶ್ ಜಾರಕಿಹೊಳಿ, ಸಚಿವ ಕೆಎಚ್ ಮುನಿಯಪ್ಪ ಸೇರಿದಂತೆ ವಿವಿಧ ಗಣ್ಯರ ಕಟೌಟ್, ಬ್ಯಾನರ್ ಅಳವಡಿಸಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>