<p>ಬೇತಮಂಗಲ: ಮೂರು ದಿನಗಳಿಂದ ನಡೆದ ಸುಂದರಪಾಳ್ಯ ಗ್ರಾಮದ ಪಾಲುಪಟ್ಟಮ್ಮ ದೇವಿ ಜಾತ್ರಾ ಮಹೋತ್ಸವ ಮಂಗಳವಾರ ತೆರೆ ಕಂಡಿತು.</p>.<p>ಜಾತ್ರೆ ಅಂಗವಾಗಿ ಸೋಮವಾರ ಬೆಳಗ್ಗೆಯಿಂದ ವಿವಿಧ ಪೂಜಾ ಕಾರ್ಯಗಳು ನಡೆದವು. ದೇವಿ ಹಾಗೂ ದೇವಾಲಯವನ್ನು ವಿವಿಧ ಹೂ ಮತ್ತು ದೀಪಗಳಿಂದ ಅಲಂಕರಿಸಲಾಗಿತ್ತು.</p>.<p>ಮಧ್ಯಾಹ್ನ ಪಾಲುಪಟ್ಟಮ್ಮ ದೇವಿಯ ಉತ್ಸವ ಮೂರ್ತಿಯನ್ನು ಪುಷ್ಪ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯುದ್ದಕ್ಕೂ ಗ್ರಾಮಸ್ಥರು ಪೂಜೆ ಸಲ್ಲಿಸಿದರು. ಜೊತೆಗೆ ಮೆರವಣಿಗೆಗೆ ತಮಟೆ, ಗಾಡಿ ಗೊಂಬೆಗಳು ಹಾಗೂ ವಿವಿಧ ಜಾನಪದ ಕಲಾತಂಡಗಳು ಮೆರಗು ನೀಡಿದವು.</p>.<p>ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತಾಧಿಗಳಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮಸ್ಥರು, ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.</p>.<p>ರಾತ್ರಿ ನಡೆದ ಕರಗ ಮಹೋತ್ಸವವು ಜಾತ್ರೆಗೆ ಮೆರುಗು ನೀಡಿತು. ಬೇತಮಂಗಲ ಮಂಜುನಾಥ್ ಅವರು ಕರಗ ಹೊತ್ತು ತಮಟೆಯ ಶಬ್ದಕ್ಕೆ ನೃತ್ಯ ಪ್ರದರ್ಶಿಸಿ ಜನರ ಗಮನ ಸೆಳೆದರು. ಜೊತೆಗೆ ಮನೆ ಮನೆಗೆ ತೆರಳಿ ಭಕ್ತರಿಂದ ಪೂಜೆ ಸ್ವೀಕರಿಸಿದರು.</p>.<p>ಮಂಗಳವಾರ ಮಧ್ಯಾಹ್ನ ಕರಗ ಹೊತ್ತ ಪೂಜಾರಿ ಅಗ್ನಿಕುಂಡ ಪ್ರವೇಶಿಸಿ ದೇವಾಲಯ ತಲುಪಿದರು. ನಂತರ ತಲೆಯ ಮೇಲೆ ಒನಕೆ ಹೊತ್ತು ಸಾಗುವ ವಸಂತೋತ್ಸವ ನಡೆಯಿತು.</p>.<p>ವಿವಿಧ ರಾಜಕೀಯ ನಾಯಕರ ಬೆಂಬಲಿಗರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-18-1636703316</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೇತಮಂಗಲ: ಮೂರು ದಿನಗಳಿಂದ ನಡೆದ ಸುಂದರಪಾಳ್ಯ ಗ್ರಾಮದ ಪಾಲುಪಟ್ಟಮ್ಮ ದೇವಿ ಜಾತ್ರಾ ಮಹೋತ್ಸವ ಮಂಗಳವಾರ ತೆರೆ ಕಂಡಿತು.</p>.<p>ಜಾತ್ರೆ ಅಂಗವಾಗಿ ಸೋಮವಾರ ಬೆಳಗ್ಗೆಯಿಂದ ವಿವಿಧ ಪೂಜಾ ಕಾರ್ಯಗಳು ನಡೆದವು. ದೇವಿ ಹಾಗೂ ದೇವಾಲಯವನ್ನು ವಿವಿಧ ಹೂ ಮತ್ತು ದೀಪಗಳಿಂದ ಅಲಂಕರಿಸಲಾಗಿತ್ತು.</p>.<p>ಮಧ್ಯಾಹ್ನ ಪಾಲುಪಟ್ಟಮ್ಮ ದೇವಿಯ ಉತ್ಸವ ಮೂರ್ತಿಯನ್ನು ಪುಷ್ಪ ಪಲ್ಲಕ್ಕಿಯಲ್ಲಿ ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆಯುದ್ದಕ್ಕೂ ಗ್ರಾಮಸ್ಥರು ಪೂಜೆ ಸಲ್ಲಿಸಿದರು. ಜೊತೆಗೆ ಮೆರವಣಿಗೆಗೆ ತಮಟೆ, ಗಾಡಿ ಗೊಂಬೆಗಳು ಹಾಗೂ ವಿವಿಧ ಜಾನಪದ ಕಲಾತಂಡಗಳು ಮೆರಗು ನೀಡಿದವು.</p>.<p>ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತಾಧಿಗಳಿಗೆ ದಾಸೋಹದ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮಸ್ಥರು, ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.</p>.<p>ರಾತ್ರಿ ನಡೆದ ಕರಗ ಮಹೋತ್ಸವವು ಜಾತ್ರೆಗೆ ಮೆರುಗು ನೀಡಿತು. ಬೇತಮಂಗಲ ಮಂಜುನಾಥ್ ಅವರು ಕರಗ ಹೊತ್ತು ತಮಟೆಯ ಶಬ್ದಕ್ಕೆ ನೃತ್ಯ ಪ್ರದರ್ಶಿಸಿ ಜನರ ಗಮನ ಸೆಳೆದರು. ಜೊತೆಗೆ ಮನೆ ಮನೆಗೆ ತೆರಳಿ ಭಕ್ತರಿಂದ ಪೂಜೆ ಸ್ವೀಕರಿಸಿದರು.</p>.<p>ಮಂಗಳವಾರ ಮಧ್ಯಾಹ್ನ ಕರಗ ಹೊತ್ತ ಪೂಜಾರಿ ಅಗ್ನಿಕುಂಡ ಪ್ರವೇಶಿಸಿ ದೇವಾಲಯ ತಲುಪಿದರು. ನಂತರ ತಲೆಯ ಮೇಲೆ ಒನಕೆ ಹೊತ್ತು ಸಾಗುವ ವಸಂತೋತ್ಸವ ನಡೆಯಿತು.</p>.<p>ವಿವಿಧ ರಾಜಕೀಯ ನಾಯಕರ ಬೆಂಬಲಿಗರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260325-18-1636703316</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>