<p>ಬೇತಮಂಗಲ: ಗ್ರಾಮದ ಸಂತೆ ಮೈದಾನ ಹಾಗೂ ಮಾದರಿ ಶಾಲೆಯ ಕಾಂಪೌಂಡ್ ಪಕ್ಕದಲ್ಲಿ ತಾತ್ಕಾಲಿಕ ಟೆಂಟ್ಗಳಲ್ಲಿ ತರಕಾರಿ ಮತ್ತು ಹಣ್ಣು ವ್ಯಾಪಾರ ಮಾಡುತ್ತಿದ್ದ ಬೀದಿಬದಿ ವ್ಯಾಪಾರಿಗಳು ಶುಕ್ರವಾರ ಹಾಗೂ ಶನಿವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ತತ್ತರಿಸಿದ್ದಾರೆ.</p>.<p>ಗಾಳಿ ಮಳೆಗೆ ತಾತ್ಕಾಲಿಕ ಟೆಂಟ್ಗಳು ಕಿತ್ತು ಹೋಗಿದ್ದು, ವ್ಯಾಪಾರಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದೆಡೆ ವ್ಯಾಪಾರವಿಲ್ಲದೆ ನಷ್ಟ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ಮಳೆಯಿಂದಾಗಿ ಹಣ್ಣು, ತರಕಾರಿ ಹಾಳಾಗುತ್ತಿವೆ.</p>.<p>ಬೀದಿಬದಿ ವ್ಯಾಪಾರಿಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಸಣ್ಣ ಶೆಡ್ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ, ಕಾಮಗಾರಿ ಕೇವಲ ನೆಲಕ್ಕೆ ಕಾಂಕ್ರೀಟ್ ಹಾಕುವುದಕ್ಕಷ್ಟೇ ಸೀಮಿತವಾಗಿದೆ ಎಂದು ಬೀದಿಬದಿ ವ್ಯಾಪಾರಿಗಳು ದೂರಿದ್ದಾರೆ.</p>.<p>ಪ್ರತಿನಿತ್ಯ ಮಾರುಕಟ್ಟೆಗೆ ಹೋಗಿ ತರಕಾರಿ ತರುತ್ತೇವೆ. ಆದರೆ, ಮಾರಾಟವಾಗದೆ ಉಳಿಯುವ ತರಕಾರಿಯನ್ನು ಸುರಕ್ಷಿತವಾಗಿಡಲು ಸೂಕ್ತ ಜಾಗವಿಲ್ಲ. ಮಳೆ ನೀರಿಗೆ ನೆಂದು ತರಕಾರಿ ಎಲ್ಲವೂ ಕೊಳೆಯುತ್ತಿವೆ. ಇದರಿಂದ ಕೈಗೆ ಬಂದ ಲಾಭ ಬಾಯಿಗೆ ಬರದಂತಾಗಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡರು.</p>.<p>ಈಗಲಾದರೂ ಜನಪ್ರತಿನಿಧಿಗಳು ಅಥವಾ ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತು ಅರ್ಧಕ್ಕೆ ನಿಂತಿರುವ ಶೆಡ್ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕೆಂದು ವ್ಯಾಪಾರಿಗಳು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-18-783731007</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೇತಮಂಗಲ: ಗ್ರಾಮದ ಸಂತೆ ಮೈದಾನ ಹಾಗೂ ಮಾದರಿ ಶಾಲೆಯ ಕಾಂಪೌಂಡ್ ಪಕ್ಕದಲ್ಲಿ ತಾತ್ಕಾಲಿಕ ಟೆಂಟ್ಗಳಲ್ಲಿ ತರಕಾರಿ ಮತ್ತು ಹಣ್ಣು ವ್ಯಾಪಾರ ಮಾಡುತ್ತಿದ್ದ ಬೀದಿಬದಿ ವ್ಯಾಪಾರಿಗಳು ಶುಕ್ರವಾರ ಹಾಗೂ ಶನಿವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ತತ್ತರಿಸಿದ್ದಾರೆ.</p>.<p>ಗಾಳಿ ಮಳೆಗೆ ತಾತ್ಕಾಲಿಕ ಟೆಂಟ್ಗಳು ಕಿತ್ತು ಹೋಗಿದ್ದು, ವ್ಯಾಪಾರಸ್ಥರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದೆಡೆ ವ್ಯಾಪಾರವಿಲ್ಲದೆ ನಷ್ಟ ಅನುಭವಿಸುತ್ತಿದ್ದರೆ, ಮತ್ತೊಂದೆಡೆ ಮಳೆಯಿಂದಾಗಿ ಹಣ್ಣು, ತರಕಾರಿ ಹಾಳಾಗುತ್ತಿವೆ.</p>.<p>ಬೀದಿಬದಿ ವ್ಯಾಪಾರಿಗಳಿಗೆ ಗ್ರಾಮ ಪಂಚಾಯಿತಿ ವತಿಯಿಂದ ಸಣ್ಣ ಶೆಡ್ ನಿರ್ಮಿಸಿಕೊಡುವುದಾಗಿ ಭರವಸೆ ನೀಡಿದ್ದರು. ಆದರೆ, ಕಾಮಗಾರಿ ಕೇವಲ ನೆಲಕ್ಕೆ ಕಾಂಕ್ರೀಟ್ ಹಾಕುವುದಕ್ಕಷ್ಟೇ ಸೀಮಿತವಾಗಿದೆ ಎಂದು ಬೀದಿಬದಿ ವ್ಯಾಪಾರಿಗಳು ದೂರಿದ್ದಾರೆ.</p>.<p>ಪ್ರತಿನಿತ್ಯ ಮಾರುಕಟ್ಟೆಗೆ ಹೋಗಿ ತರಕಾರಿ ತರುತ್ತೇವೆ. ಆದರೆ, ಮಾರಾಟವಾಗದೆ ಉಳಿಯುವ ತರಕಾರಿಯನ್ನು ಸುರಕ್ಷಿತವಾಗಿಡಲು ಸೂಕ್ತ ಜಾಗವಿಲ್ಲ. ಮಳೆ ನೀರಿಗೆ ನೆಂದು ತರಕಾರಿ ಎಲ್ಲವೂ ಕೊಳೆಯುತ್ತಿವೆ. ಇದರಿಂದ ಕೈಗೆ ಬಂದ ಲಾಭ ಬಾಯಿಗೆ ಬರದಂತಾಗಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡರು.</p>.<p>ಈಗಲಾದರೂ ಜನಪ್ರತಿನಿಧಿಗಳು ಅಥವಾ ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚೆತ್ತು ಅರ್ಧಕ್ಕೆ ನಿಂತಿರುವ ಶೆಡ್ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸಬೇಕೆಂದು ವ್ಯಾಪಾರಿಗಳು ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260531-18-783731007</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>