<p><strong>ಬೇತಮಂಗಲ</strong>: ಇಲ್ಲಿನ ನಾಡ ಕಚೇರಿಗೆ ಸ್ವಂತ ಕಟ್ಟಡವಿಲ್ಲದೆ ದಶಕಗಳಿಂದ ಇಲ್ಲಿನ ಸಿಬ್ಬಂದಿ ಬಾಡಿಗೆ ಕಟ್ಟಡದಲ್ಲಿ ಕೆಲಸ ನಿರ್ವಹಿಸುವಂತಾಗಿದೆ.</p>.<p>ಬೇತಮಂಗಲ ನಾಡ ಕಚೇರಿಗೆ ಪ್ರತಿನಿತ್ಯ ನೂರಾರು ಮಂದಿ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಹಣಿ ಹಾಗೂ ವಿವಿಧ ಸಾಮಾಜಿಕ ಭದ್ರತಾ ಯೋಜನೆ ಕೆಲಸಕ್ಕಾಗಿ ಕಚೇರಿಗೆ ಭೇಟಿ ನೀಡುತ್ತಾರೆ. ಆದರೆ, ಕಚೇರಿಯಲ್ಲಿ ಮೂಲಸೌಲಭ್ಯಗಳಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ.</p>.<p>ಸ್ಥಳಾವಕಾಶದ ಕೊರತೆ, ಜನರು ನಿಲ್ಲಲು ಹೆಚ್ಚು ಜಾಗವಿಲ್ಲ. ದಾಖಲೆಗಳನ್ನು ಸುರಕ್ಷಿತವಾಗಿಡಲು ಪ್ರತ್ಯೇಕ ಕೊಠಡಿಗಳಿಲ್ಲ. ಕುಡಿಯುವ ನೀರು, ಶೌಚಾಲಯ ಯಾವ ಸೌಲಭ್ಯವೂ ಇಲ್ಲದೆ ದೂರದಿಂದ ಬರುವ ವೃದ್ಧರು ಹಾಗೂ ಮಹಿಳೆಯರಿಗೆ ತೊಂದರೆಯಾಗುತ್ತಿದೆ.</p>.<p>ಪ್ರತಿ ಬಾರಿ ಚುನಾವಣೆ ವೇಳೆ ನಾಡಕಚೇರಿ ಕಟ್ಟಡ ನಿರ್ಮಾಣದ ಭರವಸೆ ಸಿಗುತ್ತದೆ. ಆದರೆ, ಕೆಲಸ ಮಾತ್ರ ಸಾಧ್ಯವಾಗುತ್ತಿಲ್ಲ ಎಂಬುದು ಸಾರ್ವಜನಿಕರ ದೂರಾಗಿದೆ. ಹಾಗಾಗಿ ಈಗಲಾದರೂ ಅಧಿಕಾರಿಗಳು ಹಾಗೂ ಸಾರ್ವಜನಿಕರು ಎಚ್ಚೆತ್ತು ಸುಸಜ್ಜಿತ ನಾಡಕಚೇರಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ</strong>: ಇಲ್ಲಿನ ನಾಡ ಕಚೇರಿಗೆ ಸ್ವಂತ ಕಟ್ಟಡವಿಲ್ಲದೆ ದಶಕಗಳಿಂದ ಇಲ್ಲಿನ ಸಿಬ್ಬಂದಿ ಬಾಡಿಗೆ ಕಟ್ಟಡದಲ್ಲಿ ಕೆಲಸ ನಿರ್ವಹಿಸುವಂತಾಗಿದೆ.</p>.<p>ಬೇತಮಂಗಲ ನಾಡ ಕಚೇರಿಗೆ ಪ್ರತಿನಿತ್ಯ ನೂರಾರು ಮಂದಿ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಹಣಿ ಹಾಗೂ ವಿವಿಧ ಸಾಮಾಜಿಕ ಭದ್ರತಾ ಯೋಜನೆ ಕೆಲಸಕ್ಕಾಗಿ ಕಚೇರಿಗೆ ಭೇಟಿ ನೀಡುತ್ತಾರೆ. ಆದರೆ, ಕಚೇರಿಯಲ್ಲಿ ಮೂಲಸೌಲಭ್ಯಗಳಿಲ್ಲದೆ ಸಾರ್ವಜನಿಕರು ಪರದಾಡುವಂತಾಗಿದೆ.</p>.<p>ಸ್ಥಳಾವಕಾಶದ ಕೊರತೆ, ಜನರು ನಿಲ್ಲಲು ಹೆಚ್ಚು ಜಾಗವಿಲ್ಲ. ದಾಖಲೆಗಳನ್ನು ಸುರಕ್ಷಿತವಾಗಿಡಲು ಪ್ರತ್ಯೇಕ ಕೊಠಡಿಗಳಿಲ್ಲ. ಕುಡಿಯುವ ನೀರು, ಶೌಚಾಲಯ ಯಾವ ಸೌಲಭ್ಯವೂ ಇಲ್ಲದೆ ದೂರದಿಂದ ಬರುವ ವೃದ್ಧರು ಹಾಗೂ ಮಹಿಳೆಯರಿಗೆ ತೊಂದರೆಯಾಗುತ್ತಿದೆ.</p>.<p>ಪ್ರತಿ ಬಾರಿ ಚುನಾವಣೆ ವೇಳೆ ನಾಡಕಚೇರಿ ಕಟ್ಟಡ ನಿರ್ಮಾಣದ ಭರವಸೆ ಸಿಗುತ್ತದೆ. ಆದರೆ, ಕೆಲಸ ಮಾತ್ರ ಸಾಧ್ಯವಾಗುತ್ತಿಲ್ಲ ಎಂಬುದು ಸಾರ್ವಜನಿಕರ ದೂರಾಗಿದೆ. ಹಾಗಾಗಿ ಈಗಲಾದರೂ ಅಧಿಕಾರಿಗಳು ಹಾಗೂ ಸಾರ್ವಜನಿಕರು ಎಚ್ಚೆತ್ತು ಸುಸಜ್ಜಿತ ನಾಡಕಚೇರಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>