<p><strong>ಬೇತಮಂಗಲ</strong>: ಸತತ ಎರಡು ದಿನದಿಂದ ಸುರಿದ ಮಳೆಯಿಂದ ಗೋಸಿನಕೆರೆ ಕೋಡಿ ಹರಿಯುತ್ತಿದೆ. ಕೋಡಿ ನೀರು ಸಮರ್ಪಕವಾಗಿ ಹರಿಯಲು ರಾಜಕಾಲುವೆ ಇಲ್ಲದೆ ರಸ್ತೆ ಮೇಲೆ ಅರಿಯುತ್ತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಬೇತಮಂಗಲ ಗ್ರಾಮದಿಂದ ಕ್ಯಾಸಂಬಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ಬ್ಯಾಟರಾಯನಹಳ್ಳಿ ಬಳಿ ಹಾದು ಹೋಗಿರುವ ಕಾರಿಡಾರ್ ರಸ್ತೆ ಸೇತುವೆ ಬಳಿ ಸಮರ್ಪಕ ರಾಜಕಾಲುವೆ ಹಾಗೂ ಚರಂಡಿ ಇಲ್ಲದೆ ರಸ್ತೆಯ ಮೇಲೆ ನೀರು ಹರಿದು, ರೈತರ ತೋಟಗಳಿಗೆ ನೀರು ನುಗ್ಗಿದೆ.</p>.<p>ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಮಂದಿ ಸಂಚರಿಸುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮತ್ತಷ್ಟು ಮಳೆ ಸುರಿದರೆ ನೀರಿನ ಮಟ್ಟ ಏರಿಕೆಯಾಗಿ ವಾಹನ ಸಂಚಾರ ಬಹುತೇಕ ಕಡಿತವಾಗುವ ಸಾಧ್ಯತೆ ಇದೆ ಎಂಬುದು ಸಾರ್ವಜನಿಕರ ಆತಂಕವಾಗಿದೆ.</p>.<p>ರಾಜಕಾಲುವೆ ಸಂಪೂರ್ಣ ಒತ್ತುವರಿ: ಬೇತಮಂಗಲ ಗೋಸಿನಕರೆ ಕೋಡಿ ಅರಿಯುವ ನೀರಿನ ರಾಜಕಾಲುವೆಯನ್ನು ಪ್ರಭಾವಿಗಳು ಸಂಪೂರ್ಣ ಒತ್ತುವರಿಯಾಗಿದೆ. ಇದರಿಂದ ನೀರು ಸಮರ್ಪಕವಾಗಿ ಹರಿಯಲು ಸಾಧ್ಯವಾಗದೆ ರಸ್ತೆ ಮೇಲೆ ಹಾಗೂ ಹೊಲಗಳಿಗೆ ನೀರು ನುಗ್ಗಿದೆ ಎಂಬುದು ಸಾರ್ವಜನಿಕರ ಆಕ್ರೋಶವಾಗಿದೆ.</p>.<p>ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ</strong>: ಸತತ ಎರಡು ದಿನದಿಂದ ಸುರಿದ ಮಳೆಯಿಂದ ಗೋಸಿನಕೆರೆ ಕೋಡಿ ಹರಿಯುತ್ತಿದೆ. ಕೋಡಿ ನೀರು ಸಮರ್ಪಕವಾಗಿ ಹರಿಯಲು ರಾಜಕಾಲುವೆ ಇಲ್ಲದೆ ರಸ್ತೆ ಮೇಲೆ ಅರಿಯುತ್ತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<p>ಬೇತಮಂಗಲ ಗ್ರಾಮದಿಂದ ಕ್ಯಾಸಂಬಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದ ಬ್ಯಾಟರಾಯನಹಳ್ಳಿ ಬಳಿ ಹಾದು ಹೋಗಿರುವ ಕಾರಿಡಾರ್ ರಸ್ತೆ ಸೇತುವೆ ಬಳಿ ಸಮರ್ಪಕ ರಾಜಕಾಲುವೆ ಹಾಗೂ ಚರಂಡಿ ಇಲ್ಲದೆ ರಸ್ತೆಯ ಮೇಲೆ ನೀರು ಹರಿದು, ರೈತರ ತೋಟಗಳಿಗೆ ನೀರು ನುಗ್ಗಿದೆ.</p>.<p>ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ಮಂದಿ ಸಂಚರಿಸುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮತ್ತಷ್ಟು ಮಳೆ ಸುರಿದರೆ ನೀರಿನ ಮಟ್ಟ ಏರಿಕೆಯಾಗಿ ವಾಹನ ಸಂಚಾರ ಬಹುತೇಕ ಕಡಿತವಾಗುವ ಸಾಧ್ಯತೆ ಇದೆ ಎಂಬುದು ಸಾರ್ವಜನಿಕರ ಆತಂಕವಾಗಿದೆ.</p>.<p>ರಾಜಕಾಲುವೆ ಸಂಪೂರ್ಣ ಒತ್ತುವರಿ: ಬೇತಮಂಗಲ ಗೋಸಿನಕರೆ ಕೋಡಿ ಅರಿಯುವ ನೀರಿನ ರಾಜಕಾಲುವೆಯನ್ನು ಪ್ರಭಾವಿಗಳು ಸಂಪೂರ್ಣ ಒತ್ತುವರಿಯಾಗಿದೆ. ಇದರಿಂದ ನೀರು ಸಮರ್ಪಕವಾಗಿ ಹರಿಯಲು ಸಾಧ್ಯವಾಗದೆ ರಸ್ತೆ ಮೇಲೆ ಹಾಗೂ ಹೊಲಗಳಿಗೆ ನೀರು ನುಗ್ಗಿದೆ ಎಂಬುದು ಸಾರ್ವಜನಿಕರ ಆಕ್ರೋಶವಾಗಿದೆ.</p>.<p>ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>