ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಘಾಟನೆ ಭಾಗ್ಯ ಕಾಣದ ನೀರಿನ ಘಟಕ

ಮಜರ ರಾಮಪುರ ಘಟಕ ಸಿದ್ಧಗೊಂಡು 2 ವರ್ಷವಾದರೂ ಹನಿಯುತ್ತಿಲ್ಲ ನೀರು
Last Updated 13 ಮಾರ್ಚ್ 2020, 11:37 IST
ಅಕ್ಷರ ಗಾತ್ರ

ಬೇತಮಂಗಲ: ಕೆಜಿಎಫ್ ತಾಲ್ಲೂಕಿನ ಕ್ಯಾಸಂಬಳ್ಳಿ ಹೋಬಳಿಯ ಮಜರ ರಾಮಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಿ 2 ವರ್ಷ ಕಳೆದರೂ ಉದ್ಘಾಟನೆ ಭಾಗ್ಯ ಕಂಡಿಲ್ಲ. ಇದರಿಂದ ಗ್ರಾಮಸ್ಥರಿಗೆ ಶುದ್ಧ ನೀರಿನ ಭಾಗ್ಯವೂ ಮರೀಚಿಕೆಯಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅನುದಾನದಲ್ಲಿ ಸುಸಜ್ಜಿತವಾದ ಘಟಕವನ್ನು ನಿರ್ಮಾಣ ಮಾಡಲಾಗಿದೆ. ಆದರೆ ಘಟಕ ನೀರು ನೀಡದ ಗ್ರಾಮಸ್ಥರು ನಿತ್ಯ ಕ್ಯಾಸಂಬಳ್ಳಿ ಗ್ರಾಮಕ್ಕೆ ತರೆಳಿ ಕುಡಿಯುವ ನೀರನ್ನು ತರಬೇಕಾದ ಪರಿಸ್ಥಿತಿ ಇದೆ.

ಕೆಲವು ಗ್ರಾಮಸ್ಥರು ನಿತ್ಯ ಫ್ಲೋರೈಡ್ ಯುಕ್ತ ನೀರು ಸೇವಿಸುತ್ತಿದ್ದಾರೆ.

ಗ್ರಾ.ಪಂ ಅಧಿಕಾರಿಗಳ ಮೌನ: ಕ್ಯಾಸಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಗ್ರಾಮದ ಜನರಿಗೆ ಶುದ್ಧ ಕುಡಿಯುವ ನೀರಿನ ಭಾಗ್ಯ ಕಲ್ಪಿಸುವಲ್ಲಿ ಪಂಚಾಯಿತಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂಬ ಆರೋಪ ಗ್ರಾಮಸ್ಥರದ್ದು.

ಕ್ಯಾಸಂಬಳ್ಳಿ ಜಿಲ್ಲಾ ಪಂಚಾಯಿತಿ ಸದಸ್ಯ ಜಯಪ್ರಕಾಶ್ ನಾಯ್ಡು ನಿತ್ಯ ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ. ಆದರೂ ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ. ಶಾಸಕಿ ಎಂ.ರೂಪಕಲಾ ಶಶಿಧರ್ ಅವರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರುತ್ತಾರೆ.

*

ಈ ವ್ಯಾಪ್ತಿಯ ಜಿಲ್ಲಾ ಪಂಚಾಯಿತಿ ಸದಸ್ಯ ಬಿಜೆಪಿ ಹಾಗೂ ಶಾಸಕಿ ಕಾಂಗ್ರೆಸ್ ಪಕ್ಷವಾಗಿದ್ದು, ಹೊಂದಾಣಿಕೆ ಸಮಸ್ಯೆಯಿಂದ ಮೂಲ ಸೌಕರ್ಯಗಳಿಗೆ ತೊಂದರೆಯಾಗಿದೆ
-ದೇವರಾಜ್, ಗ್ರಾಮದ ಮುಖಂಡ, ಮಜರ ರಾಮಪುರ

*

ಘಟಕ ನಿರ್ಮಾಣದ ಸಣ್ಣ ಪುಟ್ಟ ಕೆಲಸವನ್ನು ಶೀಘ್ರದಲ್ಲೇ ಮುಗಿಸಬೇಕೆಂದು ಅಧಿಕಾರಿಗಳಿಗೆ ತಿಳಿಸಲಾಗಿದೆ. ಸಾಧ್ಯವಾದಷ್ಟು ಬೇಗ ಘಟಕ ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ
-ಜಯಪ್ರಕಾಶ್ ನಾಯ್ಡು, ಜಿ.ಪಂ ಸದಸ್ಯ, ಕ್ಯಾಸಂಬಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT