<p><strong>ಬೇತಮಂಗಲ</strong>: ಗ್ರಾಮದ ಸಮೀಪದ ಎನ್.ಜಿ. ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂತನಹಳ್ಳಿ ನಿವಾಸಿ ಸುಬ್ರಮಣಿ ಅವರು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಕುಡಿಯುವ ನೀರಿಗಾಗಿ ಏಕಾಂಗಿಯಾಗಿ ಪ್ರತಿಭಟನೆ ಕೈಗೊಂಡಿದ್ದಾರೆ. </p>.<p>‘ನಮ್ಮ ಕುಟುಂಬಕ್ಕೆ ಕುಡಿಯುವ ನೀರು ಕಲ್ಪಿಸುವಂತೆ ಪದೇ ಪದೇ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಕುಡಿಯುವ ನೀರು ಕಲ್ಪಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ’ ಎಂದು ಪಂತನಹಳ್ಳಿ ಗ್ರಾಮದ ಸುಬ್ರಮಣಿ ತಿಳಿಸಿದರು.</p>.<p>‘ನಮ್ಮ ಮನೆಗೆ ಕುಡಿಯುವ ನೀರು ಬರುತ್ತಿಲ್ಲ. ವಾಟರ್ ಮ್ಯಾನ್ ಉದ್ದೇಶಪೂರ್ವಕವಾಗಿ ನಮ್ಮ ಮನೆಗೆ ನೀರು ಬಿಡುತ್ತಿಲ್ಲ. ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವಾನಿ ಜಯಪಾಲ್ ಅವರಿಗೂ ಮನವಿ ಮಾಡಿದ್ದೇನೆ. ಆದರೆ, ಅವರು ಸಮಸ್ಯೆ ಬಗೆಹರಿಸುವ ಬದಲಿಗೆ ಉಡಾಫೆಯಾಗಿ ಉತ್ತರಿಸಿದ್ದಾರೆ’ ಎಂದು ದೂರಿದರು. </p>.<p>ಸುಬ್ರಮಣಿ ಅವರ ಮನೆಗೆ ನೀರು ಬಿಡುವ ವಿಚಾರವಾಗಿ ಗುರುವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಏನೇ ಸಮಸ್ಯೆ ಇದ್ದರೂ ಇತ್ಯರ್ಥಪಡಿಸಿ, ನೀರು ಬರುವಂತೆ ಮಾಡುತ್ತೇನೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಏಜಾಜ್ ಪಾಷ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ</strong>: ಗ್ರಾಮದ ಸಮೀಪದ ಎನ್.ಜಿ. ಹುಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಂತನಹಳ್ಳಿ ನಿವಾಸಿ ಸುಬ್ರಮಣಿ ಅವರು ಗ್ರಾಮ ಪಂಚಾಯಿತಿ ಮುಂಭಾಗದಲ್ಲಿ ಕುಡಿಯುವ ನೀರಿಗಾಗಿ ಏಕಾಂಗಿಯಾಗಿ ಪ್ರತಿಭಟನೆ ಕೈಗೊಂಡಿದ್ದಾರೆ. </p>.<p>‘ನಮ್ಮ ಕುಟುಂಬಕ್ಕೆ ಕುಡಿಯುವ ನೀರು ಕಲ್ಪಿಸುವಂತೆ ಪದೇ ಪದೇ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಕುಡಿಯುವ ನೀರು ಕಲ್ಪಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ’ ಎಂದು ಪಂತನಹಳ್ಳಿ ಗ್ರಾಮದ ಸುಬ್ರಮಣಿ ತಿಳಿಸಿದರು.</p>.<p>‘ನಮ್ಮ ಮನೆಗೆ ಕುಡಿಯುವ ನೀರು ಬರುತ್ತಿಲ್ಲ. ವಾಟರ್ ಮ್ಯಾನ್ ಉದ್ದೇಶಪೂರ್ವಕವಾಗಿ ನಮ್ಮ ಮನೆಗೆ ನೀರು ಬಿಡುತ್ತಿಲ್ಲ. ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವಾನಿ ಜಯಪಾಲ್ ಅವರಿಗೂ ಮನವಿ ಮಾಡಿದ್ದೇನೆ. ಆದರೆ, ಅವರು ಸಮಸ್ಯೆ ಬಗೆಹರಿಸುವ ಬದಲಿಗೆ ಉಡಾಫೆಯಾಗಿ ಉತ್ತರಿಸಿದ್ದಾರೆ’ ಎಂದು ದೂರಿದರು. </p>.<p>ಸುಬ್ರಮಣಿ ಅವರ ಮನೆಗೆ ನೀರು ಬಿಡುವ ವಿಚಾರವಾಗಿ ಗುರುವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ. ಏನೇ ಸಮಸ್ಯೆ ಇದ್ದರೂ ಇತ್ಯರ್ಥಪಡಿಸಿ, ನೀರು ಬರುವಂತೆ ಮಾಡುತ್ತೇನೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಏಜಾಜ್ ಪಾಷ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>