<p><strong>ಕೆಜಿಎಫ್:</strong> ‘ಇಪ್ಪತ್ತು ವರ್ಷಗಳ ಹಿಂದೆ ಮುಚ್ಚಿದ್ದ ಬಿಜಿಎಂಎಲ್ ಆಸ್ಪತ್ರೆಯನ್ನು ಕೋವಿಡ್ ನಂತರವೂ ಮುಂದುವರಿಸಿಕೊಂಡು ಹೋಗಬೇಕು. ಅದಕ್ಕಾಗಿ ಗಣಿ ಸಚಿವಾಲಯ ಎಲ್ಲಾ ರೀತಿಯ ನೆರವು ನೀಡಲಿದೆ’ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಇಲ್ಲಿನ ಚಾಂಪಿಯನ್ ರೀಫ್ಸ್ನಲ್ಲಿರುವ ಬಿಜಿಎಂಎಲ್ ಆಸ್ಪತ್ರೆಯನ್ನು ಗುರುವಾರ ವರ್ಚುಯಲ್ ಮೀಟ್ ಮೂಲಕ ಕೋವಿಡ್ ಆಸ್ಪತ್ರೆಯನ್ನಾಗಿ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.</p>.<p>ಈ ಆಸ್ಪತ್ರೆಯನ್ನು 250 ಹಾಸಿಗೆಯುಳ್ಳ ಆಸ್ಪತ್ರೆಯನ್ನಾಗಿ ಪರಿವರ್ತನೆ ಮಾಡಿರುವುದು ಶ್ಲಾಘನೀಯ. ಆಸ್ಪತ್ರೆಯಲ್ಲಿದ್ದ 450 ಟ್ರ್ಯಾಕ್ಟರ್ನಷ್ಟು ತ್ಯಾಜ್ಯವನ್ನು ತೆಗೆದುಹಾಕುವಲ್ಲಿ ಸಂಸದ ಎಸ್. ಮುನಿಸ್ವಾಮಿ ಮತ್ತು ಅವರ ತಂಡ ಶ್ರಮವಹಿಸಿದೆ. ಆಸ್ಪತ್ರೆಯನ್ನು ಕೋವಿಡ್ ಅವಧಿ ಮುಗಿದ ನಂತರವೂ ಮುಂದುವರಿಸಬೇಕು ಎಂದು ಹೇಳಿದರು.</p>.<p>ಗಣಿ ಸಚಿವಾಲಯದಿಂದ ದೇಶದಲ್ಲಿ 32 ಕಡೆ ಆಮ್ಲಜನಕ ಉತ್ಪಾದನೆ ಮಾಡುವ ಘಟಕ ನೀಡಲಾಗಿದೆ. ಈ ಆಸ್ಪತ್ರೆಗೆ ನಿಮಿಷಕ್ಕೆ 1,000 ಲೀಟರ್ ದ್ರವೀಕೃತ ಆಮ್ಲಜನಕ ಉತ್ಪಾದನೆ ಮಾಡುವ ಘಟಕ ನೀಡಲಾಗುವುದು. ದುರಸ್ತಿ ಮತ್ತು ನವೀಕರಣಕ್ಕಾಗಿ ₹ 20 ಲಕ್ಷ ನೀಡಲಾಗುವುದು. ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ 30 ಆಮ್ಲಜನಕ ಕಾನ್ಸ್ನ್ಟ್ರೇಟರ್ ನೀಡುವ ಮೂಲಕ ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದರು.</p>.<p>ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಮಾತನಾಡಿ, ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಹೇಳಿದರು.</p>.<p>‘ಸೋಮವಾರದಂದು ಬಿಜಿಎಂಎಲ್ ಆಸ್ಪತ್ರೆಗೆ ಭೇಟಿ ನೀಡಲಾಗುವುದು’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.</p>.<p>ಸಂಸದ ಎಸ್. ಮುನಿಸ್ವಾಮಿ ಮಾತನಾಡಿ, ಸುಮಾರು 200 ಕಾರ್ಯಕರ್ತರು 20 ದಿನಗಳ ಕಾಲ ನಿರಂತರವಾಗಿ ಕೆಲಸ ಮಾಡಿ, ಕೋವಿಡ್ ಆಸ್ಪತ್ರೆಯು ಶೀಘ್ರವಾಗಿ ಕಾರ್ಯಾರಂಭ ಮಾಡಲು ಶ್ರಮಿಸಿದ್ದಾರೆ. ಕೋವಿಡ್ ಅವಧಿ ಮುಗಿದ ನಂತರ ಬಿಜಿಎಂಎಲ್ ಆಸ್ಪತ್ರೆಯನ್ನು ವೈದ್ಯಕೀಯ ಕಾಲೇಜನ್ನಾಗಿ ಪರಿವರ್ತನೆ ಮಾಡಬೇಕು. ಈ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.</p>.<p>ಜಿಲ್ಲಾಧಿಕಾರಿ ಆರ್. ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಾಗರಾಜ್, ನಗರಸಭೆ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ, ಉಪ ವಿಭಾಗಾಧಿಕಾರಿ ಸೋಮಶೇಖರ್, ತಹಶೀಲ್ದಾರ್ ಕೆ.ಎನ್. ಸುಜಾತಾ, ಡಾ.ಚಂದನ್, ಡಾ.ಸುನಿಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ‘ಇಪ್ಪತ್ತು ವರ್ಷಗಳ ಹಿಂದೆ ಮುಚ್ಚಿದ್ದ ಬಿಜಿಎಂಎಲ್ ಆಸ್ಪತ್ರೆಯನ್ನು ಕೋವಿಡ್ ನಂತರವೂ ಮುಂದುವರಿಸಿಕೊಂಡು ಹೋಗಬೇಕು. ಅದಕ್ಕಾಗಿ ಗಣಿ ಸಚಿವಾಲಯ ಎಲ್ಲಾ ರೀತಿಯ ನೆರವು ನೀಡಲಿದೆ’ ಎಂದು ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಖಾತೆ ಸಚಿವ ಪ್ರಲ್ಹಾದ ಜೋಶಿ ಹೇಳಿದರು.</p>.<p>ಇಲ್ಲಿನ ಚಾಂಪಿಯನ್ ರೀಫ್ಸ್ನಲ್ಲಿರುವ ಬಿಜಿಎಂಎಲ್ ಆಸ್ಪತ್ರೆಯನ್ನು ಗುರುವಾರ ವರ್ಚುಯಲ್ ಮೀಟ್ ಮೂಲಕ ಕೋವಿಡ್ ಆಸ್ಪತ್ರೆಯನ್ನಾಗಿ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.</p>.<p>ಈ ಆಸ್ಪತ್ರೆಯನ್ನು 250 ಹಾಸಿಗೆಯುಳ್ಳ ಆಸ್ಪತ್ರೆಯನ್ನಾಗಿ ಪರಿವರ್ತನೆ ಮಾಡಿರುವುದು ಶ್ಲಾಘನೀಯ. ಆಸ್ಪತ್ರೆಯಲ್ಲಿದ್ದ 450 ಟ್ರ್ಯಾಕ್ಟರ್ನಷ್ಟು ತ್ಯಾಜ್ಯವನ್ನು ತೆಗೆದುಹಾಕುವಲ್ಲಿ ಸಂಸದ ಎಸ್. ಮುನಿಸ್ವಾಮಿ ಮತ್ತು ಅವರ ತಂಡ ಶ್ರಮವಹಿಸಿದೆ. ಆಸ್ಪತ್ರೆಯನ್ನು ಕೋವಿಡ್ ಅವಧಿ ಮುಗಿದ ನಂತರವೂ ಮುಂದುವರಿಸಬೇಕು ಎಂದು ಹೇಳಿದರು.</p>.<p>ಗಣಿ ಸಚಿವಾಲಯದಿಂದ ದೇಶದಲ್ಲಿ 32 ಕಡೆ ಆಮ್ಲಜನಕ ಉತ್ಪಾದನೆ ಮಾಡುವ ಘಟಕ ನೀಡಲಾಗಿದೆ. ಈ ಆಸ್ಪತ್ರೆಗೆ ನಿಮಿಷಕ್ಕೆ 1,000 ಲೀಟರ್ ದ್ರವೀಕೃತ ಆಮ್ಲಜನಕ ಉತ್ಪಾದನೆ ಮಾಡುವ ಘಟಕ ನೀಡಲಾಗುವುದು. ದುರಸ್ತಿ ಮತ್ತು ನವೀಕರಣಕ್ಕಾಗಿ ₹ 20 ಲಕ್ಷ ನೀಡಲಾಗುವುದು. ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ 30 ಆಮ್ಲಜನಕ ಕಾನ್ಸ್ನ್ಟ್ರೇಟರ್ ನೀಡುವ ಮೂಲಕ ಉತ್ತಮ ಕೆಲಸ ಮಾಡಿದ್ದಾರೆ ಎಂದು ಹೇಳಿದರು.</p>.<p>ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಮಾತನಾಡಿ, ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಹೇಳಿದರು.</p>.<p>‘ಸೋಮವಾರದಂದು ಬಿಜಿಎಂಎಲ್ ಆಸ್ಪತ್ರೆಗೆ ಭೇಟಿ ನೀಡಲಾಗುವುದು’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.</p>.<p>ಸಂಸದ ಎಸ್. ಮುನಿಸ್ವಾಮಿ ಮಾತನಾಡಿ, ಸುಮಾರು 200 ಕಾರ್ಯಕರ್ತರು 20 ದಿನಗಳ ಕಾಲ ನಿರಂತರವಾಗಿ ಕೆಲಸ ಮಾಡಿ, ಕೋವಿಡ್ ಆಸ್ಪತ್ರೆಯು ಶೀಘ್ರವಾಗಿ ಕಾರ್ಯಾರಂಭ ಮಾಡಲು ಶ್ರಮಿಸಿದ್ದಾರೆ. ಕೋವಿಡ್ ಅವಧಿ ಮುಗಿದ ನಂತರ ಬಿಜಿಎಂಎಲ್ ಆಸ್ಪತ್ರೆಯನ್ನು ವೈದ್ಯಕೀಯ ಕಾಲೇಜನ್ನಾಗಿ ಪರಿವರ್ತನೆ ಮಾಡಬೇಕು. ಈ ಸಂಬಂಧ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದರು.</p>.<p>ಜಿಲ್ಲಾಧಿಕಾರಿ ಆರ್. ಸೆಲ್ವಮಣಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನಾಗರಾಜ್, ನಗರಸಭೆ ಅಧ್ಯಕ್ಷ ವಳ್ಳಲ್ ಮುನಿಸ್ವಾಮಿ, ಉಪ ವಿಭಾಗಾಧಿಕಾರಿ ಸೋಮಶೇಖರ್, ತಹಶೀಲ್ದಾರ್ ಕೆ.ಎನ್. ಸುಜಾತಾ, ಡಾ.ಚಂದನ್, ಡಾ.ಸುನಿಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>