<p><strong>ಕೋಲಾರ: </strong>ತಾಲ್ಲೂಕಿನ ಭಟ್ಟರಹಳ್ಳಿ ಗ್ರಾಮದ ನ್ಯೂಜ್ಯೋತಿ ವಿದ್ಯಾಸಂಸ್ಥೆಯ ಇಬ್ಬರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಸೋಮವಾರ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.</p>.<p>ತಾಲ್ಲೂಕಿನ ನಡುಪಳ್ಳಿ ಗ್ರಾಮದ ರಚಿತ್ (16) ಮತ್ತು ಹರಳಕುಂಟೆ ಗ್ರಾಮದ ರವಿತೇಜ (16) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿಗಳು. ಇವರಿಬ್ಬರೂ ಮಧ್ಯಾಹ್ನ ಊಟದ ಸಮಯದಲ್ಲಿ ಶಾಲೆಯ ಪಕ್ಕದ ನೀಲಗಿರಿ ತೋಪಿನ ಹೋಗಿ ಕೀಟನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಊಟದ ಸಮಯ ಮುಗಿದ ನಂತರ ಶಾಲೆಗೆ ಮರಳಿದ ಇವರಿಬ್ಬರೂ ಸ್ವಲ್ಪ ಸಮಯದಲ್ಲೇ ತರಗತಿಯಲ್ಲಿ ಅಸ್ವಸ್ಥಗೊಂಡಿದ್ದಾರೆ. ಇಬ್ಬರ ಬಾಯಲ್ಲೂ ನೊರೆ ಬರುತ್ತಿರುವುದನ್ನು ನೋಡಿದ ಶಿಕ್ಷಕರು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದಾಗ ಕೀಟನಾಶಕ ಕುಡಿದಿರುವುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ರವಿತೇಜ ಬೆಳಿಗ್ಗೆ ಶಾಲೆಗೆ ಬರುವಾಗಲೇ ಬ್ಯಾಗ್ನಲ್ಲಿ ಕೀಟನಾಶಕದ ಬಾಟಲಿ ತೆಗೆದುಕೊಂಡು ಬಂದಿದ್ದ ಎಂದು ಸಹಪಾಠಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ಗೊತ್ತಾಗಿಲ್ಲ. ರಚಿತ್ ಮತ್ತು ರವಿತೇಜನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ರಚಿತ್ನ ತಂದೆ ಗೋಪಾಲ್ ಕೃಷಿಕರಾಗಿದ್ದಾರೆ. ರವಿತೇಜನ ತಂದೆ ಮುನಿರಾಜು ಗಾರೆ ಕೆಲಸ ಮಾಡುತ್ತಾರೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ತಾಲ್ಲೂಕಿನ ಭಟ್ಟರಹಳ್ಳಿ ಗ್ರಾಮದ ನ್ಯೂಜ್ಯೋತಿ ವಿದ್ಯಾಸಂಸ್ಥೆಯ ಇಬ್ಬರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಸೋಮವಾರ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ.</p>.<p>ತಾಲ್ಲೂಕಿನ ನಡುಪಳ್ಳಿ ಗ್ರಾಮದ ರಚಿತ್ (16) ಮತ್ತು ಹರಳಕುಂಟೆ ಗ್ರಾಮದ ರವಿತೇಜ (16) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿಗಳು. ಇವರಿಬ್ಬರೂ ಮಧ್ಯಾಹ್ನ ಊಟದ ಸಮಯದಲ್ಲಿ ಶಾಲೆಯ ಪಕ್ಕದ ನೀಲಗಿರಿ ತೋಪಿನ ಹೋಗಿ ಕೀಟನಾಶಕ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಊಟದ ಸಮಯ ಮುಗಿದ ನಂತರ ಶಾಲೆಗೆ ಮರಳಿದ ಇವರಿಬ್ಬರೂ ಸ್ವಲ್ಪ ಸಮಯದಲ್ಲೇ ತರಗತಿಯಲ್ಲಿ ಅಸ್ವಸ್ಥಗೊಂಡಿದ್ದಾರೆ. ಇಬ್ಬರ ಬಾಯಲ್ಲೂ ನೊರೆ ಬರುತ್ತಿರುವುದನ್ನು ನೋಡಿದ ಶಿಕ್ಷಕರು ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದಾಗ ಕೀಟನಾಶಕ ಕುಡಿದಿರುವುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.</p>.<p>ರವಿತೇಜ ಬೆಳಿಗ್ಗೆ ಶಾಲೆಗೆ ಬರುವಾಗಲೇ ಬ್ಯಾಗ್ನಲ್ಲಿ ಕೀಟನಾಶಕದ ಬಾಟಲಿ ತೆಗೆದುಕೊಂಡು ಬಂದಿದ್ದ ಎಂದು ಸಹಪಾಠಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ಗೊತ್ತಾಗಿಲ್ಲ. ರಚಿತ್ ಮತ್ತು ರವಿತೇಜನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.<p>ರಚಿತ್ನ ತಂದೆ ಗೋಪಾಲ್ ಕೃಷಿಕರಾಗಿದ್ದಾರೆ. ರವಿತೇಜನ ತಂದೆ ಮುನಿರಾಜು ಗಾರೆ ಕೆಲಸ ಮಾಡುತ್ತಾರೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>