<p><strong>ಮಾಲೂರು:</strong> ಈ ಸಾಲಿನ ಬಜೆಟ್ನಲ್ಲಿ ಕೋಲಾರ ಜಿಲ್ಲೆಗೆ ಎಂದೂ ದೊರೆಯದ ಯೊಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.</p>.<p>ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ತಾಲ್ಲೂಕು ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೋಲಾರ ಜಿಲ್ಲೆಗೆ 8 ಯೋಜನೆಗಳನ್ನು ನೀಡಿದ್ದು, ಮಾಲೂರಿಗೆ ಹೆಚ್ಚು ಅನುದಾನಗಳನ್ನು ಘೋಷಣೆ ಮಾಡಿದ್ದಾರೆ. ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದ ಆಧಾರದಲ್ಲಿ ವೈದೈಕೀಯ ಕಾಲೇಜು ಆರಂಭಿಸಲು ಅವಕಾಶ ಕಲ್ಪಿಸಿದ್ದಾರೆ. ಮಾಲೂರಿನ ಸರ್ಕಾರಿ ಆಸ್ಪತ್ರೆ ಕಟ್ಟಡ ಶಿಥಿಲವಾಗಿತ್ತು. ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಬಜೆಟ್ ನಲ್ಲಿ ₹41 ಕೋಟಿ ಘೋಷಣೆ ಮಾಡಲಾಗಿದೆ. ಈಗಾಗಲೇ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಟೀಕಲ್ ರಸ್ತೆಯಲ್ಲಿ ಸುಮಾರು 12 ಎಕರೆ ಸರ್ಕಾರಿ ಭೂಮಿಯನ್ನು ಗುರ್ತಿಸಲಾಗಿದೆ ಎಂದರು.</p>.<p>ಜಿಲ್ಲೆಯ ನರಸಾಪುರದಲ್ಲಿ ಉದ್ಯೋಗಸ್ಥ ಮಹಿಳೆಯರ ಅನುಕೂಲಕ್ಕಾಗಿ ₹173 ಕೋಟಿ ವೆಚ್ಚದಲ್ಲಿ 6 ಸಾವಿರ ಸಾಮಾರ್ಥ್ಯದ ಮಹಿಳಾ ವಸತಿ ನಿಯಗಳನ್ನು ನಿರ್ಮಿಸಲಾಗುವುದು. ಕೆಜಿಎಫ್ ಬಳಿ ಭಾರತೀಯ ಮೀಸಲು ಪೊಲೀಸ್ ಪಡೆಗಳನ್ನು ಸ್ಥಾಪಿಸಲು ₹40 ಕೋಟಿ ಅನುದಾನ ಕೊಟ್ಟಿದ್ದಾರೆ. ಅಲ್ಲದೆ, ರೈತರ ಆಧುನಿಕ ಮಾರುಕಟ್ಟೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆಗೆ, ಕೋಲಾರದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆಗೆ ಅನುದಾನ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು.</p>.<p>ಮಾಜಿ ಶಾಸಕ ಎ.ನಾಗರಾಜು , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ್ , ತಾಲ್ಲೂಕು ಅಧ್ಯಕ್ಷ ವಿಜಯನಾರಸಿಂಹ, ಪುರಸಭೆ ಅಧ್ಯಕ್ಷೆ ಕೋಮಾಲಾ ನಾರಾಯಣ್, ನಗರ ಪ್ರಾಧಿಕಾರದ ಅಧ್ಯಕ್ಷ ಆಹಮದ್ ನಯುಂ ಉಲ್ಲಾ, ದಾರ್ಖಾಸ್ತು ಸಮಿತಿ ಅಧ್ಯಕ್ಷ ಹನುಮಂತಪ್ಪ, ನಾರಾಯಣಸ್ವಾಮಿ, ಮುಖಂಡರಾದ ಹಮುಮಂತಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರಾಜಪ್ಪ, ಸದಸ್ಯರಾದ ವೆಂಕಟೇಶ್ ಇನ್ನಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು:</strong> ಈ ಸಾಲಿನ ಬಜೆಟ್ನಲ್ಲಿ ಕೋಲಾರ ಜಿಲ್ಲೆಗೆ ಎಂದೂ ದೊರೆಯದ ಯೊಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದಾರೆ ಎಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.</p>.<p>ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ತಾಲ್ಲೂಕು ಕಾಂಗ್ರೆಸ್ ಸಮಿತಿಯಿಂದ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕೋಲಾರ ಜಿಲ್ಲೆಗೆ 8 ಯೋಜನೆಗಳನ್ನು ನೀಡಿದ್ದು, ಮಾಲೂರಿಗೆ ಹೆಚ್ಚು ಅನುದಾನಗಳನ್ನು ಘೋಷಣೆ ಮಾಡಿದ್ದಾರೆ. ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದ ಆಧಾರದಲ್ಲಿ ವೈದೈಕೀಯ ಕಾಲೇಜು ಆರಂಭಿಸಲು ಅವಕಾಶ ಕಲ್ಪಿಸಿದ್ದಾರೆ. ಮಾಲೂರಿನ ಸರ್ಕಾರಿ ಆಸ್ಪತ್ರೆ ಕಟ್ಟಡ ಶಿಥಿಲವಾಗಿತ್ತು. ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಬಜೆಟ್ ನಲ್ಲಿ ₹41 ಕೋಟಿ ಘೋಷಣೆ ಮಾಡಲಾಗಿದೆ. ಈಗಾಗಲೇ ಆಸ್ಪತ್ರೆ ಕಟ್ಟಡ ಕಾಮಗಾರಿಗೆ ಟೀಕಲ್ ರಸ್ತೆಯಲ್ಲಿ ಸುಮಾರು 12 ಎಕರೆ ಸರ್ಕಾರಿ ಭೂಮಿಯನ್ನು ಗುರ್ತಿಸಲಾಗಿದೆ ಎಂದರು.</p>.<p>ಜಿಲ್ಲೆಯ ನರಸಾಪುರದಲ್ಲಿ ಉದ್ಯೋಗಸ್ಥ ಮಹಿಳೆಯರ ಅನುಕೂಲಕ್ಕಾಗಿ ₹173 ಕೋಟಿ ವೆಚ್ಚದಲ್ಲಿ 6 ಸಾವಿರ ಸಾಮಾರ್ಥ್ಯದ ಮಹಿಳಾ ವಸತಿ ನಿಯಗಳನ್ನು ನಿರ್ಮಿಸಲಾಗುವುದು. ಕೆಜಿಎಫ್ ಬಳಿ ಭಾರತೀಯ ಮೀಸಲು ಪೊಲೀಸ್ ಪಡೆಗಳನ್ನು ಸ್ಥಾಪಿಸಲು ₹40 ಕೋಟಿ ಅನುದಾನ ಕೊಟ್ಟಿದ್ದಾರೆ. ಅಲ್ಲದೆ, ರೈತರ ಆಧುನಿಕ ಮಾರುಕಟ್ಟೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪನೆಗೆ, ಕೋಲಾರದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಸ್ಥಾಪನೆಗೆ ಅನುದಾನ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದರು.</p>.<p>ಮಾಜಿ ಶಾಸಕ ಎ.ನಾಗರಾಜು , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಲಕ್ಷ್ಮಿನಾರಾಯಣ್ , ತಾಲ್ಲೂಕು ಅಧ್ಯಕ್ಷ ವಿಜಯನಾರಸಿಂಹ, ಪುರಸಭೆ ಅಧ್ಯಕ್ಷೆ ಕೋಮಾಲಾ ನಾರಾಯಣ್, ನಗರ ಪ್ರಾಧಿಕಾರದ ಅಧ್ಯಕ್ಷ ಆಹಮದ್ ನಯುಂ ಉಲ್ಲಾ, ದಾರ್ಖಾಸ್ತು ಸಮಿತಿ ಅಧ್ಯಕ್ಷ ಹನುಮಂತಪ್ಪ, ನಾರಾಯಣಸ್ವಾಮಿ, ಮುಖಂಡರಾದ ಹಮುಮಂತಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರಾಜಪ್ಪ, ಸದಸ್ಯರಾದ ವೆಂಕಟೇಶ್ ಇನ್ನಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>