<p><strong>ಬಂಗಾರಪೇಟೆ:</strong> ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾರಪೇಟೆ ಪೊಲೀಸರು ಇಬ್ಬರು ಆರೋಪಿಗಳನ್ನು ಮಂಗಳವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಕೋಲಾರ ನಗರದ ನಿವಾಸಿಗಳಾದ ಶಹಬಾಜ್ ಪಾಷ (22), ನಿಜಾಮ್ ಪಾಷ (21) ಬಂಧಿತ ಆರೋಪಿಗಳು. ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಅವರಿಂದ ₹3 ಲಕ್ಷ ಬೆಲೆ ಬಾಳುವ ಆರು ವೈಕ್ಗಳನ್ನು ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ಆ.26ರಂದು ಗುಲ್ಲಹಳ್ಳಿ ನಿವಾಸಿ ದೇವರಾಜ್ ಬಂಗಾರಪೇಟೆ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿರುವ ಬಗ್ಗೆ ನಗರದ ಠಾಣೆಗೆ ದೂರು ಸಲ್ಲಿಸಿದರು. ಇದರ ತನಿಖೆಯನ್ನು ಡಿವೈಎಸ್ಪಿ ವಿ.ಲಕ್ಷ್ಮಯ್ಯ ಅವರ ಮಾರ್ಗದರ್ಶನದಲ್ಲಿ ಬಂಗಾರಪೇಟೆ ಇನ್ಸ್ಪೆಕ್ಟರ್ ಆರ್.ದಯಾನಂದ್ ಮತ್ತು ಅಪರಾಧ ಪತ್ತೆ ತಂಡದವರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಎ.ಎಸ್.ಐ ರಮೇಶ್, ಸಿಬ್ಬಂದಿಗಳಾದ ವೇಣುಗೋಪಾಲ್, ಮಂಜುನಾಥ್, ಗಜೇಂದ್ರ, ವಿಜಯ್ ಕುಮಾರ್, ಶ್ರೀನಿವಾಸ್, ಮುನೇಂದ್ರ ಭಾಗವಹಿಸಿದ್ದರು.</p>
<p><strong>ಬಂಗಾರಪೇಟೆ:</strong> ದ್ವಿಚಕ್ರ ವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಗಾರಪೇಟೆ ಪೊಲೀಸರು ಇಬ್ಬರು ಆರೋಪಿಗಳನ್ನು ಮಂಗಳವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಕೋಲಾರ ನಗರದ ನಿವಾಸಿಗಳಾದ ಶಹಬಾಜ್ ಪಾಷ (22), ನಿಜಾಮ್ ಪಾಷ (21) ಬಂಧಿತ ಆರೋಪಿಗಳು. ಆರೋಪಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಅವರಿಂದ ₹3 ಲಕ್ಷ ಬೆಲೆ ಬಾಳುವ ಆರು ವೈಕ್ಗಳನ್ನು ವಶಪಡಿಸಿಕೊಂಡು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ಆ.26ರಂದು ಗುಲ್ಲಹಳ್ಳಿ ನಿವಾಸಿ ದೇವರಾಜ್ ಬಂಗಾರಪೇಟೆ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿರುವ ಬಗ್ಗೆ ನಗರದ ಠಾಣೆಗೆ ದೂರು ಸಲ್ಲಿಸಿದರು. ಇದರ ತನಿಖೆಯನ್ನು ಡಿವೈಎಸ್ಪಿ ವಿ.ಲಕ್ಷ್ಮಯ್ಯ ಅವರ ಮಾರ್ಗದರ್ಶನದಲ್ಲಿ ಬಂಗಾರಪೇಟೆ ಇನ್ಸ್ಪೆಕ್ಟರ್ ಆರ್.ದಯಾನಂದ್ ಮತ್ತು ಅಪರಾಧ ಪತ್ತೆ ತಂಡದವರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಕಾರ್ಯಾಚರಣೆಯಲ್ಲಿ ಎ.ಎಸ್.ಐ ರಮೇಶ್, ಸಿಬ್ಬಂದಿಗಳಾದ ವೇಣುಗೋಪಾಲ್, ಮಂಜುನಾಥ್, ಗಜೇಂದ್ರ, ವಿಜಯ್ ಕುಮಾರ್, ಶ್ರೀನಿವಾಸ್, ಮುನೇಂದ್ರ ಭಾಗವಹಿಸಿದ್ದರು.</p>