<p><strong>ಬಂಗಾರಪೇಟೆ:</strong> ಬಿಸಾನತ್ತ ರೈಲ್ವೆ ನಿಲ್ದಾಣದಿಂದ ಆಂಧ್ರಪ್ರದೇಶದ ಗಡಿ ಭಾಗದವರೆಗೆ ರಸ್ತೆ ನಿರ್ಮಾಣ ಅಭಿವೃದ್ಧಿ ಸಹಿಸದ ಕೆಲವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಹಿರಿಯ ಮುಖಂಡ ಜಿ.ವಿ ಶ್ರೀನಿವಾಸಮೂರ್ತಿ ಆರೋಪಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೋಣಿಮಡಗು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬಿಸಾನತ್ತ ರೈಲ್ವೆ ನಿಲ್ದಾಣದಿಂದ ಆಂಧ್ರಪ್ರದೇಶದ ಗಡಿಭಾಗದವರೆಗೆ ಸಿಸಿ ರಸ್ತೆ ಕಾಮಗಾರಿ ವೈನ್ ಶಾಪ್ಗೆ ಅನುಕೂಲವಾಗುವಂತೆ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾದದ್ದು. ರಾಜಕೀಯ ಉದ್ದೇಶಕ್ಕಾಗಿ ಆರೋಪಿಸುತ್ತಿದ್ದಾರೆ. ₹15 ಲಕ್ಷ ಅನುದಾನ ಮಂಜೂರು ಆಗಿದೆ. ಗುಣಮಟ್ಟದಿಂದ ರಸ್ತೆ ನಿರ್ಮಾಣವಾದರೆ ಕೆಜಿಎಫ್ ಮತ್ತು ಆಂಧ್ರಪ್ರದೇಶದ ಕುಪ್ಪಂ, ದ್ರಾವಿಡ ವಿಶ್ವವಿದ್ಯಾಲಯ, ಹೂವಿನ ಮಾರುಕಟ್ಟೆಗೆ ಅನುಕೂಲಕರವಾಗಿದೆ ಎಂದರು. </p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸೋಮಶೇಖರ್ ರೆಡ್ಡಿ, ಈ ರಸ್ತೆಯು ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದೆ. ಇಲ್ಲಿವರೆಗೆ ಯಾರೂ ಕೂಡ ಈ ರಸ್ತೆಯನ್ನು ನಿರ್ಮಾಣ ಮಾಡಿಲ್ಲ. ಅಭಿವೃದ್ಧಿಗೆ ಅಡ್ಡಿಪಡಿಸುವುದು ಸರಿ ಅಲ್ಲ ಎಂದರು. </p>.<p>ಟಿಎಪಿಎಂಎಸ್ ಸದಸ್ಯರಾದ ಸೀತಾರಾಮಪ್ಪ, ಡಿ.ಬಾಲಚಂದ್ರ, ಜೆಡಿಎಸ್ ಮುಖಂಡರಾದ ಶ್ರೀನಿವಾಸ್ ಗೌಡ , ಬಸಪ್ಪ, ನರಸಿಂಹ ಮೂರ್ತಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ಬಿಸಾನತ್ತ ರೈಲ್ವೆ ನಿಲ್ದಾಣದಿಂದ ಆಂಧ್ರಪ್ರದೇಶದ ಗಡಿ ಭಾಗದವರೆಗೆ ರಸ್ತೆ ನಿರ್ಮಾಣ ಅಭಿವೃದ್ಧಿ ಸಹಿಸದ ಕೆಲವರು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಜೆಡಿಎಸ್ ಹಿರಿಯ ಮುಖಂಡ ಜಿ.ವಿ ಶ್ರೀನಿವಾಸಮೂರ್ತಿ ಆರೋಪಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೋಣಿಮಡಗು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಬಿಸಾನತ್ತ ರೈಲ್ವೆ ನಿಲ್ದಾಣದಿಂದ ಆಂಧ್ರಪ್ರದೇಶದ ಗಡಿಭಾಗದವರೆಗೆ ಸಿಸಿ ರಸ್ತೆ ಕಾಮಗಾರಿ ವೈನ್ ಶಾಪ್ಗೆ ಅನುಕೂಲವಾಗುವಂತೆ ನಿರ್ಮಾಣ ಮಾಡಿದ್ದಾರೆ ಎಂದು ಆರೋಪಿಸಿರುವುದು ಸತ್ಯಕ್ಕೆ ದೂರವಾದದ್ದು. ರಾಜಕೀಯ ಉದ್ದೇಶಕ್ಕಾಗಿ ಆರೋಪಿಸುತ್ತಿದ್ದಾರೆ. ₹15 ಲಕ್ಷ ಅನುದಾನ ಮಂಜೂರು ಆಗಿದೆ. ಗುಣಮಟ್ಟದಿಂದ ರಸ್ತೆ ನಿರ್ಮಾಣವಾದರೆ ಕೆಜಿಎಫ್ ಮತ್ತು ಆಂಧ್ರಪ್ರದೇಶದ ಕುಪ್ಪಂ, ದ್ರಾವಿಡ ವಿಶ್ವವಿದ್ಯಾಲಯ, ಹೂವಿನ ಮಾರುಕಟ್ಟೆಗೆ ಅನುಕೂಲಕರವಾಗಿದೆ ಎಂದರು. </p>.<p>ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸೋಮಶೇಖರ್ ರೆಡ್ಡಿ, ಈ ರಸ್ತೆಯು ಆಂಧ್ರಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿದೆ. ಇಲ್ಲಿವರೆಗೆ ಯಾರೂ ಕೂಡ ಈ ರಸ್ತೆಯನ್ನು ನಿರ್ಮಾಣ ಮಾಡಿಲ್ಲ. ಅಭಿವೃದ್ಧಿಗೆ ಅಡ್ಡಿಪಡಿಸುವುದು ಸರಿ ಅಲ್ಲ ಎಂದರು. </p>.<p>ಟಿಎಪಿಎಂಎಸ್ ಸದಸ್ಯರಾದ ಸೀತಾರಾಮಪ್ಪ, ಡಿ.ಬಾಲಚಂದ್ರ, ಜೆಡಿಎಸ್ ಮುಖಂಡರಾದ ಶ್ರೀನಿವಾಸ್ ಗೌಡ , ಬಸಪ್ಪ, ನರಸಿಂಹ ಮೂರ್ತಿ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>