<p><strong>ಕೋಲಾರ:</strong> ಹುಬ್ಬಳ್ಳಿಯಲ್ಲಿ ಪಕ್ಷದ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು, ಮುಖಂಡರು ಜಿಲ್ಲಾಡಳಿತ ಭವನ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಗೃಹ ಸಚಿವ ಜಿ.ಪರಮೇಶ್ವರ್ ಕೂಡಲೇ ರಾಜೀನಾಮೆ ನೀಡಬೇಕು, ಅಧಿಕಾರಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿ ಎಂ.ಆರ್.ರವಿ ಮೂಲಕ ಮನವಿ ಪತ್ರ ಸಲ್ಲಿಸಿದರು.</p>.<p>ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅರುಣಮ್ಮ, ಕೆಜಿಎಫ್ನ ಅಶ್ವಿನಿ ಸಂಪಂಗಿ ನೇತೃತ್ವದಲ್ಲಿ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>‘ಜ.5 ರಂದು ಹುಬ್ಬಳಿಯಲ್ಲಿ ನಡೆದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು. ಪೊಲೀಸರು ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಅವರನ್ನು ಮಧ್ಯರಾತ್ರಿ 2 ಗಂಟೆಯಲ್ಲಿ ಮನೆಗೆ ಹೋಗಿ ಬಂಧಿಸಿದ್ದಾರೆ. ಅಲ್ಲದೆ, ಮಹಿಳೆಯನ್ನು ಬಂಧಿಸುವ ಸಂದರ್ಭದಲ್ಲಿ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ’ ಎಂದು ಆರೋಪಿಸಿದರು.</p>.<p>ಮಹಿಳೆಯರನ್ನು ರಕ್ಷಿಸಬೇಕಾದ ಪೊಲೀಸರೇ ದೌರ್ಜನ್ಯ ನಡೆಸಿದರೆ ಇನ್ನಾರೂ ರಕ್ಷಣೆ ನೀಡುತ್ತಾರೆ? ಈ ಸರ್ಕಾರ ಹಾಗೂ ಗೃಹ ಸಚಿವರು ಇದ್ದರೆಷ್ಟು, ಹೋದರೆಷ್ಟು? ಅವರ ಕೈಯಲ್ಲಿ ಮಹಿಳೆಯರಿಗೆ ರಕ್ಷಣೆ ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ತೊಲಗಲಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜಕೀಯ ದ್ವೇಷಕ್ಕಾಗಿ ಒಬ್ಬ ಮಹಿಳೆ ಮೇಲೆ ಸಾರ್ವಜನಿಕವಾಗಿ ದೌರ್ಜನ್ಯ ಎಸಗಿರುವುದು ಅಕ್ಷಮ್ಯ ಅಪರಾಧವಾಗಿದೆ. ಈ ರೀತಿ ದೌರ್ಜನ್ಯ ನಡೆಸಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು. ಸುಜಾತಾ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದು, ಈಚೆಗೆ ಬಿಜೆಪಿ ಸೇರಿದ್ದಾರೆಂಬ ರಾಜಕೀಯ ದ್ವೇಷಕ್ಕಾಗಿ ಕಾಂಗ್ರೆಸ್ ಕಾರ್ಪೊರೇಟರ್ ಸುವರ್ಣ ಎಂಬುವರ ಸುಳ್ಳು ದೂರಿನ ಮೇಲೆ ಪ್ರಕರಣ ದಾಖಲಿಸಿ ದೌರ್ಜನ್ಯ ಎಸಗುವಂತೆ ಮಾಡಿದ್ದಾರೆ ಎಂದು ದೂರಿದರು.</p>.<p>ಓಂಶಕ್ತಿ ಮಾಲಾಧಾರಿಣಿಗಳ ಮೇಲೆ ಕಲ್ಲು ಎಸೆತ ಪ್ರಕರಣ, ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದ್ದರೂ ಸಚಿವರು ಪೊಲೀಸರನ್ನು ಎಚ್ಚರಿಸುವ ಕೆಲಸ ಮಾಡುತ್ತಿಲ್ಲ. ರಾಜಕೀಯ ದ್ವೇಷ ತೀರಿಸಿಕೊಳ್ಳಲು ಪೊಲೀಸ್ ಇಲಾಖೆಯನ್ನು ಏಜೆಂಟ್ ಮಾದರಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>.<p>ಗೃಹ ಸಚಿವರಿಗೆ ತಮ್ಮ ಇಲಾಖೆಯ ಮೇಲೆ ಹಿಡಿತ ಇಲ್ಲವಾಗಿರುವುದು ಅವರ ಬೇಜವಾಬ್ದಾರಿ ಹೇಳಿಕೆಗಳಿಂದ ಸ್ವಷ್ಟವಾಗುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದೆ ಗೂಂಡಾಗಿರಿಗೆ ಶ್ರೀರಕ್ಷೆ ನೀಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.</p>.<p>ಈ ಪ್ರಕರಣವನ್ನು ತನಿಖೆ ನಡೆಸಿ ಮುಂದೆ ಈ ರೀತಿ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಅನ್ಯಾಯಕ್ಕೆ ಒಳಗಾಗಿರುವ ಬಿಜೆಪಿ ಕಾರ್ಯಕರ್ತೆಗೆ ಸಾಮಾಜಿಕ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿದರು.</p>.<p>ಸುಳ್ಯದ ಬಿಜೆಪಿ ಶಾಸಕಿಗೆ ಶ್ರದ್ಧಾಂಜಲಿ ಪೋಸ್ಟ್ ಹಾಕಿರುವವರನ್ನೂ ಕೂಡಲೇ ಬಂಧಿಸಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.</p>.<p>ಜಿಲ್ಲಾಧಿಕಾರಿಯು ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಪತ್ರ ಸ್ವೀಕರಿಸಿ ಸರ್ಕಾರಕ್ಕೆ ರವಾನಿಸುವುದಾಗಿ ತಿಳಿಸಿದರು.</p>.<p>ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ವಿಜಯಕುಮಾರ್, ಕೆಂಬೋಡಿ ನಾರಾಯಣಸ್ವಾಮಿ, ಸಾಮ ಅನಿಲ್ ಬಾಬು, ಶಿವಕುಮಾರ್ ಪಿ., ಸುಗಟೂರು ಚಂದ್ರಶೇಖರ್, ರಾಜೇಶ್ ಸಿಂಗ್, ಕೆಂಬೋಡಿ ನಾರಾಯಣಸ್ವಾಮಿ, ತಿಮ್ಮರಾಯಪ್ಪ, ಶಿಳ್ಳಂಗೆರೆ ಮಹೇಶ್, ಓಹಿಲೇಶ್, ಅಂಬರೀಷ್, ಮಮತಮ್ಮ, ರಾಜೇಶ್ವರಿ, ಪದ್ಮಾ, ಸುಮಾ, ಸವಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಹುಬ್ಬಳ್ಳಿಯಲ್ಲಿ ಪಕ್ಷದ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮಹಿಳಾ ಮೋರ್ಚಾ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು, ಮುಖಂಡರು ಜಿಲ್ಲಾಡಳಿತ ಭವನ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.</p>.<p>ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಗೃಹ ಸಚಿವ ಜಿ.ಪರಮೇಶ್ವರ್ ಕೂಡಲೇ ರಾಜೀನಾಮೆ ನೀಡಬೇಕು, ಅಧಿಕಾರಿಗಳನ್ನು ಬಂಧಿಸಬೇಕು ಎಂದು ಒತ್ತಾಯಿಸಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿ ಎಂ.ಆರ್.ರವಿ ಮೂಲಕ ಮನವಿ ಪತ್ರ ಸಲ್ಲಿಸಿದರು.</p>.<p>ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಅರುಣಮ್ಮ, ಕೆಜಿಎಫ್ನ ಅಶ್ವಿನಿ ಸಂಪಂಗಿ ನೇತೃತ್ವದಲ್ಲಿ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದು ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>‘ಜ.5 ರಂದು ಹುಬ್ಬಳಿಯಲ್ಲಿ ನಡೆದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂಥದ್ದು. ಪೊಲೀಸರು ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಅವರನ್ನು ಮಧ್ಯರಾತ್ರಿ 2 ಗಂಟೆಯಲ್ಲಿ ಮನೆಗೆ ಹೋಗಿ ಬಂಧಿಸಿದ್ದಾರೆ. ಅಲ್ಲದೆ, ಮಹಿಳೆಯನ್ನು ಬಂಧಿಸುವ ಸಂದರ್ಭದಲ್ಲಿ ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದಾರೆ’ ಎಂದು ಆರೋಪಿಸಿದರು.</p>.<p>ಮಹಿಳೆಯರನ್ನು ರಕ್ಷಿಸಬೇಕಾದ ಪೊಲೀಸರೇ ದೌರ್ಜನ್ಯ ನಡೆಸಿದರೆ ಇನ್ನಾರೂ ರಕ್ಷಣೆ ನೀಡುತ್ತಾರೆ? ಈ ಸರ್ಕಾರ ಹಾಗೂ ಗೃಹ ಸಚಿವರು ಇದ್ದರೆಷ್ಟು, ಹೋದರೆಷ್ಟು? ಅವರ ಕೈಯಲ್ಲಿ ಮಹಿಳೆಯರಿಗೆ ರಕ್ಷಣೆ ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ತೊಲಗಲಿ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ರಾಜಕೀಯ ದ್ವೇಷಕ್ಕಾಗಿ ಒಬ್ಬ ಮಹಿಳೆ ಮೇಲೆ ಸಾರ್ವಜನಿಕವಾಗಿ ದೌರ್ಜನ್ಯ ಎಸಗಿರುವುದು ಅಕ್ಷಮ್ಯ ಅಪರಾಧವಾಗಿದೆ. ಈ ರೀತಿ ದೌರ್ಜನ್ಯ ನಡೆಸಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು. ಸುಜಾತಾ ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿದ್ದು, ಈಚೆಗೆ ಬಿಜೆಪಿ ಸೇರಿದ್ದಾರೆಂಬ ರಾಜಕೀಯ ದ್ವೇಷಕ್ಕಾಗಿ ಕಾಂಗ್ರೆಸ್ ಕಾರ್ಪೊರೇಟರ್ ಸುವರ್ಣ ಎಂಬುವರ ಸುಳ್ಳು ದೂರಿನ ಮೇಲೆ ಪ್ರಕರಣ ದಾಖಲಿಸಿ ದೌರ್ಜನ್ಯ ಎಸಗುವಂತೆ ಮಾಡಿದ್ದಾರೆ ಎಂದು ದೂರಿದರು.</p>.<p>ಓಂಶಕ್ತಿ ಮಾಲಾಧಾರಿಣಿಗಳ ಮೇಲೆ ಕಲ್ಲು ಎಸೆತ ಪ್ರಕರಣ, ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ದಿನೇದಿನೇ ಹೆಚ್ಚಾಗುತ್ತಿದ್ದರೂ ಸಚಿವರು ಪೊಲೀಸರನ್ನು ಎಚ್ಚರಿಸುವ ಕೆಲಸ ಮಾಡುತ್ತಿಲ್ಲ. ರಾಜಕೀಯ ದ್ವೇಷ ತೀರಿಸಿಕೊಳ್ಳಲು ಪೊಲೀಸ್ ಇಲಾಖೆಯನ್ನು ಏಜೆಂಟ್ ಮಾದರಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>.<p>ಗೃಹ ಸಚಿವರಿಗೆ ತಮ್ಮ ಇಲಾಖೆಯ ಮೇಲೆ ಹಿಡಿತ ಇಲ್ಲವಾಗಿರುವುದು ಅವರ ಬೇಜವಾಬ್ದಾರಿ ಹೇಳಿಕೆಗಳಿಂದ ಸ್ವಷ್ಟವಾಗುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವಾಗದೆ ಗೂಂಡಾಗಿರಿಗೆ ಶ್ರೀರಕ್ಷೆ ನೀಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.</p>.<p>ಈ ಪ್ರಕರಣವನ್ನು ತನಿಖೆ ನಡೆಸಿ ಮುಂದೆ ಈ ರೀತಿ ನಡೆಯದಂತೆ ಎಚ್ಚರಿಕೆ ವಹಿಸಬೇಕು. ಅನ್ಯಾಯಕ್ಕೆ ಒಳಗಾಗಿರುವ ಬಿಜೆಪಿ ಕಾರ್ಯಕರ್ತೆಗೆ ಸಾಮಾಜಿಕ ನ್ಯಾಯ ದೊರಕಿಸಬೇಕೆಂದು ಆಗ್ರಹಿಸಿದರು.</p>.<p>ಸುಳ್ಯದ ಬಿಜೆಪಿ ಶಾಸಕಿಗೆ ಶ್ರದ್ಧಾಂಜಲಿ ಪೋಸ್ಟ್ ಹಾಕಿರುವವರನ್ನೂ ಕೂಡಲೇ ಬಂಧಿಸಿ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.</p>.<p>ಜಿಲ್ಲಾಧಿಕಾರಿಯು ಪ್ರತಿಭಟನಾ ಸ್ಥಳಕ್ಕೆ ಬಂದು ಮನವಿ ಪತ್ರ ಸ್ವೀಕರಿಸಿ ಸರ್ಕಾರಕ್ಕೆ ರವಾನಿಸುವುದಾಗಿ ತಿಳಿಸಿದರು.</p>.<p>ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರಾದ ವಿಜಯಕುಮಾರ್, ಕೆಂಬೋಡಿ ನಾರಾಯಣಸ್ವಾಮಿ, ಸಾಮ ಅನಿಲ್ ಬಾಬು, ಶಿವಕುಮಾರ್ ಪಿ., ಸುಗಟೂರು ಚಂದ್ರಶೇಖರ್, ರಾಜೇಶ್ ಸಿಂಗ್, ಕೆಂಬೋಡಿ ನಾರಾಯಣಸ್ವಾಮಿ, ತಿಮ್ಮರಾಯಪ್ಪ, ಶಿಳ್ಳಂಗೆರೆ ಮಹೇಶ್, ಓಹಿಲೇಶ್, ಅಂಬರೀಷ್, ಮಮತಮ್ಮ, ರಾಜೇಶ್ವರಿ, ಪದ್ಮಾ, ಸುಮಾ, ಸವಿತಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>