<p><strong>ಬಂಗಾರಪೇಟೆ:</strong> ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿದ್ದಂತೆ ಕ್ಷೇತ್ರದಲ್ಲಿ ರಾಜಕೀಯ ಧೃವೀಕರಣ ಆರಂಭವಾಗಿದೆ. ಬಿಜೆಪಿಯ ನೂರಾರು ಮುಖಂಡರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿರುವುದು ಇದಕ್ಕೆ ಸಾಕ್ಷಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು.</p>.<p>ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕೆಸರನಹಳ್ಳಿ ಗ್ರಾಮ ಪಂಚಾಯಿತಿ ಮುಖಂಡರು, ಯುವಕರು ಹಾಗೂ ಹಲ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾದ ವೇಳೆ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಚುನಾವಣೆ ಶೀಘ್ರ ನಡೆಯಲಿದೆ. ಕೆಸರನಹಳ್ಳಿ ಪಂಚಾಯಿತಿ ಹಲ ದಶಕಗಳಿಂದ ಬಿಜೆಪಿ ವಶದಲ್ಲಿದ್ದು, ಈಗ ಆ ಪಂಚಾಯಿತಿಯ ಬಹುತೇಕ ಮುಖಂಡರು ಕಾಂಗ್ರೆಸ್ ಕದತಟ್ಟಿರುವುದು ಮುಂದಿನ ಚುನಾವಣೆಯ ದಿಕ್ಸೂಚಿಯಾಗಿದೆ ಎಂದರು.</p>.<p>ಅಲ್ಲದೆ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಮುಖಂಡರ ಕೊರತೆ ಎದ್ದುಕಾಣುತ್ತಿದೆ. ಕಾರ್ಯಕರ್ತರು ವಿಧಿಯಿಲ್ಲದೆ ಅನ್ಯ ಪಕ್ಷಗಳತ್ತ ಮುಖ ಮಾಡುವಂತಾಗಿದೆ. ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಸಾಧನೆ ಸಹ ಶೂನ್ಯವಾಗಿದೆ ಎಂದರು.</p>.<p>ಕೆಸರನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಲಕ್ಷ್ಮಿದೇವಮ್ಮ ರಾಮದೇವ್ ಮತ್ತು ರೆಡ್ಡಿಹಳ್ಳಿಯ ಎನ್.ಡಿ.ಗಂಗಾಧರಪ್ಪ, ಶ್ರೀರಾಮ್, ವೆಂಕಟೇಶ್, ಮಧು, ಮುನಿಸ್ವಾಮಿ ಸೀನಾ, ಚಲಪತಿ, ಸುರೇಶ್, ನಾರಾಯಣಪ್ಪ, ಬಾಬು, ಮಾರುತಿ, ಸುಬ್ಬು ನೇತೃತ್ವದಲ್ಲಿ ಹಲ ಕಾರ್ಯಕರ್ತರು ಕಾಂಗ್ರೆಸ್ ಸೇರಿದರು.</p>.<p>ಮುಖಂಡರಾದ ದೇಶಿಹಳ್ಳಿ ವೆಂಕಟರಾಮ್, ಆರೋಕ್ಯರಾಜನ್, ಕಪಾಲಿ ಶಂಕರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿದ್ದಂತೆ ಕ್ಷೇತ್ರದಲ್ಲಿ ರಾಜಕೀಯ ಧೃವೀಕರಣ ಆರಂಭವಾಗಿದೆ. ಬಿಜೆಪಿಯ ನೂರಾರು ಮುಖಂಡರು ಪಕ್ಷ ತೊರೆದು ಕಾಂಗ್ರೆಸ್ ಸೇರುತ್ತಿರುವುದು ಇದಕ್ಕೆ ಸಾಕ್ಷಿ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಹೇಳಿದರು.</p>.<p>ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಕೆಸರನಹಳ್ಳಿ ಗ್ರಾಮ ಪಂಚಾಯಿತಿ ಮುಖಂಡರು, ಯುವಕರು ಹಾಗೂ ಹಲ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾದ ವೇಳೆ ಮಾತನಾಡಿದರು.</p>.<p>ಗ್ರಾಮ ಪಂಚಾಯಿತಿ ಚುನಾವಣೆ ಶೀಘ್ರ ನಡೆಯಲಿದೆ. ಕೆಸರನಹಳ್ಳಿ ಪಂಚಾಯಿತಿ ಹಲ ದಶಕಗಳಿಂದ ಬಿಜೆಪಿ ವಶದಲ್ಲಿದ್ದು, ಈಗ ಆ ಪಂಚಾಯಿತಿಯ ಬಹುತೇಕ ಮುಖಂಡರು ಕಾಂಗ್ರೆಸ್ ಕದತಟ್ಟಿರುವುದು ಮುಂದಿನ ಚುನಾವಣೆಯ ದಿಕ್ಸೂಚಿಯಾಗಿದೆ ಎಂದರು.</p>.<p>ಅಲ್ಲದೆ ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಮುಖಂಡರ ಕೊರತೆ ಎದ್ದುಕಾಣುತ್ತಿದೆ. ಕಾರ್ಯಕರ್ತರು ವಿಧಿಯಿಲ್ಲದೆ ಅನ್ಯ ಪಕ್ಷಗಳತ್ತ ಮುಖ ಮಾಡುವಂತಾಗಿದೆ. ರಾಜ್ಯದಲ್ಲಿನ ಬಿಜೆಪಿ ಸರ್ಕಾರದ ಸಾಧನೆ ಸಹ ಶೂನ್ಯವಾಗಿದೆ ಎಂದರು.</p>.<p>ಕೆಸರನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಲಕ್ಷ್ಮಿದೇವಮ್ಮ ರಾಮದೇವ್ ಮತ್ತು ರೆಡ್ಡಿಹಳ್ಳಿಯ ಎನ್.ಡಿ.ಗಂಗಾಧರಪ್ಪ, ಶ್ರೀರಾಮ್, ವೆಂಕಟೇಶ್, ಮಧು, ಮುನಿಸ್ವಾಮಿ ಸೀನಾ, ಚಲಪತಿ, ಸುರೇಶ್, ನಾರಾಯಣಪ್ಪ, ಬಾಬು, ಮಾರುತಿ, ಸುಬ್ಬು ನೇತೃತ್ವದಲ್ಲಿ ಹಲ ಕಾರ್ಯಕರ್ತರು ಕಾಂಗ್ರೆಸ್ ಸೇರಿದರು.</p>.<p>ಮುಖಂಡರಾದ ದೇಶಿಹಳ್ಳಿ ವೆಂಕಟರಾಮ್, ಆರೋಕ್ಯರಾಜನ್, ಕಪಾಲಿ ಶಂಕರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>