<p><strong>ಶ್ರೀನಿವಾಸಪುರ:</strong> ‘ಬಿಜೆಪಿ ಕಾರ್ಯಕರ್ತರು ಪ್ರಶಿಕ್ಷಣ ಪಡೆದು ಉತ್ತಮ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ಭವಿಷ್ಯದ ನಾಯಕರಾಗಿ ರೂಪುಗೊಳ್ಳಬೇಕು’ ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ.ಕೆ.ಎನ್. ವೇಣುಗೋಪಾಲ್ ಹೇಳಿದರು.</p>.<p>ಪಟ್ಟಣ ಹೊರವಲಯದ ವಿಐಪಿ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಬಿಜೆಪಿ ಮಂಡಲ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕಾರ್ಯಕರ್ತರು ಪಕ್ಷದ ನಿಜವಾದ ಆಸ್ತಿ. ಸಾಂಘಿಕ ಪ್ರಯತ್ನದ ಮೂಲಕ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕು ಎಂದು ಹೇಳಿದರು.</p>.<p>ಬಿಜೆಪಿ ಅತಿಹೆಚ್ಚು ಸಂಖ್ಯೆಯ ಕಾರ್ಯಕರ್ತರನ್ನು ಒಳಗೊಂಡಿರುವ ಏಕೈಕ ರಾಜಕೀಯ ಪಕ್ಷವಾಗಿದೆ. ವಿಚಾರ ಮರೆತು ಸ್ವಾರ್ಥಕ್ಕೆ ಇಂಬುಗೊಂಡರೆ ಯಾವುದೇ ಪಕ್ಷಕ್ಕೆ ಭವಿಷ್ಯ ಇರುವುದಿಲ್ಲ. ಕಾಂಗ್ರೆಸ್ ಇದಕ್ಕೆ ಉತ್ತಮ ನಿದರ್ಶನ ಎಂದರು.</p>.<p>ವಿಚಾರದಿಂದ ದೂರವಾಗಿ ವ್ಯಕ್ತಿ ಪೂಜೆಗೆ ಇಳಿದ ಪರಿಣಾಮ ಲೋಕಸಭೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳಿಗೆ ತೃಪ್ತಿ ಪಡಬೇಕಾಯಿತು. ಬಿಜೆಪಿ ವಿಚಾರಗಳಿಗೆ ಕಟ್ಟು ಬಿದ್ದುದರ ಫಲವಾಗಿ 303 ಸ್ಥಾನ ಪಡೆದು ಅಧಿಕಾರದ ಗದ್ದುಗೆ ಹಿಡಿಯಲು ಸಾಧ್ಯವಾಯಿತು ಎಂದು ತಿಳಿಸಿದರು.</p>.<p>ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲು ಬೂತ್ಮಟ್ಟದಲ್ಲಿ ಪಂಚರತ್ನಗಳನ್ನು ನೇಮಿಸಿದ್ದೇವೆ. ಕಾರ್ಯಕರ್ತರು ಪ್ರಶಿಕ್ಷಣ ವರ್ಗದ ಪೂರ್ಣ ಪ್ರಯೋಜನ ಪಡೆದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಪೂರಕವಾಗಿ ಕಾರ್ಯತಂತ್ರ ರೂಪಿಸಬೇಕು. ಮತದಾರರನ್ನು ಪಕ್ಷದ ಕಡೆ ಸೆಳೆಯಬೇಕು ಎಂದು ಹೇಳಿದರು.</p>.<p>ಬಿಜೆಪಿ ರಾಷ್ಟ್ರೀಯತೆಗೆ ಮೊದಲ ಆದ್ಯತೆ ನೀಡುತ್ತದೆ. ಸ್ವಾವಲಂಬಿ ಭಾರತ ನಿರ್ಮಾಣ ಅದರ ಗುರಿಯಾಗಿದೆ. ಆತ್ಮ ನಿರ್ಭರ ಭಾರತ ನಿರ್ಮಾಣಕ್ಕಾಗಿ ಕಾರ್ಯಕರ್ತರು ಶ್ರಮಿಸಬೇಕು. ಎಲ್ಲ ಹಂತಗಳಲ್ಲೂ ಪಕ್ಷದ ವರ್ಚಸ್ಸು ಬೆಳೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.</p>.<p>ಮುಖಂಡರಾದ ಕೃಷ್ಣಮೂರ್ತಿ, ಎಸ್.ವಿ. ಮುನಿವೆಂಕಟಪ್ಪ, ರಾಜೀವ್, ಎಂ. ಲಕ್ಷ್ಮಣಗೌಡ, ಅಶೋಕರೆಡ್ಡಿ, ವೆಂಕಟೇಗೌಡ, ಇ. ಶಿವಣ್ಣ, ವಿಐಪಿ ನಾಗರಾಜ್, ಜಯರಾಮರೆಡ್ಡಿ, ಶಿವಶಂಕರರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ‘ಬಿಜೆಪಿ ಕಾರ್ಯಕರ್ತರು ಪ್ರಶಿಕ್ಷಣ ಪಡೆದು ಉತ್ತಮ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕು. ಭವಿಷ್ಯದ ನಾಯಕರಾಗಿ ರೂಪುಗೊಳ್ಳಬೇಕು’ ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ.ಕೆ.ಎನ್. ವೇಣುಗೋಪಾಲ್ ಹೇಳಿದರು.</p>.<p>ಪಟ್ಟಣ ಹೊರವಲಯದ ವಿಐಪಿ ಪಬ್ಲಿಕ್ ಸ್ಕೂಲ್ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಬಿಜೆಪಿ ಮಂಡಲ ಪ್ರಶಿಕ್ಷಣ ವರ್ಗ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಕಾರ್ಯಕರ್ತರು ಪಕ್ಷದ ನಿಜವಾದ ಆಸ್ತಿ. ಸಾಂಘಿಕ ಪ್ರಯತ್ನದ ಮೂಲಕ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕು ಎಂದು ಹೇಳಿದರು.</p>.<p>ಬಿಜೆಪಿ ಅತಿಹೆಚ್ಚು ಸಂಖ್ಯೆಯ ಕಾರ್ಯಕರ್ತರನ್ನು ಒಳಗೊಂಡಿರುವ ಏಕೈಕ ರಾಜಕೀಯ ಪಕ್ಷವಾಗಿದೆ. ವಿಚಾರ ಮರೆತು ಸ್ವಾರ್ಥಕ್ಕೆ ಇಂಬುಗೊಂಡರೆ ಯಾವುದೇ ಪಕ್ಷಕ್ಕೆ ಭವಿಷ್ಯ ಇರುವುದಿಲ್ಲ. ಕಾಂಗ್ರೆಸ್ ಇದಕ್ಕೆ ಉತ್ತಮ ನಿದರ್ಶನ ಎಂದರು.</p>.<p>ವಿಚಾರದಿಂದ ದೂರವಾಗಿ ವ್ಯಕ್ತಿ ಪೂಜೆಗೆ ಇಳಿದ ಪರಿಣಾಮ ಲೋಕಸಭೆಯಲ್ಲಿ ಕಾಂಗ್ರೆಸ್ 40 ಸ್ಥಾನಗಳಿಗೆ ತೃಪ್ತಿ ಪಡಬೇಕಾಯಿತು. ಬಿಜೆಪಿ ವಿಚಾರಗಳಿಗೆ ಕಟ್ಟು ಬಿದ್ದುದರ ಫಲವಾಗಿ 303 ಸ್ಥಾನ ಪಡೆದು ಅಧಿಕಾರದ ಗದ್ದುಗೆ ಹಿಡಿಯಲು ಸಾಧ್ಯವಾಯಿತು ಎಂದು ತಿಳಿಸಿದರು.</p>.<p>ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲು ಬೂತ್ಮಟ್ಟದಲ್ಲಿ ಪಂಚರತ್ನಗಳನ್ನು ನೇಮಿಸಿದ್ದೇವೆ. ಕಾರ್ಯಕರ್ತರು ಪ್ರಶಿಕ್ಷಣ ವರ್ಗದ ಪೂರ್ಣ ಪ್ರಯೋಜನ ಪಡೆದು, ಚುನಾವಣೆಯಲ್ಲಿ ಗೆಲುವು ಸಾಧಿಸಲು ಪೂರಕವಾಗಿ ಕಾರ್ಯತಂತ್ರ ರೂಪಿಸಬೇಕು. ಮತದಾರರನ್ನು ಪಕ್ಷದ ಕಡೆ ಸೆಳೆಯಬೇಕು ಎಂದು ಹೇಳಿದರು.</p>.<p>ಬಿಜೆಪಿ ರಾಷ್ಟ್ರೀಯತೆಗೆ ಮೊದಲ ಆದ್ಯತೆ ನೀಡುತ್ತದೆ. ಸ್ವಾವಲಂಬಿ ಭಾರತ ನಿರ್ಮಾಣ ಅದರ ಗುರಿಯಾಗಿದೆ. ಆತ್ಮ ನಿರ್ಭರ ಭಾರತ ನಿರ್ಮಾಣಕ್ಕಾಗಿ ಕಾರ್ಯಕರ್ತರು ಶ್ರಮಿಸಬೇಕು. ಎಲ್ಲ ಹಂತಗಳಲ್ಲೂ ಪಕ್ಷದ ವರ್ಚಸ್ಸು ಬೆಳೆಯುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.</p>.<p>ಮುಖಂಡರಾದ ಕೃಷ್ಣಮೂರ್ತಿ, ಎಸ್.ವಿ. ಮುನಿವೆಂಕಟಪ್ಪ, ರಾಜೀವ್, ಎಂ. ಲಕ್ಷ್ಮಣಗೌಡ, ಅಶೋಕರೆಡ್ಡಿ, ವೆಂಕಟೇಗೌಡ, ಇ. ಶಿವಣ್ಣ, ವಿಐಪಿ ನಾಗರಾಜ್, ಜಯರಾಮರೆಡ್ಡಿ, ಶಿವಶಂಕರರೆಡ್ಡಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>