‘ಚುನಾವಣಾ ಸೋಲಿನಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಸ್ತಿತ್ವವೇ ಅಲುಗಾಡುತ್ತಿದೆ. ಆ ಪಕ್ಷದ ನಾಯಕರಿಗೆ ಕಾಂಗ್ರೆಸ್ನಲ್ಲಿ ತಮಗೆ ಭವಿಷ್ಯವಿಲ್ಲ ಎಂಬ ಆತಂಕ ಶುರುವಾಗಿದೆ. ಈ ಚುನಾವಣೆಗಳು ಮುಂದಿನ 10 ವರ್ಷ ರಾಜ್ಯದಲ್ಲಿ ಬಿಜೆಪಿಯೇ ಸಾರ್ವಭೌಮ ಎಂಬುದನ್ನು ಸಾಕ್ಷೀಕರಿಸಿವೆ. ಕಾರ್ಯಕರ್ತರು, ಶಿಕ್ಷಕರ ಸಂಘಟನೆಗಳು, ಪದವೀಧರರ ಸಂಘಟಿತ ಹೋರಾಟದಿಂದ ಈ ಗೆಲುವು ಲಭಿಸಿದೆ’ ಎಂದು ಸಂತಸ ವ್ಯಕ್ತಪಡಿಸಿದರು.