<p><strong>ಕೋಲಾರ</strong>: ‘ಪ್ರತಿಪಕ್ಷದವರಿಗೆ ಆರೋಪ ಮಾಡುವುದೇ ಕೆಲಸ, ಮಾಡಿಲಿ ಬಿಡಿ’ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.</p>.<p>ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಾವಿನ ಲೆಕ್ಕದಲ್ಲಿ ಸುಳ್ಳು ಮಾಹಿತಿ ನೀಡಲಾಗುತ್ತಿದೆ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಇಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಸಚಿವರು, ‘ಸರ್ಕಾರ ಸೋಂಕಿತರ ಸಾವಿನ ಲೆಕ್ಕದಲ್ಲಿ ಸುಳ್ಳು ಮಾಹಿತಿ ನೀಡುತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>‘ಸೋಂಕಿತರು ಮತ್ತು ಸಾವಿನ ಸಂಖ್ಯೆಯ ಮಾಹಿತಿ ಪ್ರತಿ ಬಾರಿ ಪೋರ್ಟಲ್ನಲ್ಲಿ ಅಪ್ಲೋಡ್ ಆಗುತ್ತಿದೆ. ಮುಖ್ಯಮಂತ್ರಿಗಳು ರಾಜ್ಯದ ಕೋವಿಡ್ ವಾರ್ರೂಂ, ಭೌತಿಕ ಪರಿಶೀಲನೆ, ಔಷಧ ಮಾತ್ರೆ ಹಂಚಿಕೆ ಜವಾಬ್ದಾರಿ ನನಗೆ ನೀಡಿದ್ದಾರೆ. ನನ್ನ ಬಳಿ ಪ್ರತಿದಿನದ ಮಾಹಿತಿ ಇರುತ್ತದೆ’ ಎಂದು ಹೇಳಿದರು.</p>.<p>ಲಾಕ್ಡೌನ್ನ ಮೊದಲ ದಿನ ಪೊಲೀಸರು ಸಾರ್ವಜನಿಕರಿಗೆ ಲಾಠಿ ಏಟು ಕೊಟ್ಟು ದೌರ್ಜನ್ಯ ನಡೆಸಿದ ಸಂಬಂಧ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಸರಿಯಾಗಿ ಲಾಕ್ಡೌನ್ ಜಾರಿಯಾಗದಿದ್ದರೆ ಮಾಧ್ಯಮದವರೆ ಟೀಕಿಸುತ್ತೀರಿ. ಲಾಕ್ಡೌನ್ ಜಾರಿಗೆ ಕಠಿಣ ಕ್ರಮ ಕೈಗೊಂಡರೆ ಅದನ್ನೂ ಪ್ರಶ್ನಿಸುತ್ತೀರಿ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಪ್ರತಿಪಕ್ಷದವರಿಗೆ ಆರೋಪ ಮಾಡುವುದೇ ಕೆಲಸ, ಮಾಡಿಲಿ ಬಿಡಿ’ ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು.</p>.<p>ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಾವಿನ ಲೆಕ್ಕದಲ್ಲಿ ಸುಳ್ಳು ಮಾಹಿತಿ ನೀಡಲಾಗುತ್ತಿದೆ ಎಂಬ ಸಿದ್ದರಾಮಯ್ಯ ಅವರ ಆರೋಪಕ್ಕೆ ಇಲ್ಲಿ ಮಂಗಳವಾರ ಪ್ರತಿಕ್ರಿಯಿಸಿದ ಸಚಿವರು, ‘ಸರ್ಕಾರ ಸೋಂಕಿತರ ಸಾವಿನ ಲೆಕ್ಕದಲ್ಲಿ ಸುಳ್ಳು ಮಾಹಿತಿ ನೀಡುತ್ತಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>‘ಸೋಂಕಿತರು ಮತ್ತು ಸಾವಿನ ಸಂಖ್ಯೆಯ ಮಾಹಿತಿ ಪ್ರತಿ ಬಾರಿ ಪೋರ್ಟಲ್ನಲ್ಲಿ ಅಪ್ಲೋಡ್ ಆಗುತ್ತಿದೆ. ಮುಖ್ಯಮಂತ್ರಿಗಳು ರಾಜ್ಯದ ಕೋವಿಡ್ ವಾರ್ರೂಂ, ಭೌತಿಕ ಪರಿಶೀಲನೆ, ಔಷಧ ಮಾತ್ರೆ ಹಂಚಿಕೆ ಜವಾಬ್ದಾರಿ ನನಗೆ ನೀಡಿದ್ದಾರೆ. ನನ್ನ ಬಳಿ ಪ್ರತಿದಿನದ ಮಾಹಿತಿ ಇರುತ್ತದೆ’ ಎಂದು ಹೇಳಿದರು.</p>.<p>ಲಾಕ್ಡೌನ್ನ ಮೊದಲ ದಿನ ಪೊಲೀಸರು ಸಾರ್ವಜನಿಕರಿಗೆ ಲಾಠಿ ಏಟು ಕೊಟ್ಟು ದೌರ್ಜನ್ಯ ನಡೆಸಿದ ಸಂಬಂಧ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಸರಿಯಾಗಿ ಲಾಕ್ಡೌನ್ ಜಾರಿಯಾಗದಿದ್ದರೆ ಮಾಧ್ಯಮದವರೆ ಟೀಕಿಸುತ್ತೀರಿ. ಲಾಕ್ಡೌನ್ ಜಾರಿಗೆ ಕಠಿಣ ಕ್ರಮ ಕೈಗೊಂಡರೆ ಅದನ್ನೂ ಪ್ರಶ್ನಿಸುತ್ತೀರಿ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>