ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳಬಾಗಿಲು: ಕುರುಡುಮಲೆ ಪ್ರವೇಶ ನಿರ್ಬಂಧ

Last Updated 10 ಸೆಪ್ಟೆಂಬರ್ 2021, 5:28 IST
ಅಕ್ಷರ ಗಾತ್ರ

ಮುಳಬಾಗಿಲು: ತಾಲ್ಲೂಕಿನ ಕುರುಡುಮಲೆ ಗ್ರಾಮದ ಪುರಾಣ ಪ್ರಸಿದ್ಧ ವಿನಾಯಕ ದೇವಾಲಯಕ್ಕೆ ಗುರುವಾರದಿಂದ ಸೆ. 12ರವರೆವಿಗೂ ಭಕ್ತರಿಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

ಗಣೇಶ ಚತುರ್ಥಿಯುಶುಕ್ರವಾರ ಇದೆ. ಒಂದು ದಿನ ಮುಂಚಿತವಾಗಿಯೇ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಶನಿವಾರ ನಡೆಯಬೇಕಿದ್ದ ಲಕ್ಷ್ಮೀಗಣಪತಿ ದೇವರ ಬ್ರಹ್ಮ ರಥೋತ್ಸವವನ್ನು ರದ್ದುಪಡಿಸಲಾಗಿದೆ. ಜಿಲ್ಲಾಧಿಕಾರಿ ಅವರು ಸೂಚನೆ ಮೇರೆಗೆ ತಹಶೀಲ್ದಾರ್ ಕೆ.ಎನ್. ರಾಜಶೇಖರ್ ಆದೇಶ ಹೊರಡಿಸಿದ್ದಾರೆ.

ದೇವಾಲಯದ ಅರ್ಚಕರು ಮತ್ತು ಸಿಬ್ಬಂದಿಗೆ ಮಾತ್ರ ಧಾರ್ಮಿಕ ಕಾರ್ಯಕ್ರಮ ನಡೆಸಲು ಅವಕಾಶವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT