<p><strong>ಬಂಗಾರಪೇಟೆ</strong>: ‘ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಿರ್ಣಯಗಳು ದೇಶದ ಅಭಿವೃದ್ಧಿ ಹಾಗೂ ಹಿತರಕ್ಷಣೆಗೆ ಪೂರಕವಾಗಿದ್ದು, ವಿಶ್ವದ ಗಮನ ಸೆಳೆದಿವೆ’ ಎಂದು ಮಾಜಿ ಶಾಸಕ ಬಿ.ಪಿ. ವೆಂಕಟಮುನಿಯಪ್ಪ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಕಾಮಸಮುದ್ರದಲ್ಲಿ ಬಿಜೆಪಿ ಘಟಕ, ಕಾಮಸಮುದ್ರ ಹೋಬಳಿ ಮಹಾಶಕ್ತಿ ಕೇಂದ್ರದಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿ, ಮೋದಿ ಶಕ್ತಿಯನ್ನು ನೆಚ್ಚಿಕೊಂಡಿರುವ ಯುವಶಕ್ತಿ ಬಿಜೆಪಿಯತ್ತ ವಾಲುತ್ತಿದೆ ಎಂದರು.</p>.<p>‘ಆರೋಗ್ಯವಾಗಿರುವ ಪ್ರತಿ ಯೊಬ್ಬರೂ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು’ ಎಂದು ಬಿಜೆಪಿ ಜಿಲ್ಲಾ ಘಟಕ ಉಪಾಧ್ಯಕ್ಷ ಬಿ.ವಿ. ಮಹೇಶ್ ಹೇಳಿದರು.</p>.<p>ಬತ್ತಲಹಳ್ಳಿ ಮಂಜುನಾಥ್, ಮಂಡಲ ಕಾರ್ಯದರ್ಶಿ ಪಾರ್ಥಸಾರಥಿ, ಮುಖಂಡರಾದ ವೆಂಕಟೇಶ್, ತಿಪ್ಪರೆಡ್ಡಿ, ಮಂಜುನಾಥ್, ಕೃಷ್ಣಪ್ಪ, ಬಾಬುಗೌಡ ಶಿಬಿರದ ನೇತೃತ್ವವಹಿಸಿದ್ದರು. ನಟರಾಜ್, ಶ್ರೀಧರ್, ಮಹದೇವ್, ಮುನಿಯಪ್ಪ, ಮಂಜುನಾಥ್, ಶ್ರೀರಾಮ್, ಶ್ರೀನಿವಾಸ್, ಮುರಳಿ ವೆಂಕಟರಾಮ್, ಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ‘ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಿರ್ಣಯಗಳು ದೇಶದ ಅಭಿವೃದ್ಧಿ ಹಾಗೂ ಹಿತರಕ್ಷಣೆಗೆ ಪೂರಕವಾಗಿದ್ದು, ವಿಶ್ವದ ಗಮನ ಸೆಳೆದಿವೆ’ ಎಂದು ಮಾಜಿ ಶಾಸಕ ಬಿ.ಪಿ. ವೆಂಕಟಮುನಿಯಪ್ಪ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಕಾಮಸಮುದ್ರದಲ್ಲಿ ಬಿಜೆಪಿ ಘಟಕ, ಕಾಮಸಮುದ್ರ ಹೋಬಳಿ ಮಹಾಶಕ್ತಿ ಕೇಂದ್ರದಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿ, ಮೋದಿ ಶಕ್ತಿಯನ್ನು ನೆಚ್ಚಿಕೊಂಡಿರುವ ಯುವಶಕ್ತಿ ಬಿಜೆಪಿಯತ್ತ ವಾಲುತ್ತಿದೆ ಎಂದರು.</p>.<p>‘ಆರೋಗ್ಯವಾಗಿರುವ ಪ್ರತಿ ಯೊಬ್ಬರೂ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು’ ಎಂದು ಬಿಜೆಪಿ ಜಿಲ್ಲಾ ಘಟಕ ಉಪಾಧ್ಯಕ್ಷ ಬಿ.ವಿ. ಮಹೇಶ್ ಹೇಳಿದರು.</p>.<p>ಬತ್ತಲಹಳ್ಳಿ ಮಂಜುನಾಥ್, ಮಂಡಲ ಕಾರ್ಯದರ್ಶಿ ಪಾರ್ಥಸಾರಥಿ, ಮುಖಂಡರಾದ ವೆಂಕಟೇಶ್, ತಿಪ್ಪರೆಡ್ಡಿ, ಮಂಜುನಾಥ್, ಕೃಷ್ಣಪ್ಪ, ಬಾಬುಗೌಡ ಶಿಬಿರದ ನೇತೃತ್ವವಹಿಸಿದ್ದರು. ನಟರಾಜ್, ಶ್ರೀಧರ್, ಮಹದೇವ್, ಮುನಿಯಪ್ಪ, ಮಂಜುನಾಥ್, ಶ್ರೀರಾಮ್, ಶ್ರೀನಿವಾಸ್, ಮುರಳಿ ವೆಂಕಟರಾಮ್, ಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>