ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿಯಿಂದ ರಕ್ತದಾನ ಶಿಬಿರ

Last Updated 27 ಸೆಪ್ಟೆಂಬರ್ 2021, 5:44 IST
ಅಕ್ಷರ ಗಾತ್ರ

ಬಂಗಾರಪೇಟೆ: ‘ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಿರ್ಣಯಗಳು ದೇಶದ ಅಭಿವೃದ್ಧಿ ಹಾಗೂ ಹಿತರಕ್ಷಣೆಗೆ ಪೂರಕವಾಗಿದ್ದು, ವಿಶ್ವದ ಗಮನ ಸೆಳೆದಿವೆ’ ಎಂದು ಮಾಜಿ ಶಾಸಕ ಬಿ.ಪಿ. ವೆಂಕಟಮುನಿಯಪ್ಪ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಕಾಮಸಮುದ್ರದಲ್ಲಿ ಬಿಜೆಪಿ ಘಟಕ, ಕಾಮಸಮುದ್ರ ಹೋಬಳಿ ಮಹಾಶಕ್ತಿ ಕೇಂದ್ರದಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಮಾತನಾಡಿ, ಮೋದಿ ಶಕ್ತಿಯನ್ನು ನೆಚ್ಚಿಕೊಂಡಿರುವ ಯುವಶಕ್ತಿ ಬಿಜೆಪಿಯತ್ತ ವಾಲುತ್ತಿದೆ ಎಂದರು.

‘ಆರೋಗ್ಯವಾಗಿರುವ ಪ್ರತಿ ಯೊಬ್ಬರೂ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು’ ಎಂದು ಬಿಜೆಪಿ ಜಿಲ್ಲಾ ಘಟಕ ಉಪಾಧ್ಯಕ್ಷ ಬಿ.ವಿ. ಮಹೇಶ್ ಹೇಳಿದರು.

ಬತ್ತಲಹಳ್ಳಿ ಮಂಜುನಾಥ್, ಮಂಡಲ ಕಾರ್ಯದರ್ಶಿ ಪಾರ್ಥಸಾರಥಿ, ಮುಖಂಡರಾದ ವೆಂಕಟೇಶ್, ತಿಪ್ಪರೆಡ್ಡಿ, ಮಂಜುನಾಥ್, ಕೃಷ್ಣಪ್ಪ, ಬಾಬುಗೌಡ ಶಿಬಿರದ ನೇತೃತ್ವವಹಿಸಿದ್ದರು. ನಟರಾಜ್, ಶ್ರೀಧರ್, ಮಹದೇವ್, ಮುನಿಯಪ್ಪ, ಮಂಜುನಾಥ್, ಶ್ರೀರಾಮ್, ಶ್ರೀನಿವಾಸ್, ಮುರಳಿ ವೆಂಕಟರಾಮ್, ಕೃಷ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT