ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಪ್ರಯುಕ್ತ ಸೆ.17 ರಿಂದ ಅ.2 ರವರೆಗೆ ಸೇವಾ ಸಪ್ತಾಹದಡಿ ನಾನಾ ಸೇವಾ ಕಾರ್ಯಕ್ರಮ ಆಯೋಜಿಸಲಾಗಿದೆ. ಸಚಿವರಾದ ಮುನಿರತ್ನ, ಡಾ.ಕೆ. ಸುಧಾಕರ್, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಂಸದ ತೇಜಸ್ವಿ ಸೂರ್ಯ ಬರಲಿದ್ದಾರೆ. ವಿದ್ಯಾರ್ಥಿಗಳು, ಯುವಕರು, ಸರ್ಕಾರಿ ನೌಕರರು, ಕೋಲಾರ, ನರಸಾಪುರ, ಮಾಲೂರು ಕೈಗಾರಿಕಾ ಪ್ರದೇಶಗಳ ಸಾವಿರಾರು ಕಾರ್ಮಿಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಲು ಮುಂದೆ ಬಂದಿದ್ದಾರೆ’ ಎಂದರು.