<p><strong>ಮುಳಬಾಗಿಲು:</strong> ನಗರದ ಮುತ್ಯಾಲಪೇಟೆಯ ಪೂಲ್ ಚಂದ್ ಲೇಔಟ್ನಲ್ಲಿ 14 ವರ್ಷದ ಬಾಲಕನೊಬ್ಬ ಸೋಮವಾರ ಕಬ್ಬಿಣದ ಸಲಾಕೆಗೆ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಗಿರಿಧರ್ (14) ಆತ್ಮಹತ್ಯೆಗೆ ಶರಣಾದ ಬಾಲಕ. </p>.<p>ಈತನ ತಂಗಿ ಮತ್ತು ತಾಯಿಯೂ ಈ ಹಿಂದೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ತಾಲ್ಲೂಕಿನ ಚಿಕ್ಕನಹಳ್ಳಿಯ ನಿವಾಸಿ ಮುರಳಿ ತನ್ನ ಕುಟುಂಬದೊಂದಿಗೆ ನಗರದಲ್ಲಿ ವಾಸ ಮಾಡುತ್ತಿದ್ದ. ಮೃತ ಬಾಲಕ ನಗರದ ಹೊರವಲಯದ ಶಾಲೆಯೊಂದರಲ್ಲಿ ಎಂಟನೆಯ ತರಗತಿ ಓದುತ್ತಿದ್ದು, ಸೋಮವಾರ ಸಂಜೆ ಎಂದಿನಿಂತೆ ಶಾಲೆಯಿಂದ ಮನೆಗೆ ಬಂದಿದ್ದಾನೆ. ಮನೆಯ ಬಳಿ ಆಟ ಆಡುತ್ತಿದ್ದ ಆತ, ಮನೆಯೊಳಕ್ಕೆ ಹೋಗಿ, ಈ ಹಿಂದೆ ತಾಯಿ ಮತ್ತು ತಂಗಿ ನೇಣು ಬಿಗಿದುಕೊಂಡಿದ್ದ ಚಾವಣಿಯ ಸಲಾಕೆಗೆ ನೇಣು ಬಿಗಿದುಕೊಂಡಿದ್ದಾನೆ. ಆತ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ನಗರದ ಮುತ್ಯಾಲಪೇಟೆಯ ಪೂಲ್ ಚಂದ್ ಲೇಔಟ್ನಲ್ಲಿ 14 ವರ್ಷದ ಬಾಲಕನೊಬ್ಬ ಸೋಮವಾರ ಕಬ್ಬಿಣದ ಸಲಾಕೆಗೆ ವೇಲ್ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. </p>.<p>ಗಿರಿಧರ್ (14) ಆತ್ಮಹತ್ಯೆಗೆ ಶರಣಾದ ಬಾಲಕ. </p>.<p>ಈತನ ತಂಗಿ ಮತ್ತು ತಾಯಿಯೂ ಈ ಹಿಂದೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. </p>.<p>ತಾಲ್ಲೂಕಿನ ಚಿಕ್ಕನಹಳ್ಳಿಯ ನಿವಾಸಿ ಮುರಳಿ ತನ್ನ ಕುಟುಂಬದೊಂದಿಗೆ ನಗರದಲ್ಲಿ ವಾಸ ಮಾಡುತ್ತಿದ್ದ. ಮೃತ ಬಾಲಕ ನಗರದ ಹೊರವಲಯದ ಶಾಲೆಯೊಂದರಲ್ಲಿ ಎಂಟನೆಯ ತರಗತಿ ಓದುತ್ತಿದ್ದು, ಸೋಮವಾರ ಸಂಜೆ ಎಂದಿನಿಂತೆ ಶಾಲೆಯಿಂದ ಮನೆಗೆ ಬಂದಿದ್ದಾನೆ. ಮನೆಯ ಬಳಿ ಆಟ ಆಡುತ್ತಿದ್ದ ಆತ, ಮನೆಯೊಳಕ್ಕೆ ಹೋಗಿ, ಈ ಹಿಂದೆ ತಾಯಿ ಮತ್ತು ತಂಗಿ ನೇಣು ಬಿಗಿದುಕೊಂಡಿದ್ದ ಚಾವಣಿಯ ಸಲಾಕೆಗೆ ನೇಣು ಬಿಗಿದುಕೊಂಡಿದ್ದಾನೆ. ಆತ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>