<p><strong>ಕೋಲಾರ:</strong> ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಶ್ರೀಪ್ರಸನ್ನ ಪಾರ್ವತಿ ಹಾಗೂ ಶ್ರೀಸೋಮನಾಥೇಶ್ವರಸ್ವಾಮಿ ಬ್ರಹ್ಮರಥೋತ್ಸವ ಭಾನುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.</p>.<p>ಭಾರಿ ಗಾತ್ರದ ಹೂವಿನ ಹಾರಗಳಿಂದ ರಥವನ್ನು ಅಲಂಕರಿಸಲಾಗಿತ್ತು. ರಥ ಹೊರಡುತ್ತಿದ್ದಂತೆ ಸಾವಿರಾರು ಭಕ್ತರು ಹಣ್ಣುದವಳದ ಎಲೆ ರಥಕ್ಕೆ ಅರ್ಪಿಸಿದರು.</p>.<p>ದಶಕಗಳ ಹಿಂದೆ ಗ್ರಾಮದ ಜನತೆ ರಥಸಪ್ತಮಿಗೆ ಮೊದಲು ಬೋನು ಇಟ್ಟು ಚಿರತೆ ಹಿಡಿದು ಅದನ್ನು ಗ್ರಾಮದಲ್ಲಿ ಮೆರವಣಿಗೆ ನಡೆಸುವ ಪದ್ಧತಿ ಇತ್ತು. ಆದರೆ, ಅರಣ್ಯ ಇಲಾಖೆ ನಿಬಂಧನೆಗಳ ನಂತರ ಅದನ್ನು ಕೈಬಿಡಲಾಗಿದೆ.</p>.<p>ರಥೋತ್ಸವದ ಅಂಗವಾಗಿ ಗ್ರಾಮದ ಸಮುದಾಯ ಭವನದಲ್ಲಿ ಸಾವಿರಾರು ಮಂದಿಗೆ ಅನ್ನಸಂತರ್ಪಣೆ ನಡೆಯಿತು. ದಾರಿಯುದ್ದಕ್ಕೂ ಹಲವರು ಪಾನಕ, ಮಜ್ಜಿಗೆ, ಹೆಸರುಬೇಳೆ ವಿನಿಯೋಗದಲ್ಲಿ ನಿರತರಾಗಿದ್ದರು.</p>.<p>ತಾಲ್ಲೂಕು ಹಾಗೂ ಸುತ್ತಮುತ್ತಲ ವಿವಿಧ ಗ್ರಾಮಗಳಿಂದ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದರು. ಇಡೀ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿತ್ತು. ದೇವಾಲಯಗಳ ಊರು ಎಂದೇ ಖ್ಯಾತವಾದ ಅರಾಭಿಕೊತ್ತನೂರಿನ ಎಲ್ಲಾ ದೇಗುಲಗಳಲ್ಲೂ ವಿಶೇಷ ಅಲಂಕಾರ, ಪೂಜೆ ನಡೆಯಿತು.</p>.<p>ಸಂಕ್ರಾಂತಿಯನ್ನೇ ಆಚರಿಸದ ಈ ಗ್ರಾಮದ ಜನತೆ ರಥಸಪ್ತಮಿಯ ಈ ರಥೋತ್ಸವಕ್ಕೆ ಹೆಚ್ಚಿನ ಪ್ರಾಮುಖ್ಯ ನೀಡುತ್ತಾರೆ. ಸೋಮನಾಥೇಶ್ವರ ಸ್ವಾಮಿಯ ರಥೋತ್ಸವವನ್ನೇ ವೈಭವದಿಂದ ಆಚರಿಸಿಕೊಂಡು ಬರುತ್ತಿದ್ದಾರೆ.</p>.<p>ಗ್ರಾಮದ ಸೋಮನಾಥೇಶ್ವರ ಸ್ವಾಮಿ, ಲಕ್ಷ್ಮಿವೆಂಕಟೇಶ್ವರ ಸ್ವಾಮಿ, ವೀರಭದ್ರಸ್ವಾಮಿ, ಆಂಜನೇಯಸ್ವಾಮಿ, ವಿದ್ಯಾಗಣಪತಿ, ಕರಗದಮ್ಮ, ರೇಣುಕಾ ಯಲ್ಲಮ್ಮ, ಶನೇಶ್ವರಸ್ವಾಮಿ, ಪಟಾಲಮ್ಮ ದೇವಿ, ಕುಂಟಗಂಗಮ್ಮ, ಸಿದ್ದೇಶ್ವರ ಸ್ವಾಮಿ, ಸತ್ಯಮ್ಮದೇವಿ, ಭೀಮೇಶ್ವರಸ್ವಾಮಿ, ಅಯ್ಯಪ್ಪಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ ಅಲಂಕಾರ ಮಾಡಲಾಗಿತ್ತು. ರಾತ್ರಿ ರಸಮಂಜರಿ ಕಾರ್ಯಕ್ರಮ ನಡೆಯಿತು.</p>.<p>ಗ್ರಾಮ ಪಂಚಾಯಿತಿ ಸದಸ್ಯ ನಂಜುಂಡಗೌಡ ಮುಂದಾಳತ್ವ ವಹಿಸಿದ್ದು, ಅಧ್ಯಕ್ಷರು, ಇತರ ಸದಸ್ಯರು, ಸಿಬ್ಬಂದಿ, ಗ್ರಾಮದ ಮುಖಂಡರು ಸೇರಿದಂತೆ ಗ್ರಾಮದ ವಿವಿಧ ಸಮುದಾಯಗಳ ಯುವಕ ಸಂಘಗಳು, ಜನಪ್ರತಿನಿಧಿಗಳು, ಗ್ರಾಮಸ್ಥರು ಅನೇಕರು ಹಾಜರಿದ್ದು, ರಥೋತ್ಸವಕ್ಕೆ ಚಾಲನೆ ನೀಡಿದರು.</p>.<p>ಪ್ರಧಾನ ಅರ್ಚಕರಾದ ವೇದಬ್ರಹ್ಮ ಸತ್ಯಸೋಮಶೇಖರ್ ದೀಕ್ಷಿತ್, ಎಸ್.ಶ್ರೀಧರಮೂರ್ತಿ, ಕೆ.ಎಸ್.ಸುಬ್ರಮಣ್ಯಶಾಸ್ತ್ರಿ, ಶಿಳ್ಳಂಗೆರೆ ನಾರಾಯಣಾಚಾರ್, ವಿ.ಸುಬ್ರಹ್ಮಣ್ಯಂ ಸೇರಿದಂತೆ ಸೋಮನಾಥೇಶ್ವರ ಅಭಿವೃದ್ದಿ ಸಮಿತಿ ಸದಸ್ಯರು, ಅರಾಭಿಕೊತ್ತನೂರು ಚಾರಿಟಬಲ್ ಟ್ರಸ್ಟ್ ಪದಾಧಿಕಾರಿಗಳು, ಗ್ರಾಮಸ್ಥರು ರಥೋತ್ಸವದ ಉಸ್ತುವಾರಿ ವಹಿಸಿದ್ದರು.</p>.<p>ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಇಂಚರ ಗೋವಿಂದರಾಜು, ಎಂ.ಎಲ್.ಅನಿಲ್ ಕುಮಾರ್, ಡಿಐಜಿಪಿ ಡಿ.ದೇವರಾಜ್, ಕೋಚಿಮುಲ್ ನಿರ್ದೇಶಕ ನಾಗರಾಜಪ್ಪ, ತಹಶೀಲ್ದಾರ್ ಡಾ.ನಯನಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ತಾಲ್ಲೂಕಿನ ಅರಾಭಿಕೊತ್ತನೂರು ಗ್ರಾಮದಲ್ಲಿ ಶ್ರೀಪ್ರಸನ್ನ ಪಾರ್ವತಿ ಹಾಗೂ ಶ್ರೀಸೋಮನಾಥೇಶ್ವರಸ್ವಾಮಿ ಬ್ರಹ್ಮರಥೋತ್ಸವ ಭಾನುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.</p>.<p>ಭಾರಿ ಗಾತ್ರದ ಹೂವಿನ ಹಾರಗಳಿಂದ ರಥವನ್ನು ಅಲಂಕರಿಸಲಾಗಿತ್ತು. ರಥ ಹೊರಡುತ್ತಿದ್ದಂತೆ ಸಾವಿರಾರು ಭಕ್ತರು ಹಣ್ಣುದವಳದ ಎಲೆ ರಥಕ್ಕೆ ಅರ್ಪಿಸಿದರು.</p>.<p>ದಶಕಗಳ ಹಿಂದೆ ಗ್ರಾಮದ ಜನತೆ ರಥಸಪ್ತಮಿಗೆ ಮೊದಲು ಬೋನು ಇಟ್ಟು ಚಿರತೆ ಹಿಡಿದು ಅದನ್ನು ಗ್ರಾಮದಲ್ಲಿ ಮೆರವಣಿಗೆ ನಡೆಸುವ ಪದ್ಧತಿ ಇತ್ತು. ಆದರೆ, ಅರಣ್ಯ ಇಲಾಖೆ ನಿಬಂಧನೆಗಳ ನಂತರ ಅದನ್ನು ಕೈಬಿಡಲಾಗಿದೆ.</p>.<p>ರಥೋತ್ಸವದ ಅಂಗವಾಗಿ ಗ್ರಾಮದ ಸಮುದಾಯ ಭವನದಲ್ಲಿ ಸಾವಿರಾರು ಮಂದಿಗೆ ಅನ್ನಸಂತರ್ಪಣೆ ನಡೆಯಿತು. ದಾರಿಯುದ್ದಕ್ಕೂ ಹಲವರು ಪಾನಕ, ಮಜ್ಜಿಗೆ, ಹೆಸರುಬೇಳೆ ವಿನಿಯೋಗದಲ್ಲಿ ನಿರತರಾಗಿದ್ದರು.</p>.<p>ತಾಲ್ಲೂಕು ಹಾಗೂ ಸುತ್ತಮುತ್ತಲ ವಿವಿಧ ಗ್ರಾಮಗಳಿಂದ ಭಕ್ತರು ಸಹಸ್ರಾರು ಸಂಖ್ಯೆಯಲ್ಲಿ ಸೇರಿದ್ದರು. ಇಡೀ ಗ್ರಾಮದಲ್ಲಿ ಸಂಭ್ರಮ ಮನೆ ಮಾಡಿತ್ತು. ದೇವಾಲಯಗಳ ಊರು ಎಂದೇ ಖ್ಯಾತವಾದ ಅರಾಭಿಕೊತ್ತನೂರಿನ ಎಲ್ಲಾ ದೇಗುಲಗಳಲ್ಲೂ ವಿಶೇಷ ಅಲಂಕಾರ, ಪೂಜೆ ನಡೆಯಿತು.</p>.<p>ಸಂಕ್ರಾಂತಿಯನ್ನೇ ಆಚರಿಸದ ಈ ಗ್ರಾಮದ ಜನತೆ ರಥಸಪ್ತಮಿಯ ಈ ರಥೋತ್ಸವಕ್ಕೆ ಹೆಚ್ಚಿನ ಪ್ರಾಮುಖ್ಯ ನೀಡುತ್ತಾರೆ. ಸೋಮನಾಥೇಶ್ವರ ಸ್ವಾಮಿಯ ರಥೋತ್ಸವವನ್ನೇ ವೈಭವದಿಂದ ಆಚರಿಸಿಕೊಂಡು ಬರುತ್ತಿದ್ದಾರೆ.</p>.<p>ಗ್ರಾಮದ ಸೋಮನಾಥೇಶ್ವರ ಸ್ವಾಮಿ, ಲಕ್ಷ್ಮಿವೆಂಕಟೇಶ್ವರ ಸ್ವಾಮಿ, ವೀರಭದ್ರಸ್ವಾಮಿ, ಆಂಜನೇಯಸ್ವಾಮಿ, ವಿದ್ಯಾಗಣಪತಿ, ಕರಗದಮ್ಮ, ರೇಣುಕಾ ಯಲ್ಲಮ್ಮ, ಶನೇಶ್ವರಸ್ವಾಮಿ, ಪಟಾಲಮ್ಮ ದೇವಿ, ಕುಂಟಗಂಗಮ್ಮ, ಸಿದ್ದೇಶ್ವರ ಸ್ವಾಮಿ, ಸತ್ಯಮ್ಮದೇವಿ, ಭೀಮೇಶ್ವರಸ್ವಾಮಿ, ಅಯ್ಯಪ್ಪಸ್ವಾಮಿ ದೇವಾಲಯಗಳಲ್ಲಿ ವಿಶೇಷ ಪೂಜೆ ಅಲಂಕಾರ ಮಾಡಲಾಗಿತ್ತು. ರಾತ್ರಿ ರಸಮಂಜರಿ ಕಾರ್ಯಕ್ರಮ ನಡೆಯಿತು.</p>.<p>ಗ್ರಾಮ ಪಂಚಾಯಿತಿ ಸದಸ್ಯ ನಂಜುಂಡಗೌಡ ಮುಂದಾಳತ್ವ ವಹಿಸಿದ್ದು, ಅಧ್ಯಕ್ಷರು, ಇತರ ಸದಸ್ಯರು, ಸಿಬ್ಬಂದಿ, ಗ್ರಾಮದ ಮುಖಂಡರು ಸೇರಿದಂತೆ ಗ್ರಾಮದ ವಿವಿಧ ಸಮುದಾಯಗಳ ಯುವಕ ಸಂಘಗಳು, ಜನಪ್ರತಿನಿಧಿಗಳು, ಗ್ರಾಮಸ್ಥರು ಅನೇಕರು ಹಾಜರಿದ್ದು, ರಥೋತ್ಸವಕ್ಕೆ ಚಾಲನೆ ನೀಡಿದರು.</p>.<p>ಪ್ರಧಾನ ಅರ್ಚಕರಾದ ವೇದಬ್ರಹ್ಮ ಸತ್ಯಸೋಮಶೇಖರ್ ದೀಕ್ಷಿತ್, ಎಸ್.ಶ್ರೀಧರಮೂರ್ತಿ, ಕೆ.ಎಸ್.ಸುಬ್ರಮಣ್ಯಶಾಸ್ತ್ರಿ, ಶಿಳ್ಳಂಗೆರೆ ನಾರಾಯಣಾಚಾರ್, ವಿ.ಸುಬ್ರಹ್ಮಣ್ಯಂ ಸೇರಿದಂತೆ ಸೋಮನಾಥೇಶ್ವರ ಅಭಿವೃದ್ದಿ ಸಮಿತಿ ಸದಸ್ಯರು, ಅರಾಭಿಕೊತ್ತನೂರು ಚಾರಿಟಬಲ್ ಟ್ರಸ್ಟ್ ಪದಾಧಿಕಾರಿಗಳು, ಗ್ರಾಮಸ್ಥರು ರಥೋತ್ಸವದ ಉಸ್ತುವಾರಿ ವಹಿಸಿದ್ದರು.</p>.<p>ಶಾಸಕ ಕೊತ್ತೂರು ಮಂಜುನಾಥ್, ವಿಧಾನ ಪರಿಷತ್ ಸದಸ್ಯರಾದ ಇಂಚರ ಗೋವಿಂದರಾಜು, ಎಂ.ಎಲ್.ಅನಿಲ್ ಕುಮಾರ್, ಡಿಐಜಿಪಿ ಡಿ.ದೇವರಾಜ್, ಕೋಚಿಮುಲ್ ನಿರ್ದೇಶಕ ನಾಗರಾಜಪ್ಪ, ತಹಶೀಲ್ದಾರ್ ಡಾ.ನಯನಾ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>